Die Kannada-Übersetzung - Hamza Batur.
Übersetzung der Bedeutungen des Edlen Korans
Übersetzt von Muhammad Hamza Batur. Die Übersetzung wurde unter der Aufsicht des Rowwad-Übersetzungszentrums entwickelt.
وَٱلۡفَجۡرِ
ಪ್ರಭಾತದ ಮೇಲಾಣೆ!
وَلَيَالٍ عَشۡرٖ
ಹತ್ತು ರಾತ್ರಿಗಳ ಮೇಲಾಣೆ![1]
وَٱلشَّفۡعِ وَٱلۡوَتۡرِ
ಸಮ ಮತ್ತು ಬೆಸಗಳ ಮೇಲಾಣೆ!
وَٱلَّيۡلِ إِذَا يَسۡرِ
ರಾತ್ರಿಯ ಮೇಲಾಣೆ! ಅದು ಚಲಿಸತೊಡಗುವಾಗ.
هَلۡ فِي ذَٰلِكَ قَسَمٞ لِّذِي حِجۡرٍ
ಇವುಗಳಲ್ಲಿ ಬುದ್ಧಿಯಿರುವವನ ಮಟ್ಟಿಗೆ ಪರ್ಯಾಪ್ತ ಆಣೆಯಿದೆಯೇ?
أَلَمۡ تَرَ كَيۡفَ فَعَلَ رَبُّكَ بِعَادٍ
ನಿಮ್ಮ ಪರಿಪಾಲಕನು (ಅಲ್ಲಾಹು) ಆದ್ ಗೋತ್ರದವರೊಂದಿಗೆ ಏನು ಮಾಡಿದನೆಂದು ನೀವು ನೋಡಿಲ್ಲವೇ?
إِرَمَ ذَاتِ ٱلۡعِمَادِ
ಸ್ತಂಭಗಳ ಜನರಾದ ಇರಮ್ ಗೋತ್ರದವರೊಂದಿಗೆ.[1]
ٱلَّتِي لَمۡ يُخۡلَقۡ مِثۡلُهَا فِي ٱلۡبِلَٰدِ
ಅವರಂತಿರುವ ಜನರನ್ನು ಯಾವುದೇ ಊರಲ್ಲೂ ಸೃಷ್ಟಿಸಲಾಗಿಲ್ಲ.
وَثَمُودَ ٱلَّذِينَ جَابُواْ ٱلصَّخۡرَ بِٱلۡوَادِ
ಕಣಿವೆಯಲ್ಲಿ ಬಂಡೆಗಳನ್ನು ಕೊರೆಯುತ್ತಿದ್ದ ಸಮೂದ್ ಗೋತ್ರದವರೊಂದಿಗೆ.
وَفِرۡعَوۡنَ ذِي ٱلۡأَوۡتَادِ
ಗೂಟಗಳ ಒಡೆಯನಾದ ಫರೋಹನೊಂದಿಗೆ.[1]
ٱلَّذِينَ طَغَوۡاْ فِي ٱلۡبِلَٰدِ
ಅವರೆಲ್ಲರೂ ಊರುಗಳಲ್ಲಿ ಅತಿರೇಕವೆಸಗುತ್ತಿದ್ದರು.
فَأَكۡثَرُواْ فِيهَا ٱلۡفَسَادَ
ಕಿಡಿಗೇಡಿತನವನ್ನು ಅತಿಯಾಗಿ ಹಬ್ಬಿಸಿದ್ದರು.
فَصَبَّ عَلَيۡهِمۡ رَبُّكَ سَوۡطَ عَذَابٍ
ಕೊನೆಗೆ ನಿಮ್ಮ ಪರಿಪಾಲಕನು (ಅಲ್ಲಾಹು) ಅವರೆಲ್ಲರ ಮೇಲೆ ಶಿಕ್ಷೆಯ ಕೊರಡನ್ನು ಸುರಿಸಿದನು.
إِنَّ رَبَّكَ لَبِٱلۡمِرۡصَادِ
ನಿಶ್ಚಯವಾಗಿಯೂ ನಿಮ್ಮ ಪರಿಪಾಲಕನು (ಅಲ್ಲಾಹು) ನಿಗಾವಣೆಯಲ್ಲಿದ್ದಾನೆ.[1]
فَأَمَّا ٱلۡإِنسَٰنُ إِذَا مَا ٱبۡتَلَىٰهُ رَبُّهُۥ فَأَكۡرَمَهُۥ وَنَعَّمَهُۥ فَيَقُولُ رَبِّيٓ أَكۡرَمَنِ
ಮನುಷ್ಯನ ಸ್ಥಿತಿ ಹೇಗಿದೆಯೆಂದರೆ, ಅವನ ಪರಿಪಾಲಕನು (ಅಲ್ಲಾಹು) ಅವನನ್ನು ಪರೀಕ್ಷಿಸಿ ಅವನಿಗೆ ಗೌರವ ಮತ್ತು ಅನುಗ್ರಹವನ್ನು ದಯಪಾಲಿಸಿದರೆ, ಅವನು ಹೇಳುತ್ತಾನೆ: “ನನ್ನ ಪರಿಪಾಲಕ (ಅಲ್ಲಾಹು) ನನ್ನನ್ನು ಗಣ್ಯ ವ್ಯಕ್ತಿಯಾಗಿ ಮಾಡಿದ್ದಾನೆ.”
وَأَمَّآ إِذَا مَا ٱبۡتَلَىٰهُ فَقَدَرَ عَلَيۡهِ رِزۡقَهُۥ فَيَقُولُ رَبِّيٓ أَهَٰنَنِ
ಆದರೆ ಅವನು ಮನುಷ್ಯನನ್ನು ಪರೀಕ್ಷಿಸಿ ಅವನ ಉಪಜೀವನವನ್ನು ಇಕ್ಕಟ್ಟುಗೊಳಿಸಿದರೆ, ಅವನು ಹೇಳುತ್ತಾನೆ: “ನನ್ನ ಪರಿಪಾಲಕ (ಅಲ್ಲಾಹು) ನನ್ನನ್ನು ನಿಂದನಾರ್ಹನಾಗಿ ಮಾಡಿದ್ದಾನೆ.”
كَلَّاۖ بَل لَّا تُكۡرِمُونَ ٱلۡيَتِيمَ
ಇಲ್ಲವೇ ಇಲ್ಲ, ವಾಸ್ತವವಾಗಿ ನೀವು ಅನಾಥರಿಗೆ ಗೌರವ ನೀಡುವುದಿಲ್ಲ.
وَلَا تَحَٰٓضُّونَ عَلَىٰ طَعَامِ ٱلۡمِسۡكِينِ
ಬಡವರಿಗೆ ಅನ್ನ ನೀಡಲು ಪರಸ್ಪರ ಉತ್ತೇಜಿಸುವುದಿಲ್ಲ.
وَتَأۡكُلُونَ ٱلتُّرَاثَ أَكۡلٗا لَّمّٗا
ನೀವು ಉತ್ತರಾಧಿಕಾರದ ಆಸ್ತಿಯನ್ನು ಬಾಚಿ ಬಾಚಿ ತಿನ್ನುತ್ತೀರಿ.
وَتُحِبُّونَ ٱلۡمَالَ حُبّٗا جَمّٗا
ನೀವು ಧನವನ್ನು ಅತಿಯಾಗಿ ಪ್ರೀತಿಸುತ್ತೀರಿ.
كَلَّآۖ إِذَا دُكَّتِ ٱلۡأَرۡضُ دَكّٗا دَكّٗا
ಅಲ್ಲ (ನಿಮ್ಮ ಸ್ಥಿತಿ ಹಾಗಾಗಬಾರದು). ಭೂಮಿಯನ್ನು ಸಂಪೂರ್ಣ ಪುಡಿ ಮಾಡಿ ಸಮತಟ್ಟುಗೊಳಿಸುವಾಗ.
وَجَآءَ رَبُّكَ وَٱلۡمَلَكُ صَفّٗا صَفّٗا
ನಿಮ್ಮ ಪರಿಪಾಲಕನು (ಅಲ್ಲಾಹು) ಬರುವಾಗ ಮತ್ತು ಸಾಲುಸಾಲಾಗಿ ದೇವದೂತರುಗಳು ಬರುವಾಗ.
وَجِاْيٓءَ يَوۡمَئِذِۭ بِجَهَنَّمَۚ يَوۡمَئِذٖ يَتَذَكَّرُ ٱلۡإِنسَٰنُ وَأَنَّىٰ لَهُ ٱلذِّكۡرَىٰ
ಆ ದಿನ ನರಕವನ್ನು ತರಲಾಗುವುದು. ಅಂದು ಮನುಷ್ಯನಿಗೆ ಮನವರಿಕೆಯಾಗುವುದು. ಆದರೆ ಆಗ ಮನವರಿಕೆಯಾಗುವುದರಿಂದ ಏನು ಪ್ರಯೋಜನ?
يَقُولُ يَٰلَيۡتَنِي قَدَّمۡتُ لِحَيَاتِي
ಅವನು ಹೇಳುವನು: “ಅಯ್ಯೋ! ನಾನು ನನ್ನ ಈ ಜೀವನಕ್ಕಾಗಿ ಏನಾದರೂ ಸಿದ್ಧತೆಗಳನ್ನು ಮಾಡಿರುತ್ತಿದ್ದರೆ ಎಷ್ಟು ಚೆನ್ನಾಗಿತ್ತು!”
فَيَوۡمَئِذٖ لَّا يُعَذِّبُ عَذَابَهُۥٓ أَحَدٞ
ಅಂದು ಅಲ್ಲಾಹು ನೀಡುವಂತಹ (ಕಠೋರ) ಶಿಕ್ಷೆಯನ್ನು ನೀಡಲು ಯಾರಿಗೂ ಸಾಧ್ಯವಿಲ್ಲ.
وَلَا يُوثِقُ وَثَاقَهُۥٓ أَحَدٞ
ಅವನು ಹಿಡಿದು ಬಂಧಿಸುವಂತೆ ಹಿಡಿದು ಬಂಧಿಸಲು ಯಾರಿಗೂ ಸಾಧ್ಯವಿಲ್ಲ.
يَٰٓأَيَّتُهَا ٱلنَّفۡسُ ٱلۡمُطۡمَئِنَّةُ
ಓ ಸಮಾಧಾನದಲ್ಲಿರುವ ಆತ್ಮವೇ!
ٱرۡجِعِيٓ إِلَىٰ رَبِّكِ رَاضِيَةٗ مَّرۡضِيَّةٗ
ನಿನ್ನ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳು—ನೀನು ಅವನ ಬಗ್ಗೆ ಸಂಪ್ರೀತನಾಗಿರುವ ಮತ್ತು ಅವನು ನಿನ್ನ ಬಗ್ಗೆ ಸಂಪ್ರೀತನಾಗಿರುವ ಸ್ಥಿತಿಯಲ್ಲಿ.
فَٱدۡخُلِي فِي عِبَٰدِي
ನನ್ನ ವಿಶೇಷ ದಾಸರೊಡನೆ ಸೇರಿಕೋ.
وَٱدۡخُلِي جَنَّتِي
ನನ್ನ ಸ್ವರ್ಗಕ್ಕೆ ಪ್ರವೇಶಿಸು.
share_via