Header Include

Kannada translation - Hamza Butur

Translated by Muhammad Hamza Batur and developed under the supervision of Rowwad Translation Center

QR Code https://quran.islamcontent.com/ceb/kannada_hamza

قٓۚ وَٱلۡقُرۡءَانِ ٱلۡمَجِيدِ

ಕ್ವಾಫ್. ಈ ಮಹತ್ವಪೂರ್ಣ ಕುರ್‌ಆನಿನ ಮೇಲಾಣೆ.

ಕ್ವಾಫ್. ಈ ಮಹತ್ವಪೂರ್ಣ ಕುರ್‌ಆನಿನ ಮೇಲಾಣೆ.

بَلۡ عَجِبُوٓاْ أَن جَآءَهُم مُّنذِرٞ مِّنۡهُمۡ فَقَالَ ٱلۡكَٰفِرُونَ هَٰذَا شَيۡءٌ عَجِيبٌ

ಅವರಿಂದಲೇ ಅವರಿಗೆ ಒಬ್ಬ ಮುನ್ನೆಚ್ಚರಿಕೆಗಾರ (ಪ್ರವಾದಿ) ಬಂದಿರುವುದನ್ನು ಕಂಡು ಅವರು ಆಶ್ಚರ್ಯಪಡುತ್ತಾರೆ. ಸತ್ಯನಿಷೇಧಿಗಳು ಹೇಳುತ್ತಾರೆ: “ಇದೊಂದು ಆಶ್ಚರ್ಯಕರ ಸಂಗತಿಯಾಗಿದೆ.

ಅವರಿಂದಲೇ ಅವರಿಗೆ ಒಬ್ಬ ಮುನ್ನೆಚ್ಚರಿಕೆಗಾರ (ಪ್ರವಾದಿ) ಬಂದಿರುವುದನ್ನು ಕಂಡು ಅವರು ಆಶ್ಚರ್ಯಪಡುತ್ತಾರೆ. ಸತ್ಯನಿಷೇಧಿಗಳು ಹೇಳುತ್ತಾರೆ: “ಇದೊಂದು ಆಶ್ಚರ್ಯಕರ ಸಂಗತಿಯಾಗಿದೆ.

أَءِذَا مِتۡنَا وَكُنَّا تُرَابٗاۖ ذَٰلِكَ رَجۡعُۢ بَعِيدٞ

ನಾವು ಸತ್ತು ಮಣ್ಣಾಗಿ ಬಿಟ್ಟ ಬಳಿಕ (ಪುನಃ ಜೀವ ಪಡೆಯುವೆವೇ)? ಈ ಮರಳುವಿಕೆ ಬಹಳ ದೂರದ (ಅಸಂಭವ್ಯ) ಸಂಗತಿಯಾಗಿದೆ.”

ನಾವು ಸತ್ತು ಮಣ್ಣಾಗಿ ಬಿಟ್ಟ ಬಳಿಕ (ಪುನಃ ಜೀವ ಪಡೆಯುವೆವೇ)? ಈ ಮರಳುವಿಕೆ ಬಹಳ ದೂರದ (ಅಸಂಭವ್ಯ) ಸಂಗತಿಯಾಗಿದೆ.”

قَدۡ عَلِمۡنَا مَا تَنقُصُ ٱلۡأَرۡضُ مِنۡهُمۡۖ وَعِندَنَا كِتَٰبٌ حَفِيظُۢ

ನಿಶ್ಚಯವಾಗಿಯೂ ಭೂಮಿಯು ಅವರಿಂದ ಏನನ್ನು ಕಡಿಮೆ ಮಾಡುತ್ತಿದೆಯೆಂದು ನಮಗೆ ತಿಳಿದಿದೆ. ನಮ್ಮ ಬಳಿ ಎಲ್ಲವನ್ನೂ ನೆನಪಿಡುವ ಒಂದು ಗ್ರಂಥವಿದೆ.[1]

[1] ಮನುಷ್ಯನು ಸಮಾಧಿಗೆ ಸೇರಿದ ಬಳಿಕ ಅವನ ಮಾಂಸ ಮತ್ತು ಮೂಳೆಗಳನ್ನು ಭೂಮಿ ತಿನ್ನುತ್ತದೆ. ಅಂದರೆ ಅವನು ಭೂಮಿಯಲ್ಲಿ ಜೀರ್ಣವಾಗಿ ಬಿಡುತ್ತಾನೆ. ಅವನ ಮಾಂಸ, ಮೂಳೆಗಳು ಸೇರಿದಂತೆ ದೇಹದ ವಿವಿಧ ಭಾಗಗಳನ್ನು ಭೂಮಿ ತಿನ್ನುವುದನ್ನು ಅಲ್ಲಾಹು ತಿಳಿಯುತ್ತಾನೆ. ಅವೆಲ್ಲವೂ ಒಂದು ಗ್ರಂಥದಲ್ಲಿ ದಾಖಲಾಗಿರುತ್ತದೆ. ಆದ್ದರಿಂದ ಅವನನ್ನು ಪುನಃ ಸೃಷ್ಟಿಸುವುದು ಅಲ್ಲಾಹನಿಗೆ ಕಷ್ಟವೇ ಅಲ್ಲ.
ನಿಶ್ಚಯವಾಗಿಯೂ ಭೂಮಿಯು ಅವರಿಂದ ಏನನ್ನು ಕಡಿಮೆ ಮಾಡುತ್ತಿದೆಯೆಂದು ನಮಗೆ ತಿಳಿದಿದೆ. ನಮ್ಮ ಬಳಿ ಎಲ್ಲವನ್ನೂ ನೆನಪಿಡುವ ಒಂದು ಗ್ರಂಥವಿದೆ.[1]

بَلۡ كَذَّبُواْ بِٱلۡحَقِّ لَمَّا جَآءَهُمۡ فَهُمۡ فِيٓ أَمۡرٖ مَّرِيجٍ

ವಾಸ್ತವವಾಗಿ, ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದ್ದರಿಂದ ಅವರು ಗೊಂದಲಪೂರ್ಣ (ಅನಿಶ್ಚಿತ) ಸ್ಥಿತಿಯಲ್ಲಿದ್ದಾರೆ.

ವಾಸ್ತವವಾಗಿ, ಸತ್ಯವು ಅವರ ಬಳಿಗೆ ಬಂದಾಗ ಅವರು ಅದನ್ನು ನಿಷೇಧಿಸಿದರು. ಆದ್ದರಿಂದ ಅವರು ಗೊಂದಲಪೂರ್ಣ (ಅನಿಶ್ಚಿತ) ಸ್ಥಿತಿಯಲ್ಲಿದ್ದಾರೆ.

أَفَلَمۡ يَنظُرُوٓاْ إِلَى ٱلسَّمَآءِ فَوۡقَهُمۡ كَيۡفَ بَنَيۡنَٰهَا وَزَيَّنَّٰهَا وَمَا لَهَا مِن فُرُوجٖ

ಅವರ ಮೇಲ್ಭಾಗದಲ್ಲಿರುವ ಆಕಾಶವನ್ನು ಅವರು ನೋಡುವುದಿಲ್ಲವೇ? ನಾವು ಅದನ್ನು ಹೇಗೆ ನಿರ್ಮಿಸಿದೆವು ಮತ್ತು ಅಲಂಕರಿಸಿದೆವು ಎಂದು? ಅದರಲ್ಲಿ ಯಾವುದೇ ಬಿರುಕುಗಳಿಲ್ಲ.

ಅವರ ಮೇಲ್ಭಾಗದಲ್ಲಿರುವ ಆಕಾಶವನ್ನು ಅವರು ನೋಡುವುದಿಲ್ಲವೇ? ನಾವು ಅದನ್ನು ಹೇಗೆ ನಿರ್ಮಿಸಿದೆವು ಮತ್ತು ಅಲಂಕರಿಸಿದೆವು ಎಂದು? ಅದರಲ್ಲಿ ಯಾವುದೇ ಬಿರುಕುಗಳಿಲ್ಲ.

وَٱلۡأَرۡضَ مَدَدۡنَٰهَا وَأَلۡقَيۡنَا فِيهَا رَوَٰسِيَ وَأَنۢبَتۡنَا فِيهَا مِن كُلِّ زَوۡجِۭ بَهِيجٖ

ನಾವು ಭೂಮಿಯನ್ನು ಹರಡಿಸಿದೆವು ಮತ್ತು ಅದರಲ್ಲಿ ಪರ್ವತಗಳನ್ನು ಸ್ಥಾಪಿಸಿದೆವು. ನಾವು ಅದರಲ್ಲಿ ಎಲ್ಲಾ ವಿಧಗಳ ಸುಂದರ ವಸ್ತುಗಳನ್ನು ಬೆಳೆಸಿದೆವು.

ನಾವು ಭೂಮಿಯನ್ನು ಹರಡಿಸಿದೆವು ಮತ್ತು ಅದರಲ್ಲಿ ಪರ್ವತಗಳನ್ನು ಸ್ಥಾಪಿಸಿದೆವು. ನಾವು ಅದರಲ್ಲಿ ಎಲ್ಲಾ ವಿಧಗಳ ಸುಂದರ ವಸ್ತುಗಳನ್ನು ಬೆಳೆಸಿದೆವು.

تَبۡصِرَةٗ وَذِكۡرَىٰ لِكُلِّ عَبۡدٖ مُّنِيبٖ

(ಅಲ್ಲಾಹನ ಕಡೆಗೆ ಮರಳುವ) ಪ್ರತಿಯೊಬ್ಬ ದಾಸನಿಗೂ ಅಂತರ್ದೃಷ್ಟಿ ಮತ್ತು ಉಪದೇಶದ ರೂಪದಲ್ಲಿ.

(ಅಲ್ಲಾಹನ ಕಡೆಗೆ ಮರಳುವ) ಪ್ರತಿಯೊಬ್ಬ ದಾಸನಿಗೂ ಅಂತರ್ದೃಷ್ಟಿ ಮತ್ತು ಉಪದೇಶದ ರೂಪದಲ್ಲಿ.

وَنَزَّلۡنَا مِنَ ٱلسَّمَآءِ مَآءٗ مُّبَٰرَكٗا فَأَنۢبَتۡنَا بِهِۦ جَنَّٰتٖ وَحَبَّ ٱلۡحَصِيدِ

ನಾವು ಆಕಾಶದಿಂದ ಸಮೃದ್ಧವಾದ ಮಳೆಯನ್ನು ಸುರಿಸಿದೆವು. ಅದರ ಮೂಲಕ ತೋಟಗಳನ್ನು ಮತ್ತು ಕಟಾವು ಮಾಡುವ ಧಾನ್ಯಗಳನ್ನು ಬೆಳೆಸಿದೆವು.

ನಾವು ಆಕಾಶದಿಂದ ಸಮೃದ್ಧವಾದ ಮಳೆಯನ್ನು ಸುರಿಸಿದೆವು. ಅದರ ಮೂಲಕ ತೋಟಗಳನ್ನು ಮತ್ತು ಕಟಾವು ಮಾಡುವ ಧಾನ್ಯಗಳನ್ನು ಬೆಳೆಸಿದೆವು.

وَٱلنَّخۡلَ بَاسِقَٰتٖ لَّهَا طَلۡعٞ نَّضِيدٞ

ಮತ್ತು ಪದರ ಪದರ ಗೊನೆಗಳಿರುವ ಎತ್ತರವಾದ ಖರ್ಜೂರದ ಮರಗಳನ್ನು (ಬೆಳೆಸಿದೆವು)

ಮತ್ತು ಪದರ ಪದರ ಗೊನೆಗಳಿರುವ ಎತ್ತರವಾದ ಖರ್ಜೂರದ ಮರಗಳನ್ನು (ಬೆಳೆಸಿದೆವು)

رِّزۡقٗا لِّلۡعِبَادِۖ وَأَحۡيَيۡنَا بِهِۦ بَلۡدَةٗ مَّيۡتٗاۚ كَذَٰلِكَ ٱلۡخُرُوجُ

ದಾಸರ ಉಪಜೀವನಕ್ಕಾಗಿ. ನಾವು ಅದರಿಂದ (ಆ ನೀರಿನಿಂದ) ನಿರ್ಜೀವವಾಗಿದ್ದ ಪ್ರದೇಶಕ್ಕೆ ಜೀವವನ್ನು ನೀಡಿದೆವು. ಇದೇ ರೀತಿ (ಸಮಾಧಿಗಳಿಂದ ನಿಮ್ಮನ್ನು) ಹೊರತೆಗೆಯಲಾಗುವುದು.

ದಾಸರ ಉಪಜೀವನಕ್ಕಾಗಿ. ನಾವು ಅದರಿಂದ (ಆ ನೀರಿನಿಂದ) ನಿರ್ಜೀವವಾಗಿದ್ದ ಪ್ರದೇಶಕ್ಕೆ ಜೀವವನ್ನು ನೀಡಿದೆವು. ಇದೇ ರೀತಿ (ಸಮಾಧಿಗಳಿಂದ ನಿಮ್ಮನ್ನು) ಹೊರತೆಗೆಯಲಾಗುವುದು.

كَذَّبَتۡ قَبۡلَهُمۡ قَوۡمُ نُوحٖ وَأَصۡحَٰبُ ٱلرَّسِّ وَثَمُودُ

ಇವರಿಗಿಂತ ಮೊದಲು ನೂಹರ ಜನತೆ, ರಸ್ಸ್‌ನ ಜನರು ಮತ್ತು ಸಮೂದ್ ಗೋತ್ರದವರು ಸತ್ಯವನ್ನು ನಿಷೇಧಿಸಿದರು.

ಇವರಿಗಿಂತ ಮೊದಲು ನೂಹರ ಜನತೆ, ರಸ್ಸ್‌ನ ಜನರು ಮತ್ತು ಸಮೂದ್ ಗೋತ್ರದವರು ಸತ್ಯವನ್ನು ನಿಷೇಧಿಸಿದರು.

وَعَادٞ وَفِرۡعَوۡنُ وَإِخۡوَٰنُ لُوطٖ

ಆದ್ ಗೋತ್ರದವರು, ಫರೋಹ ಮತ್ತು ಲೂತರ ಸಹೋದರರು (ಜನರು) ಕೂಡ.

ಆದ್ ಗೋತ್ರದವರು, ಫರೋಹ ಮತ್ತು ಲೂತರ ಸಹೋದರರು (ಜನರು) ಕೂಡ.

وَأَصۡحَٰبُ ٱلۡأَيۡكَةِ وَقَوۡمُ تُبَّعٖۚ كُلّٞ كَذَّبَ ٱلرُّسُلَ فَحَقَّ وَعِيدِ

ಐಕತ್‌ನ ಜನರು ಮತ್ತು ತುಬ್ಬಅ್‌ನ ಜನರು ಕೂಡ. ಅವರೆಲ್ಲರೂ ಸಂದೇಶವಾಹಕರುಗಳನ್ನು ನಿಷೇಧಿಸಿದರು. ಆದ್ದರಿಂದ ಅವರ ಮೇಲೆ ನನ್ನ ವಾಗ್ದಾನವು ಖಾತ್ರಿಯಾಗಿ ಬಿಟ್ಟಿತು.

ಐಕತ್‌ನ ಜನರು ಮತ್ತು ತುಬ್ಬಅ್‌ನ ಜನರು ಕೂಡ. ಅವರೆಲ್ಲರೂ ಸಂದೇಶವಾಹಕರುಗಳನ್ನು ನಿಷೇಧಿಸಿದರು. ಆದ್ದರಿಂದ ಅವರ ಮೇಲೆ ನನ್ನ ವಾಗ್ದಾನವು ಖಾತ್ರಿಯಾಗಿ ಬಿಟ್ಟಿತು.

أَفَعَيِينَا بِٱلۡخَلۡقِ ٱلۡأَوَّلِۚ بَلۡ هُمۡ فِي لَبۡسٖ مِّنۡ خَلۡقٖ جَدِيدٖ

ನಾವು ಪ್ರಥಮ ಬಾರಿ ಸೃಷ್ಟಿಸಿದಾಗಲೇ ಸುಸ್ತಾದೆವೇ? ಅಲ್ಲ, ವಾಸ್ತವವಾಗಿ ಅವರು ಹೊಸ ಸೃಷ್ಟಿಯ ಬಗ್ಗೆ ಸಂಶಯಪಡುತ್ತಾರೆ.

ನಾವು ಪ್ರಥಮ ಬಾರಿ ಸೃಷ್ಟಿಸಿದಾಗಲೇ ಸುಸ್ತಾದೆವೇ? ಅಲ್ಲ, ವಾಸ್ತವವಾಗಿ ಅವರು ಹೊಸ ಸೃಷ್ಟಿಯ ಬಗ್ಗೆ ಸಂಶಯಪಡುತ್ತಾರೆ.

وَلَقَدۡ خَلَقۡنَا ٱلۡإِنسَٰنَ وَنَعۡلَمُ مَا تُوَسۡوِسُ بِهِۦ نَفۡسُهُۥۖ وَنَحۡنُ أَقۡرَبُ إِلَيۡهِ مِنۡ حَبۡلِ ٱلۡوَرِيدِ

ನಿಶ್ಚಯವಾಗಿಯೂ ನಾವು ಮನುಷ್ಯನನ್ನು ಸೃಷ್ಟಿಸಿದೆವು. ಅವನ ಮನಸ್ಸು ಅವನೊಡನೆ ಪಿಸುಗುಡುವ ಸಂಗತಿಗಳನ್ನು ನಾವು ತಿಳಿಯುತ್ತೇವೆ. ನಾವು ಅವನಿಗೆ ಅವನ ಕಂಠನಾಡಿಗಿಂತಲೂ ಹತ್ತಿರದಲ್ಲಿದ್ದೇವೆ.

ನಿಶ್ಚಯವಾಗಿಯೂ ನಾವು ಮನುಷ್ಯನನ್ನು ಸೃಷ್ಟಿಸಿದೆವು. ಅವನ ಮನಸ್ಸು ಅವನೊಡನೆ ಪಿಸುಗುಡುವ ಸಂಗತಿಗಳನ್ನು ನಾವು ತಿಳಿಯುತ್ತೇವೆ. ನಾವು ಅವನಿಗೆ ಅವನ ಕಂಠನಾಡಿಗಿಂತಲೂ ಹತ್ತಿರದಲ್ಲಿದ್ದೇವೆ.

إِذۡ يَتَلَقَّى ٱلۡمُتَلَقِّيَانِ عَنِ ٱلۡيَمِينِ وَعَنِ ٱلشِّمَالِ قَعِيدٞ

ಇಬ್ಬರು ಪಡೆಯುವವರು (ಕರ್ಮಗಳನ್ನು ದಾಖಲಿಸುವ ದೇವದೂತರು) ಪಡೆಯುವ ಸಂದರ್ಭ. ಒಬ್ಬರು ಬಲಭಾಗದಲ್ಲಿ ಮತ್ತು ಇನ್ನೊಬ್ಬರು ಎಡಭಾಗದಲ್ಲಿ ಕುಳಿತಿರುವರು.

ಇಬ್ಬರು ಪಡೆಯುವವರು (ಕರ್ಮಗಳನ್ನು ದಾಖಲಿಸುವ ದೇವದೂತರು) ಪಡೆಯುವ ಸಂದರ್ಭ. ಒಬ್ಬರು ಬಲಭಾಗದಲ್ಲಿ ಮತ್ತು ಇನ್ನೊಬ್ಬರು ಎಡಭಾಗದಲ್ಲಿ ಕುಳಿತಿರುವರು.

مَّا يَلۡفِظُ مِن قَوۡلٍ إِلَّا لَدَيۡهِ رَقِيبٌ عَتِيدٞ

ಮನುಷ್ಯನು ಯಾವುದೇ ಮಾತನ್ನೂ ಹೇಳಲಾರನು—ಅವನ ಬಳಿ ಒಬ್ಬ ವೀಕ್ಷಕನು (ಅದನ್ನು ದಾಖಲಿಸಲು) ಸಿದ್ಧವಾಗಿರದ ಹೊರತು.

ಮನುಷ್ಯನು ಯಾವುದೇ ಮಾತನ್ನೂ ಹೇಳಲಾರನು—ಅವನ ಬಳಿ ಒಬ್ಬ ವೀಕ್ಷಕನು (ಅದನ್ನು ದಾಖಲಿಸಲು) ಸಿದ್ಧವಾಗಿರದ ಹೊರತು.

وَجَآءَتۡ سَكۡرَةُ ٱلۡمَوۡتِ بِٱلۡحَقِّۖ ذَٰلِكَ مَا كُنتَ مِنۡهُ تَحِيدُ

ಮರಣದ ಕಡು ಯಾತನೆಯು ಸತ್ಯದೊಂದಿಗೆ ಬರುವುದು. ಯಾವುದರಿಂದ ನೀನು ದೂರವಾಗಲು ಪ್ರಯತ್ನಿಸುತ್ತಿದ್ದೆಯೋ ಅದೇ ಇದು.

ಮರಣದ ಕಡು ಯಾತನೆಯು ಸತ್ಯದೊಂದಿಗೆ ಬರುವುದು. ಯಾವುದರಿಂದ ನೀನು ದೂರವಾಗಲು ಪ್ರಯತ್ನಿಸುತ್ತಿದ್ದೆಯೋ ಅದೇ ಇದು.

وَنُفِخَ فِي ٱلصُّورِۚ ذَٰلِكَ يَوۡمُ ٱلۡوَعِيدِ

ಕಹಳೆಯಲ್ಲಿ ಊದಲಾಗುವುದು. ಅದು ಎಚ್ಚರಿಕೆಯ ದಿನವಾಗಿದೆ.

ಕಹಳೆಯಲ್ಲಿ ಊದಲಾಗುವುದು. ಅದು ಎಚ್ಚರಿಕೆಯ ದಿನವಾಗಿದೆ.

وَجَآءَتۡ كُلُّ نَفۡسٖ مَّعَهَا سَآئِقٞ وَشَهِيدٞ

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೊತೆಗೆ ಒಬ್ಬ ಸಾಗಾಟಗಾರ ಮತ್ತು ಸಾಕ್ಷಿಯನ್ನು ಹೊಂದಿರುವ ಸ್ಥಿತಿಯಲ್ಲಿ ಬರುವರು.[1]

[1] ಪ್ರತಿಯೊಬ್ಬ ಮನುಷ್ಯನ ಜೊತೆಗೆ ಅವನನ್ನು ವಿಚಾರಣಾ ಸ್ಥಳಕ್ಕೆ ಸಾಗಿಸುವ ಒಬ್ಬ ದೇವದೂತ ಮತ್ತು ಅವನ ಕರ್ಮಗಳಿಗೆ ಸಾಕ್ಷಿ ನುಡಿಯುವ ಒಬ್ಬ ದೇವದೂತ ಇರಲಿದ್ದಾರೆ.
ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಜೊತೆಗೆ ಒಬ್ಬ ಸಾಗಾಟಗಾರ ಮತ್ತು ಸಾಕ್ಷಿಯನ್ನು ಹೊಂದಿರುವ ಸ್ಥಿತಿಯಲ್ಲಿ ಬರುವರು.[1]

لَّقَدۡ كُنتَ فِي غَفۡلَةٖ مِّنۡ هَٰذَا فَكَشَفۡنَا عَنكَ غِطَآءَكَ فَبَصَرُكَ ٱلۡيَوۡمَ حَدِيدٞ

“ನಿಶ್ಚಯವಾಗಿಯೂ ನೀನು ಇದನ್ನು ನಿರ್ಲಕ್ಷಿಸಿದ್ದೆ. ಆದರೆ ನಾವು ನಿನ್ನ ಮುಂಭಾಗದಿಂದ ಪರದೆಯನ್ನು ನಿವಾರಿಸಿದ್ದೇವೆ. ಆದ್ದರಿಂದ ಇಂದು ನಿನ್ನ ದೃಷ್ಟಿಯು ಬಹಳ ಹರಿತವಾಗಿದೆ.”

“ನಿಶ್ಚಯವಾಗಿಯೂ ನೀನು ಇದನ್ನು ನಿರ್ಲಕ್ಷಿಸಿದ್ದೆ. ಆದರೆ ನಾವು ನಿನ್ನ ಮುಂಭಾಗದಿಂದ ಪರದೆಯನ್ನು ನಿವಾರಿಸಿದ್ದೇವೆ. ಆದ್ದರಿಂದ ಇಂದು ನಿನ್ನ ದೃಷ್ಟಿಯು ಬಹಳ ಹರಿತವಾಗಿದೆ.”

وَقَالَ قَرِينُهُۥ هَٰذَا مَا لَدَيَّ عَتِيدٌ

ಅವನ ಜೊತೆಗಾರನು (ದೇವದೂತ) ಹೇಳುವನು: “ನನ್ನ ಬಳಿಯಿರುವ ಇದು (ದಾಖಲೆ) ಸಿದ್ಧವಾಗಿದೆ.”

ಅವನ ಜೊತೆಗಾರನು (ದೇವದೂತ) ಹೇಳುವನು: “ನನ್ನ ಬಳಿಯಿರುವ ಇದು (ದಾಖಲೆ) ಸಿದ್ಧವಾಗಿದೆ.”

أَلۡقِيَا فِي جَهَنَّمَ كُلَّ كَفَّارٍ عَنِيدٖ

(ಅಲ್ಲಾಹು ಆಜ್ಞಾಪಿಸುವನು): “ಅವನನ್ನು ನರಕಕ್ಕೆ ಎಸೆದು ಬಿಡಿ—ಪ್ರತಿಯೊಬ್ಬ ಸತ್ಯನಿಷೇಧಿ ದುಷ್ಕರ್ಮಿಯನ್ನು.

(ಅಲ್ಲಾಹು ಆಜ್ಞಾಪಿಸುವನು): “ಅವನನ್ನು ನರಕಕ್ಕೆ ಎಸೆದು ಬಿಡಿ—ಪ್ರತಿಯೊಬ್ಬ ಸತ್ಯನಿಷೇಧಿ ದುಷ್ಕರ್ಮಿಯನ್ನು.

مَّنَّاعٖ لِّلۡخَيۡرِ مُعۡتَدٖ مُّرِيبٍ

ಒಳಿತನ್ನು ತಡೆಯುವ ಅತಿರೇಕಿ ಸಂಶಯಪಿಶಾಚಿಯನ್ನು.

ಒಳಿತನ್ನು ತಡೆಯುವ ಅತಿರೇಕಿ ಸಂಶಯಪಿಶಾಚಿಯನ್ನು.

ٱلَّذِي جَعَلَ مَعَ ٱللَّهِ إِلَٰهًا ءَاخَرَ فَأَلۡقِيَاهُ فِي ٱلۡعَذَابِ ٱلشَّدِيدِ

ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ನಿಶ್ಚಯಿಸಿದವನನ್ನು. ಅವನನ್ನು ಕಠೋರ ಶಿಕ್ಷೆಗೆ ಎಸೆದುಬಿಡಿ.”

ಅಲ್ಲಾಹನೊಂದಿಗೆ ಬೇರೆ ದೇವರುಗಳನ್ನು ನಿಶ್ಚಯಿಸಿದವನನ್ನು. ಅವನನ್ನು ಕಠೋರ ಶಿಕ್ಷೆಗೆ ಎಸೆದುಬಿಡಿ.”

۞ قَالَ قَرِينُهُۥ رَبَّنَا مَآ أَطۡغَيۡتُهُۥ وَلَٰكِن كَانَ فِي ضَلَٰلِۭ بَعِيدٖ

ಅವನ ಜೊತೆಗಾರನು[1] ಹೇಳುವನು: “ನಮ್ಮ ಪರಿಪಾಲಕನೇ! ನಾನು ಅವನನ್ನು ದಾರಿತಪ್ಪಿಸಿಲ್ಲ. ಬದಲಿಗೆ, ಅವನೇ ವಿದೂರ ದುರ್ಮಾರ್ಗದಲ್ಲಿದ್ದ.”

[1] ಜೊತೆಗಾರನು (ಕರೀನ್) ಎಂದರೆ ಪ್ರತಿಯೊಬ್ಬ ಮನುಷ್ಯನ ಜೊತೆಯಲ್ಲಿರುವ ಶೈತಾನ್.
ಅವನ ಜೊತೆಗಾರನು[1] ಹೇಳುವನು: “ನಮ್ಮ ಪರಿಪಾಲಕನೇ! ನಾನು ಅವನನ್ನು ದಾರಿತಪ್ಪಿಸಿಲ್ಲ. ಬದಲಿಗೆ, ಅವನೇ ವಿದೂರ ದುರ್ಮಾರ್ಗದಲ್ಲಿದ್ದ.”

قَالَ لَا تَخۡتَصِمُواْ لَدَيَّ وَقَدۡ قَدَّمۡتُ إِلَيۡكُم بِٱلۡوَعِيدِ

ಅಲ್ಲಾಹು ಹೇಳುವನು: “ನನ್ನ ಮುಂದೆ ತರ್ಕ ಮಾಡಿಬೇಡಿ. ನಾನು ಈಗಾಗಲೇ ನಿಮ್ಮ ಬಳಿಗೆ ಎಚ್ಚರಿಕೆಯನ್ನು ಕಳುಹಿಸಿದ್ದೇನೆ.

ಅಲ್ಲಾಹು ಹೇಳುವನು: “ನನ್ನ ಮುಂದೆ ತರ್ಕ ಮಾಡಿಬೇಡಿ. ನಾನು ಈಗಾಗಲೇ ನಿಮ್ಮ ಬಳಿಗೆ ಎಚ್ಚರಿಕೆಯನ್ನು ಕಳುಹಿಸಿದ್ದೇನೆ.

مَا يُبَدَّلُ ٱلۡقَوۡلُ لَدَيَّ وَمَآ أَنَا۠ بِظَلَّٰمٖ لِّلۡعَبِيدِ

ನನ್ನ ಬಳಿ ಮಾತು ಬದಲಾಗುವುದಿಲ್ಲ. ನಾನು ದಾಸರಿಗೆ ಸ್ವಲ್ಪವೂ ಅನ್ಯಾಯ ಮಾಡುವವನಲ್ಲ.”

ನನ್ನ ಬಳಿ ಮಾತು ಬದಲಾಗುವುದಿಲ್ಲ. ನಾನು ದಾಸರಿಗೆ ಸ್ವಲ್ಪವೂ ಅನ್ಯಾಯ ಮಾಡುವವನಲ್ಲ.”

يَوۡمَ نَقُولُ لِجَهَنَّمَ هَلِ ٱمۡتَلَأۡتِ وَتَقُولُ هَلۡ مِن مَّزِيدٖ

ನಾವು ನರಕದೊಂದಿಗೆ, “ನೀನು ತುಂಬಿದೆಯಾ?” ಎಂದು ಕೇಳುವ ಸಂದರ್ಭ. ಆಗ ಅದು ಕೇಳುವುದು: “ಹೆಚ್ಚು ಏನಾದರೂ ಇದೆಯೇ?”

ನಾವು ನರಕದೊಂದಿಗೆ, “ನೀನು ತುಂಬಿದೆಯಾ?” ಎಂದು ಕೇಳುವ ಸಂದರ್ಭ. ಆಗ ಅದು ಕೇಳುವುದು: “ಹೆಚ್ಚು ಏನಾದರೂ ಇದೆಯೇ?”

وَأُزۡلِفَتِ ٱلۡجَنَّةُ لِلۡمُتَّقِينَ غَيۡرَ بَعِيدٍ

ಸ್ವರ್ಗವನ್ನು ದೇವಭಯವುಳ್ಳವರ ಹತ್ತಿರಕ್ಕೆ ತರಲಾಗುವುದು. ಅದು ಅವರಿಗೆ ಸ್ವಲ್ಪವೂ ದೂರವಿರಲಾರದು.

ಸ್ವರ್ಗವನ್ನು ದೇವಭಯವುಳ್ಳವರ ಹತ್ತಿರಕ್ಕೆ ತರಲಾಗುವುದು. ಅದು ಅವರಿಗೆ ಸ್ವಲ್ಪವೂ ದೂರವಿರಲಾರದು.

هَٰذَا مَا تُوعَدُونَ لِكُلِّ أَوَّابٍ حَفِيظٖ

“ಇದು ನಿಮಗೆ—ನಿಮ್ಮ ಪೈಕಿ (ಅಲ್ಲಾಹನ ಕಡೆಗೆ ಪಶ್ಚಾತ್ತಪಪಟ್ಟು) ಮರಳುವ ಮತ್ತು (ಅಲ್ಲಾಹು ಕಡ್ಡಾಯಗೊಳಿಸಿದ್ದನ್ನು) ಪಾಲಿಸುವ ಪ್ರತಿಯೊಬ್ಬ ವ್ಯಕ್ತಿಗೆ—ವಾಗ್ದಾನ ಮಾಡಲಾದ ಸಂಗತಿಯಾಗಿದೆ.

“ಇದು ನಿಮಗೆ—ನಿಮ್ಮ ಪೈಕಿ (ಅಲ್ಲಾಹನ ಕಡೆಗೆ ಪಶ್ಚಾತ್ತಪಪಟ್ಟು) ಮರಳುವ ಮತ್ತು (ಅಲ್ಲಾಹು ಕಡ್ಡಾಯಗೊಳಿಸಿದ್ದನ್ನು) ಪಾಲಿಸುವ ಪ್ರತಿಯೊಬ್ಬ ವ್ಯಕ್ತಿಗೆ—ವಾಗ್ದಾನ ಮಾಡಲಾದ ಸಂಗತಿಯಾಗಿದೆ.

مَّنۡ خَشِيَ ٱلرَّحۡمَٰنَ بِٱلۡغَيۡبِ وَجَآءَ بِقَلۡبٖ مُّنِيبٍ

ಅದೃಶ್ಯ ಸ್ಥಿತಿಯಲ್ಲಿ ಪರಮ ದಯಾಮಯನನ್ನು (ಅಲ್ಲಾಹನನ್ನು) ಭಯಪಟ್ಟು (ಅಲ್ಲಾಹನ ಕಡೆಗೆ) ತಿರುಗಿದ ಹೃದಯದೊಂದಿಗೆ ಬಂದವನಿಗೆ.

ಅದೃಶ್ಯ ಸ್ಥಿತಿಯಲ್ಲಿ ಪರಮ ದಯಾಮಯನನ್ನು (ಅಲ್ಲಾಹನನ್ನು) ಭಯಪಟ್ಟು (ಅಲ್ಲಾಹನ ಕಡೆಗೆ) ತಿರುಗಿದ ಹೃದಯದೊಂದಿಗೆ ಬಂದವನಿಗೆ.

ٱدۡخُلُوهَا بِسَلَٰمٖۖ ذَٰلِكَ يَوۡمُ ٱلۡخُلُودِ

ನೀವು ಸುರಕ್ಷಿತವಾಗಿ ಅದನ್ನು (ಸ್ವರ್ಗವನ್ನು) ಪ್ರವೇಶಿಸಿರಿ. ಇದು ಶಾಶ್ವತ ವಾಸದ ದಿನವಾಗಿದೆ.”

ನೀವು ಸುರಕ್ಷಿತವಾಗಿ ಅದನ್ನು (ಸ್ವರ್ಗವನ್ನು) ಪ್ರವೇಶಿಸಿರಿ. ಇದು ಶಾಶ್ವತ ವಾಸದ ದಿನವಾಗಿದೆ.”

لَهُم مَّا يَشَآءُونَ فِيهَا وَلَدَيۡنَا مَزِيدٞ

ಅವರು ಇಚ್ಛಿಸುವುದೆಲ್ಲವೂ ಅಲ್ಲಿ ಅವರಿಗೆ ದೊರೆಯುವುದು. ನಮ್ಮ ಬಳಿ ಇನ್ನೂ ಹೆಚ್ಚಿಗೆಯಿದೆ.

ಅವರು ಇಚ್ಛಿಸುವುದೆಲ್ಲವೂ ಅಲ್ಲಿ ಅವರಿಗೆ ದೊರೆಯುವುದು. ನಮ್ಮ ಬಳಿ ಇನ್ನೂ ಹೆಚ್ಚಿಗೆಯಿದೆ.

وَكَمۡ أَهۡلَكۡنَا قَبۡلَهُم مِّن قَرۡنٍ هُمۡ أَشَدُّ مِنۡهُم بَطۡشٗا فَنَقَّبُواْ فِي ٱلۡبِلَٰدِ هَلۡ مِن مَّحِيصٍ

ಇವರಿಗಿಂತ ಮೊದಲು ನಾವು ಅನೇಕ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಅವರು ಇವರಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದರು. ಅವರು ಊರಿಡೀ ಜಾಲಾಡಿ ನೋಡಿದರು—ಓಡಿ ಪಾರಾಗಲು ಯಾವುದಾದರೂ ಸ್ಥಳವಿದೆಯೇ ಎಂದು!

ಇವರಿಗಿಂತ ಮೊದಲು ನಾವು ಅನೇಕ ತಲೆಮಾರುಗಳನ್ನು ನಾಶ ಮಾಡಿದ್ದೇವೆ. ಅವರು ಇವರಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದರು. ಅವರು ಊರಿಡೀ ಜಾಲಾಡಿ ನೋಡಿದರು—ಓಡಿ ಪಾರಾಗಲು ಯಾವುದಾದರೂ ಸ್ಥಳವಿದೆಯೇ ಎಂದು!

إِنَّ فِي ذَٰلِكَ لَذِكۡرَىٰ لِمَن كَانَ لَهُۥ قَلۡبٌ أَوۡ أَلۡقَى ٱلسَّمۡعَ وَهُوَ شَهِيدٞ

ನಿಶ್ಚಯವಾಗಿಯೂ ಅದರಲ್ಲಿ ನೀತಿಪಾಠವಿದೆ—ಹೃದಯವುಳ್ಳ ವ್ಯಕ್ತಿಗೆ ಅಥವಾ ಹೃದಯ ಸಾನಿಧ್ಯತೆಯಿಂದ ಕಿವಿಗೊಟ್ಟು ಕೇಳುವವನಿಗೆ.

ನಿಶ್ಚಯವಾಗಿಯೂ ಅದರಲ್ಲಿ ನೀತಿಪಾಠವಿದೆ—ಹೃದಯವುಳ್ಳ ವ್ಯಕ್ತಿಗೆ ಅಥವಾ ಹೃದಯ ಸಾನಿಧ್ಯತೆಯಿಂದ ಕಿವಿಗೊಟ್ಟು ಕೇಳುವವನಿಗೆ.

وَلَقَدۡ خَلَقۡنَا ٱلسَّمَٰوَٰتِ وَٱلۡأَرۡضَ وَمَا بَيۡنَهُمَا فِي سِتَّةِ أَيَّامٖ وَمَا مَسَّنَا مِن لُّغُوبٖ

ನಾವು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದೆವು. ಆಯಾಸವು ನಮ್ಮನ್ನು ಸ್ಪರ್ಶಿಸಲೇ ಇಲ್ಲ.

ನಾವು ಭೂಮ್ಯಾಕಾಶಗಳನ್ನು ಮತ್ತು ಅವುಗಳ ನಡುವೆಯಿರುವ ವಸ್ತುಗಳನ್ನು ಆರು ದಿನಗಳಲ್ಲಿ ಸೃಷ್ಟಿಸಿದೆವು. ಆಯಾಸವು ನಮ್ಮನ್ನು ಸ್ಪರ್ಶಿಸಲೇ ಇಲ್ಲ.

فَٱصۡبِرۡ عَلَىٰ مَا يَقُولُونَ وَسَبِّحۡ بِحَمۡدِ رَبِّكَ قَبۡلَ طُلُوعِ ٱلشَّمۡسِ وَقَبۡلَ ٱلۡغُرُوبِ

ಆದ್ದರಿಂದ ಅವರು ಹೇಳುವ ಮಾತುಗಳ ಬಗ್ಗೆ ತಾಳ್ಮೆಯಿಂದಿರಿ. ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತಕ್ಕೆ ಮೊದಲು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವರ ಪರಿಶುದ್ಧಿಯನ್ನು ಕೊಂಡಾಡಿರಿ.

ಆದ್ದರಿಂದ ಅವರು ಹೇಳುವ ಮಾತುಗಳ ಬಗ್ಗೆ ತಾಳ್ಮೆಯಿಂದಿರಿ. ಸೂರ್ಯೋದಯಕ್ಕೆ ಮೊದಲು ಮತ್ತು ಸೂರ್ಯಾಸ್ತಕ್ಕೆ ಮೊದಲು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವರ ಪರಿಶುದ್ಧಿಯನ್ನು ಕೊಂಡಾಡಿರಿ.

وَمِنَ ٱلَّيۡلِ فَسَبِّحۡهُ وَأَدۡبَٰرَ ٱلسُّجُودِ

ರಾತ್ರಿಯ ಸಮಯದಲ್ಲೂ ಮತ್ತು ನಮಾಝ್ ನಿರ್ವಹಿಸಿದ ಬಳಿಕವೂ ಅವನ ಪರಿಶುದ್ಧಿಯನ್ನು ಕೊಂಡಾಡಿರಿ.

ರಾತ್ರಿಯ ಸಮಯದಲ್ಲೂ ಮತ್ತು ನಮಾಝ್ ನಿರ್ವಹಿಸಿದ ಬಳಿಕವೂ ಅವನ ಪರಿಶುದ್ಧಿಯನ್ನು ಕೊಂಡಾಡಿರಿ.

وَٱسۡتَمِعۡ يَوۡمَ يُنَادِ ٱلۡمُنَادِ مِن مَّكَانٖ قَرِيبٖ

ಕಿವಿಗೊಟ್ಟು ಕೇಳಿರಿ. ಕರೆಯುವವನು ಹತ್ತಿರದಲ್ಲೇ ಇರುವ ಒಂದು ಸ್ಥಳದಿಂದ ಕೂಗಿ ಕರೆಯುವ ದಿನ.

ಕಿವಿಗೊಟ್ಟು ಕೇಳಿರಿ. ಕರೆಯುವವನು ಹತ್ತಿರದಲ್ಲೇ ಇರುವ ಒಂದು ಸ್ಥಳದಿಂದ ಕೂಗಿ ಕರೆಯುವ ದಿನ.

يَوۡمَ يَسۡمَعُونَ ٱلصَّيۡحَةَ بِٱلۡحَقِّۚ ذَٰلِكَ يَوۡمُ ٱلۡخُرُوجِ

ಆ ಭಯಾನಕ ಚೀತ್ಕಾರವನ್ನು ಖಾತ್ರಿಯಾಗಿ ಕೇಳುವ ದಿನ! ಅದು ಹೊರಡುವ ದಿನವಾಗಿದೆ.

ಆ ಭಯಾನಕ ಚೀತ್ಕಾರವನ್ನು ಖಾತ್ರಿಯಾಗಿ ಕೇಳುವ ದಿನ! ಅದು ಹೊರಡುವ ದಿನವಾಗಿದೆ.

إِنَّا نَحۡنُ نُحۡيِۦ وَنُمِيتُ وَإِلَيۡنَا ٱلۡمَصِيرُ

ನಿಶ್ಚಯವಾಗಿಯೂ ನಾವು ಜೀವ ಮತ್ತು ಮರಣವನ್ನು ನೀಡುವೆವು. ಗಮ್ಯಸ್ಥಾನವು ನಮ್ಮ ಬಳಿಯೇ ಆಗಿದೆ.

ನಿಶ್ಚಯವಾಗಿಯೂ ನಾವು ಜೀವ ಮತ್ತು ಮರಣವನ್ನು ನೀಡುವೆವು. ಗಮ್ಯಸ್ಥಾನವು ನಮ್ಮ ಬಳಿಯೇ ಆಗಿದೆ.

يَوۡمَ تَشَقَّقُ ٱلۡأَرۡضُ عَنۡهُمۡ سِرَاعٗاۚ ذَٰلِكَ حَشۡرٌ عَلَيۡنَا يَسِيرٞ

ಭೂಮಿಯು ಒಡೆದು ಸೀಳಾಗಿ ಅವರು ತರಾತುರಿಯಿಂದ (ಹೊರಬರುವ) ದಿನ. ಅವರನ್ನು ಒಟ್ಟುಗೂಡಿಸುವುದು ನಮ್ಮ ಮಟ್ಟಿಗೆ ಬಹಳ ಸುಲಭವಾಗಿದೆ.

ಭೂಮಿಯು ಒಡೆದು ಸೀಳಾಗಿ ಅವರು ತರಾತುರಿಯಿಂದ (ಹೊರಬರುವ) ದಿನ. ಅವರನ್ನು ಒಟ್ಟುಗೂಡಿಸುವುದು ನಮ್ಮ ಮಟ್ಟಿಗೆ ಬಹಳ ಸುಲಭವಾಗಿದೆ.

نَّحۡنُ أَعۡلَمُ بِمَا يَقُولُونَۖ وَمَآ أَنتَ عَلَيۡهِم بِجَبَّارٖۖ فَذَكِّرۡ بِٱلۡقُرۡءَانِ مَن يَخَافُ وَعِيدِ

ಅವರು ಏನು ಹೇಳುತ್ತಿದ್ದಾರೆಂದು ನಮಗೆ ಚೆನ್ನಾಗಿ ತಿಳಿದಿದೆ. ನೀವು ಅವರ ಮೇಲೆ ಸರ್ವಾಧಿಕಾರವಿರುವವರಲ್ಲ. ನನ್ನ ಎಚ್ಚರಿಕೆಯನ್ನು ಭಯಪಡುವವರಿಗೆ ಕುರ್‌ಆನ್‍ನ ಮೂಲಕ ಉಪದೇಶವನ್ನು ನೀಡಿರಿ.

ಅವರು ಏನು ಹೇಳುತ್ತಿದ್ದಾರೆಂದು ನಮಗೆ ಚೆನ್ನಾಗಿ ತಿಳಿದಿದೆ. ನೀವು ಅವರ ಮೇಲೆ ಸರ್ವಾಧಿಕಾರವಿರುವವರಲ್ಲ. ನನ್ನ ಎಚ್ಚರಿಕೆಯನ್ನು ಭಯಪಡುವವರಿಗೆ ಕುರ್‌ಆನ್‍ನ ಮೂಲಕ ಉಪದೇಶವನ್ನು ನೀಡಿರಿ.
Footer Include