Header Include

કન્નડ ભાષામાં અનુવાદ - હમઝહ બતુર

તેનું અનુવાદ મોહમ્મદ હમઝહ બતૂર દ્વારા કરવામાં આવ્યું. ફરી રવ્વાદ ભાષાંતર કેન્દ્રની દેખરેખ હેઠળ તેની ચકાસણી કરવામાં આવી.

QR Code https://quran.islamcontent.com/gu/kannada_hamza

نٓۚ وَٱلۡقَلَمِ وَمَا يَسۡطُرُونَ

ನೂನ್. ಲೇಖನಿ ಮತ್ತು ಅವರು (ದೇವದೂತರುಗಳು) ಬರೆಯುವುದರ ಮೇಲಾಣೆ!

ನೂನ್. ಲೇಖನಿ ಮತ್ತು ಅವರು (ದೇವದೂತರುಗಳು) ಬರೆಯುವುದರ ಮೇಲಾಣೆ!

مَآ أَنتَ بِنِعۡمَةِ رَبِّكَ بِمَجۡنُونٖ

ನಿಮ್ಮ ಪರಿಪಾಲಕನ (ಅಲ್ಲಾಹನ) ಅನುಗ್ರಹದಿಂದಾಗಿ ನೀವು ಮಾನಸಿಕ ಅಸ್ವಸ್ಥರಲ್ಲ.

ನಿಮ್ಮ ಪರಿಪಾಲಕನ (ಅಲ್ಲಾಹನ) ಅನುಗ್ರಹದಿಂದಾಗಿ ನೀವು ಮಾನಸಿಕ ಅಸ್ವಸ್ಥರಲ್ಲ.

وَإِنَّ لَكَ لَأَجۡرًا غَيۡرَ مَمۡنُونٖ

ನಿಶ್ಚಯವಾಗಿಯೂ ನಿಮಗೆ ಎಂದೂ ಮುಗಿಯದ ಪ್ರತಿಫಲವಿದೆ.

ನಿಶ್ಚಯವಾಗಿಯೂ ನಿಮಗೆ ಎಂದೂ ಮುಗಿಯದ ಪ್ರತಿಫಲವಿದೆ.

وَإِنَّكَ لَعَلَىٰ خُلُقٍ عَظِيمٖ

ನಿಶ್ಚಯವಾಗಿಯೂ ನೀವು ಶ್ರೇಷ್ಠ ಗುಣ ನಡವಳಿಕೆಯಲ್ಲಿದ್ದೀರಿ.

ನಿಶ್ಚಯವಾಗಿಯೂ ನೀವು ಶ್ರೇಷ್ಠ ಗುಣ ನಡವಳಿಕೆಯಲ್ಲಿದ್ದೀರಿ.

فَسَتُبۡصِرُ وَيُبۡصِرُونَ

ಆದ್ದರಿಂದ ನೀವು ನೋಡುವಿರಿ ಮತ್ತು ಅವರು ಕೂಡ ನೋಡುವರು.

ಆದ್ದರಿಂದ ನೀವು ನೋಡುವಿರಿ ಮತ್ತು ಅವರು ಕೂಡ ನೋಡುವರು.

بِأَييِّكُمُ ٱلۡمَفۡتُونُ

ನಿಮ್ಮಲ್ಲಿ ಕ್ಷೋಭೆಗೆ ಬಲಿಯಾದವರು ಯಾರೆಂದು.

ನಿಮ್ಮಲ್ಲಿ ಕ್ಷೋಭೆಗೆ ಬಲಿಯಾದವರು ಯಾರೆಂದು.

إِنَّ رَبَّكَ هُوَ أَعۡلَمُ بِمَن ضَلَّ عَن سَبِيلِهِۦ وَهُوَ أَعۡلَمُ بِٱلۡمُهۡتَدِينَ

ನಿಶ್ಚಯವಾಗಿಯೂ ತನ್ನ ಮಾರ್ಗದಿಂದ ತಪ್ಪಿಹೋದವರ ಬಗ್ಗೆ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಸನ್ಮಾರ್ಗ ಪಡೆದವರ ಬಗ್ಗೆಯೂ ಅವನಿಗೆ ಬಹಳ ಚೆನ್ನಾಗಿ ತಿಳಿದಿದೆ.

ನಿಶ್ಚಯವಾಗಿಯೂ ತನ್ನ ಮಾರ್ಗದಿಂದ ತಪ್ಪಿಹೋದವರ ಬಗ್ಗೆ ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಸನ್ಮಾರ್ಗ ಪಡೆದವರ ಬಗ್ಗೆಯೂ ಅವನಿಗೆ ಬಹಳ ಚೆನ್ನಾಗಿ ತಿಳಿದಿದೆ.

فَلَا تُطِعِ ٱلۡمُكَذِّبِينَ

ಆದ್ದರಿಂದ ನೀವು ಸತ್ಯನಿಷೇಧಿಗಳ ಮಾತನ್ನು ಕೇಳಬೇಡಿ.

ಆದ್ದರಿಂದ ನೀವು ಸತ್ಯನಿಷೇಧಿಗಳ ಮಾತನ್ನು ಕೇಳಬೇಡಿ.

وَدُّواْ لَوۡ تُدۡهِنُ فَيُدۡهِنُونَ

ನೀವು ಸ್ವಲ್ಪ ಮೃದುವಾದರೆ ಅವರು ಕೂಡ ಮೃದುವಾಗುತ್ತಾರೆ ಎಂದು ಅವರು ಬಯಸುತ್ತಾರೆ.[1]

[1] ಅಂದರೆ ಅವರ ದೇವರುಗಳ ವಿಷಯದಲ್ಲಿ ನೀವು ಮೃದು ನಿಲುವನ್ನು ತಳೆದರೆ ಅವರು ಕೂಡ ನಿಮ್ಮ ಬಗ್ಗೆ ಮೃದು ನಿಲುವನ್ನು ತಳೆಯುತ್ತಾರೆ.
ನೀವು ಸ್ವಲ್ಪ ಮೃದುವಾದರೆ ಅವರು ಕೂಡ ಮೃದುವಾಗುತ್ತಾರೆ ಎಂದು ಅವರು ಬಯಸುತ್ತಾರೆ.[1]

وَلَا تُطِعۡ كُلَّ حَلَّافٖ مَّهِينٍ

ನೀವು ಎಲ್ಲಾ ಪದೇ ಪದೇ ಆಣೆ ಮಾಡುವ ನೀಚರ ಮಾತನ್ನು ಕೇಳಬೇಡಿ.

ನೀವು ಎಲ್ಲಾ ಪದೇ ಪದೇ ಆಣೆ ಮಾಡುವ ನೀಚರ ಮಾತನ್ನು ಕೇಳಬೇಡಿ.

هَمَّازٖ مَّشَّآءِۭ بِنَمِيمٖ

(ಅಂದರೆ) ಚುಚ್ಚಿ ಮಾತನಾಡುವವನು ಮತ್ತು ಚಾಡಿಯೊಂದಿಗೆ ನಡೆಯುವವನು.

(ಅಂದರೆ) ಚುಚ್ಚಿ ಮಾತನಾಡುವವನು ಮತ್ತು ಚಾಡಿಯೊಂದಿಗೆ ನಡೆಯುವವನು.

مَّنَّاعٖ لِّلۡخَيۡرِ مُعۡتَدٍ أَثِيمٍ

ಒಳಿತಿಗೆ ಅಡ್ಡಿಪಡಿಸುವವನು, ಎಲ್ಲೆ ಮೀರಿದವನು ಮತ್ತು ಕಡುಪಾಪಿಯಾಗಿರುವವನು.

ಒಳಿತಿಗೆ ಅಡ್ಡಿಪಡಿಸುವವನು, ಎಲ್ಲೆ ಮೀರಿದವನು ಮತ್ತು ಕಡುಪಾಪಿಯಾಗಿರುವವನು.

عُتُلِّۭ بَعۡدَ ذَٰلِكَ زَنِيمٍ

ಒರಟನು, ಮಾತ್ರವಲ್ಲದೆ ಕುಲಕ್ಕೆ ಸೇರದವನು.[1]

[1] ಇವೆಲ್ಲವೂ ಮಕ್ಕಾದ ಸತ್ಯನಿಷೇಧಿಗಳ, ವಿಶೇಷವಾಗಿ ಅವರ ಮುಖಂಡ ವಲೀದ್ ಬಿನ್ ಮುಗೀರ ವಿಷಯದಲ್ಲಿ ಅವತೀರ್ಣವಾದ ವಚನಗಳಾಗಿವೆ. ಇದು ಇಂತಹ ದುರ್ಗುಣಗಳನ್ನು ಹೊಂದಿರುವ ಎಲ್ಲರಿಗೂ ಅನ್ವಯವಾಗುತ್ತದೆ.
ಒರಟನು, ಮಾತ್ರವಲ್ಲದೆ ಕುಲಕ್ಕೆ ಸೇರದವನು.[1]

أَن كَانَ ذَا مَالٖ وَبَنِينَ

ಅವನಿಗೆ ಆಸ್ತಿ ಮತ್ತು ಗಂಡು ಮಕ್ಕಳಿರುವುದೇ ಅವನ (ಈ ದುರ್ನಡತೆಗೆ) ಕಾರಣವಾಗಿದೆ.

ಅವನಿಗೆ ಆಸ್ತಿ ಮತ್ತು ಗಂಡು ಮಕ್ಕಳಿರುವುದೇ ಅವನ (ಈ ದುರ್ನಡತೆಗೆ) ಕಾರಣವಾಗಿದೆ.

إِذَا تُتۡلَىٰ عَلَيۡهِ ءَايَٰتُنَا قَالَ أَسَٰطِيرُ ٱلۡأَوَّلِينَ

ಅವನಿಗೆ ನಮ್ಮ ವಚನಗಳನ್ನು ಓದಿಕೊಡಲಾದರೆ, ಅದನ್ನು ಪ್ರಾಚೀನ ಕಾಲದವರ ಪುರಾಣಗಳು ಎಂದು ಹೇಳುತ್ತಾನೆ.

ಅವನಿಗೆ ನಮ್ಮ ವಚನಗಳನ್ನು ಓದಿಕೊಡಲಾದರೆ, ಅದನ್ನು ಪ್ರಾಚೀನ ಕಾಲದವರ ಪುರಾಣಗಳು ಎಂದು ಹೇಳುತ್ತಾನೆ.

سَنَسِمُهُۥ عَلَى ٱلۡخُرۡطُومِ

ನಾವು ಅವನ ಮೂಗಿನ ಮೇಲೆ ಬರೆ ಹಾಕುವೆವು.

ನಾವು ಅವನ ಮೂಗಿನ ಮೇಲೆ ಬರೆ ಹಾಕುವೆವು.

إِنَّا بَلَوۡنَٰهُمۡ كَمَا بَلَوۡنَآ أَصۡحَٰبَ ٱلۡجَنَّةِ إِذۡ أَقۡسَمُواْ لَيَصۡرِمُنَّهَا مُصۡبِحِينَ

ನಿಶ್ಚಯವಾಗಿಯೂ ಆ ತೋಟದ ಜನರನ್ನು ಪರೀಕ್ಷಿಸಿದಂತೆ ನಾವು ಅವರನ್ನೂ ಪರೀಕ್ಷಿಸಿದೆವು. ಬೆಳಗಾಗುತ್ತಿದ್ದಂತೆ ತೋಟದ ಹಣ್ಣುಗಳನ್ನು ನಾವು ಖಂಡಿತ ಕೊಯ್ಯುವೆವು ಎಂದು ಅವರು ಆಣೆ ಮಾಡಿ ಹೇಳಿದ ಸಂದರ್ಭ.

ನಿಶ್ಚಯವಾಗಿಯೂ ಆ ತೋಟದ ಜನರನ್ನು ಪರೀಕ್ಷಿಸಿದಂತೆ ನಾವು ಅವರನ್ನೂ ಪರೀಕ್ಷಿಸಿದೆವು. ಬೆಳಗಾಗುತ್ತಿದ್ದಂತೆ ತೋಟದ ಹಣ್ಣುಗಳನ್ನು ನಾವು ಖಂಡಿತ ಕೊಯ್ಯುವೆವು ಎಂದು ಅವರು ಆಣೆ ಮಾಡಿ ಹೇಳಿದ ಸಂದರ್ಭ.

وَلَا يَسۡتَثۡنُونَ

ಆದರೆ ಅವರು ಇನ್‌ಶಾ ಅಲ್ಲಾಹ್ (ಅಲ್ಲಾಹು ಇಚ್ಛಿಸಿದರೆ) ಎಂದು ಹೇಳಲಿಲ್ಲ.

ಆದರೆ ಅವರು ಇನ್‌ಶಾ ಅಲ್ಲಾಹ್ (ಅಲ್ಲಾಹು ಇಚ್ಛಿಸಿದರೆ) ಎಂದು ಹೇಳಲಿಲ್ಲ.

فَطَافَ عَلَيۡهَا طَآئِفٞ مِّن رَّبِّكَ وَهُمۡ نَآئِمُونَ

ಆದ್ದರಿಂದ, ಅವರು ನಿದ್ದೆಯಲ್ಲಿದ್ದಾಗಲೇ (ರಾತ್ರೋರಾತ್ರಿ) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಶಿಕ್ಷೆಯು ಆ ತೋಟವನ್ನು ನಾಲ್ಕೂ ಕಡೆಯಿಂದ ಸುತ್ತಿತು.

ಆದ್ದರಿಂದ, ಅವರು ನಿದ್ದೆಯಲ್ಲಿದ್ದಾಗಲೇ (ರಾತ್ರೋರಾತ್ರಿ) ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಒಂದು ಶಿಕ್ಷೆಯು ಆ ತೋಟವನ್ನು ನಾಲ್ಕೂ ಕಡೆಯಿಂದ ಸುತ್ತಿತು.

فَأَصۡبَحَتۡ كَٱلصَّرِيمِ

ಆಗ ಆ ತೋಟವು ಕಟಾವು ಮಾಡಿದ ಹೊಲದಂತಾಯಿತು.

ಆಗ ಆ ತೋಟವು ಕಟಾವು ಮಾಡಿದ ಹೊಲದಂತಾಯಿತು.

فَتَنَادَوۡاْ مُصۡبِحِينَ

ಬೆಳಗಾಗುತ್ತಿದ್ದಂತೆ ಅವರು ಒಬ್ಬರನ್ನೊಬ್ಬರು ಕೂಗಿ ಕರೆದು ಹೇಳಿದರು:

ಬೆಳಗಾಗುತ್ತಿದ್ದಂತೆ ಅವರು ಒಬ್ಬರನ್ನೊಬ್ಬರು ಕೂಗಿ ಕರೆದು ಹೇಳಿದರು:

أَنِ ٱغۡدُواْ عَلَىٰ حَرۡثِكُمۡ إِن كُنتُمۡ صَٰرِمِينَ

“ನಿಮಗೆ ಹಣ್ಣು ಕೊಯ್ಯಬೇಕೆಂದಿದ್ದರೆ ಬೆಳಿಗ್ಗೆಯೇ ನಿಮ್ಮ ತೋಟಕ್ಕೆ ಹೊರಡಿ.”

“ನಿಮಗೆ ಹಣ್ಣು ಕೊಯ್ಯಬೇಕೆಂದಿದ್ದರೆ ಬೆಳಿಗ್ಗೆಯೇ ನಿಮ್ಮ ತೋಟಕ್ಕೆ ಹೊರಡಿ.”

فَٱنطَلَقُواْ وَهُمۡ يَتَخَٰفَتُونَ

ನಂತರ ಅವರು ಪರಸ್ಪರ ಗುಟ್ಟಾಗಿ ಈ ಮಾತುಗಳನ್ನು ಹೇಳುತ್ತಾ ಹೊರಟರು:

ನಂತರ ಅವರು ಪರಸ್ಪರ ಗುಟ್ಟಾಗಿ ಈ ಮಾತುಗಳನ್ನು ಹೇಳುತ್ತಾ ಹೊರಟರು:

أَن لَّا يَدۡخُلَنَّهَا ٱلۡيَوۡمَ عَلَيۡكُم مِّسۡكِينٞ

“ಇಂದು ನಿಮ್ಮ ಬಳಿಗೆ ಯಾವುದೇ ಬಡವ ಬರುವಂತಾಗಬಾರದು.”

“ಇಂದು ನಿಮ್ಮ ಬಳಿಗೆ ಯಾವುದೇ ಬಡವ ಬರುವಂತಾಗಬಾರದು.”

وَغَدَوۡاْ عَلَىٰ حَرۡدٖ قَٰدِرِينَ

ಅವರು ಒಂದು ನಿರ್ಧಾರದೊಂದಿಗೆ (ಅದನ್ನು ಜಾರಿಗೊಳಿಸುವ) ಪೂರ್ಣ ಸಾಮರ್ಥ್ಯವಿದೆಯೆಂದು ಪರಿಗಣಿಸಿ ಬೆಳಗ್ಗೆಯೇ ಹೊರಟರು.

ಅವರು ಒಂದು ನಿರ್ಧಾರದೊಂದಿಗೆ (ಅದನ್ನು ಜಾರಿಗೊಳಿಸುವ) ಪೂರ್ಣ ಸಾಮರ್ಥ್ಯವಿದೆಯೆಂದು ಪರಿಗಣಿಸಿ ಬೆಳಗ್ಗೆಯೇ ಹೊರಟರು.

فَلَمَّا رَأَوۡهَا قَالُوٓاْ إِنَّا لَضَآلُّونَ

ಆದರೆ ಅವರು ಆ ತೋಟವನ್ನು ನೋಡಿದಾಗ ಅವರು ಹೇಳಿದರು: “ನಿಶ್ಚಯವಾಗಿಯೂ ನಮಗೆ ದಾರಿ ತಪ್ಪಿದೆ.

ಆದರೆ ಅವರು ಆ ತೋಟವನ್ನು ನೋಡಿದಾಗ ಅವರು ಹೇಳಿದರು: “ನಿಶ್ಚಯವಾಗಿಯೂ ನಮಗೆ ದಾರಿ ತಪ್ಪಿದೆ.

بَلۡ نَحۡنُ مَحۡرُومُونَ

ಅಲ್ಲ, ನಮಗೆ ಅದೃಷ್ಟ ಕೈಕೊಟ್ಟಿದೆ.”

ಅಲ್ಲ, ನಮಗೆ ಅದೃಷ್ಟ ಕೈಕೊಟ್ಟಿದೆ.”

قَالَ أَوۡسَطُهُمۡ أَلَمۡ أَقُل لَّكُمۡ لَوۡلَا تُسَبِّحُونَ

ಅವರಲ್ಲಿದ್ದ ಉತ್ತಮ ವ್ಯಕ್ತಿ ಹೇಳಿದನು: “ನೀವೇಕೆ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುವುದಿಲ್ಲ ಎಂದು ನಾನು ನಿಮ್ಮೊಡನೆ ಕೇಳಲಿಲ್ಲವೇ?”

ಅವರಲ್ಲಿದ್ದ ಉತ್ತಮ ವ್ಯಕ್ತಿ ಹೇಳಿದನು: “ನೀವೇಕೆ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುವುದಿಲ್ಲ ಎಂದು ನಾನು ನಿಮ್ಮೊಡನೆ ಕೇಳಲಿಲ್ಲವೇ?”

قَالُواْ سُبۡحَٰنَ رَبِّنَآ إِنَّا كُنَّا ظَٰلِمِينَ

ಅವರು ಹೇಳಿದರು: “ನಮ್ಮ ಪರಿಪಾಲಕನ (ಅಲ್ಲಾಹನ) ಪರಿಶುದ್ಧಿಯನ್ನು ನಾವು ಕೊಂಡಾಡುತ್ತೇವೆ. ನಿಶ್ಚಯವಾಗಿಯೂ ನಾವು ಅಕ್ರಮಿಗಳಾಗಿದ್ದೇವೆ.”

ಅವರು ಹೇಳಿದರು: “ನಮ್ಮ ಪರಿಪಾಲಕನ (ಅಲ್ಲಾಹನ) ಪರಿಶುದ್ಧಿಯನ್ನು ನಾವು ಕೊಂಡಾಡುತ್ತೇವೆ. ನಿಶ್ಚಯವಾಗಿಯೂ ನಾವು ಅಕ್ರಮಿಗಳಾಗಿದ್ದೇವೆ.”

فَأَقۡبَلَ بَعۡضُهُمۡ عَلَىٰ بَعۡضٖ يَتَلَٰوَمُونَ

ನಂತರ ಅವರು ಒಬ್ಬರಿಗೊಬ್ಬರು ಮುಖ ಮಾಡಿ ಪರಸ್ಪರ ಆರೋಪ ಹೊರಿಸತೊಡಗಿದರು.

ನಂತರ ಅವರು ಒಬ್ಬರಿಗೊಬ್ಬರು ಮುಖ ಮಾಡಿ ಪರಸ್ಪರ ಆರೋಪ ಹೊರಿಸತೊಡಗಿದರು.

قَالُواْ يَٰوَيۡلَنَآ إِنَّا كُنَّا طَٰغِينَ

ಅವರು ಹೇಳಿದರು: “ಓ ನಮ್ಮ ದುರ್ಗತಿಯೇ! ನಿಶ್ಚಯವಾಗಿಯೂ ನಾವು ಅತಿರೇಕಿಗಳಾಗಿದ್ದೆವು.

ಅವರು ಹೇಳಿದರು: “ಓ ನಮ್ಮ ದುರ್ಗತಿಯೇ! ನಿಶ್ಚಯವಾಗಿಯೂ ನಾವು ಅತಿರೇಕಿಗಳಾಗಿದ್ದೆವು.

عَسَىٰ رَبُّنَآ أَن يُبۡدِلَنَا خَيۡرٗا مِّنۡهَآ إِنَّآ إِلَىٰ رَبِّنَا رَٰغِبُونَ

ನಮ್ಮ ಪರಿಪಾಲಕನು (ಅಲ್ಲಾಹು) ನಮಗೆ ಇದಕ್ಕಿಂತಲೂ ಉತ್ತಮವಾದುದನ್ನು ಬದಲಿಯಾಗಿ ನೀಡಬಹುದು. ನಿಶ್ಚಯವಾಗಿಯೂ ನಾವು ನಮ್ಮ ಪರಿಪಾಲಕನ (ಅಲ್ಲಾಹನ) ಬಗ್ಗೆ ಆಶಾವಾದಿಗಳಾಗಿದ್ದೇವೆ.”

ನಮ್ಮ ಪರಿಪಾಲಕನು (ಅಲ್ಲಾಹು) ನಮಗೆ ಇದಕ್ಕಿಂತಲೂ ಉತ್ತಮವಾದುದನ್ನು ಬದಲಿಯಾಗಿ ನೀಡಬಹುದು. ನಿಶ್ಚಯವಾಗಿಯೂ ನಾವು ನಮ್ಮ ಪರಿಪಾಲಕನ (ಅಲ್ಲಾಹನ) ಬಗ್ಗೆ ಆಶಾವಾದಿಗಳಾಗಿದ್ದೇವೆ.”

كَذَٰلِكَ ٱلۡعَذَابُۖ وَلَعَذَابُ ٱلۡأٓخِرَةِ أَكۡبَرُۚ لَوۡ كَانُواْ يَعۡلَمُونَ

ಶಿಕ್ಷೆಯು ಹೀಗೆಯೇ ಆಗಿದೆ. ಪರಲೋಕದ ಶಿಕ್ಷೆಯು ಅತಿದೊಡ್ಡದಾಗಿದೆ. ಅವರು ಅದನ್ನು ತಿಳಿಯುತ್ತಿದ್ದರೆ!

ಶಿಕ್ಷೆಯು ಹೀಗೆಯೇ ಆಗಿದೆ. ಪರಲೋಕದ ಶಿಕ್ಷೆಯು ಅತಿದೊಡ್ಡದಾಗಿದೆ. ಅವರು ಅದನ್ನು ತಿಳಿಯುತ್ತಿದ್ದರೆ!

إِنَّ لِلۡمُتَّقِينَ عِندَ رَبِّهِمۡ جَنَّٰتِ ٱلنَّعِيمِ

ನಿಶ್ಚಯವಾಗಿಯೂ, ದೇವಭಯವುಳ್ಳವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಸುಖಾಡಂಬರಗಳಿಂದ ಕೂಡಿದ ಸ್ವರ್ಗೋದ್ಯಾನಗಳಿವೆ.

ನಿಶ್ಚಯವಾಗಿಯೂ, ದೇವಭಯವುಳ್ಳವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿ ಸುಖಾಡಂಬರಗಳಿಂದ ಕೂಡಿದ ಸ್ವರ್ಗೋದ್ಯಾನಗಳಿವೆ.

أَفَنَجۡعَلُ ٱلۡمُسۡلِمِينَ كَٱلۡمُجۡرِمِينَ

ಹಾಗಾದರೆ ನಾವು ಮುಸ್ಲಿಮರನ್ನು ಅಪರಾಧಿಗಳಂತೆ ನಡೆಸಿಕೊಳ್ಳುವೆವೇ?

ಹಾಗಾದರೆ ನಾವು ಮುಸ್ಲಿಮರನ್ನು ಅಪರಾಧಿಗಳಂತೆ ನಡೆಸಿಕೊಳ್ಳುವೆವೇ?

مَا لَكُمۡ كَيۡفَ تَحۡكُمُونَ

ನಿಮಗೇನಾಗಿದೆ? ನೀವು ಹೇಗೆ ತೀರ್ಪು ನೀಡುತ್ತೀರಿ?

ನಿಮಗೇನಾಗಿದೆ? ನೀವು ಹೇಗೆ ತೀರ್ಪು ನೀಡುತ್ತೀರಿ?

أَمۡ لَكُمۡ كِتَٰبٞ فِيهِ تَدۡرُسُونَ

ನಿಮ್ಮಲ್ಲಿ ಒಂದು ಗ್ರಂಥವಿದ್ದು ನೀವು ಅದರಿಂದ ಓದುತ್ತಿದ್ದೀರಾ?

ನಿಮ್ಮಲ್ಲಿ ಒಂದು ಗ್ರಂಥವಿದ್ದು ನೀವು ಅದರಿಂದ ಓದುತ್ತಿದ್ದೀರಾ?

إِنَّ لَكُمۡ فِيهِ لَمَا تَخَيَّرُونَ

ಅದರಲ್ಲಿ ನಿಮ್ಮ ಮನಸ್ಸಿಗೆ ಒಪ್ಪಿಗೆಯಾಗುವ ವಿಷಯಗಳಿವೆಯೇ?

ಅದರಲ್ಲಿ ನಿಮ್ಮ ಮನಸ್ಸಿಗೆ ಒಪ್ಪಿಗೆಯಾಗುವ ವಿಷಯಗಳಿವೆಯೇ?

أَمۡ لَكُمۡ أَيۡمَٰنٌ عَلَيۡنَا بَٰلِغَةٌ إِلَىٰ يَوۡمِ ٱلۡقِيَٰمَةِ إِنَّ لَكُمۡ لَمَا تَحۡكُمُونَ

ಅಥವಾ, ನೀವು ಸ್ವಯಂ ನಿಶ್ಚಯಿಸುವುದೆಲ್ಲವೂ ನಿಮಗಿದೆಯೆಂದು ಪುನರುತ್ಥಾನ ದಿನದ ತನಕ ತಲುಪುವ ಯಾವುದಾದರೂ ಪ್ರತಿಜ್ಞೆಗಳನ್ನು ನೀವು ನಮ್ಮಿಂದ ಪಡೆದಿದ್ದೀರಾ?

ಅಥವಾ, ನೀವು ಸ್ವಯಂ ನಿಶ್ಚಯಿಸುವುದೆಲ್ಲವೂ ನಿಮಗಿದೆಯೆಂದು ಪುನರುತ್ಥಾನ ದಿನದ ತನಕ ತಲುಪುವ ಯಾವುದಾದರೂ ಪ್ರತಿಜ್ಞೆಗಳನ್ನು ನೀವು ನಮ್ಮಿಂದ ಪಡೆದಿದ್ದೀರಾ?

سَلۡهُمۡ أَيُّهُم بِذَٰلِكَ زَعِيمٌ

ಅವರಲ್ಲಿ ಯಾರು ಇದರ ಹೊಣೆಯನ್ನು ವಹಿಸಿಕೊಳ್ಳುತ್ತಾರೆಂದು ಅವರೊಡನೆ ಕೇಳಿರಿ.

ಅವರಲ್ಲಿ ಯಾರು ಇದರ ಹೊಣೆಯನ್ನು ವಹಿಸಿಕೊಳ್ಳುತ್ತಾರೆಂದು ಅವರೊಡನೆ ಕೇಳಿರಿ.

أَمۡ لَهُمۡ شُرَكَآءُ فَلۡيَأۡتُواْ بِشُرَكَآئِهِمۡ إِن كَانُواْ صَٰدِقِينَ

ಅವರಿಗೆ ಯಾರಾದರೂ ಸಹಭಾಗಿಗಳು ಇದ್ದಾರೆಯೇ? ಅವರು ಸತ್ಯವಂತರಾಗಿದ್ದರೆ ಅವರ ಸಹಭಾಗಿಗಳನ್ನು ಕರೆದುಕೊಂಡು ಬರಲಿ.

ಅವರಿಗೆ ಯಾರಾದರೂ ಸಹಭಾಗಿಗಳು ಇದ್ದಾರೆಯೇ? ಅವರು ಸತ್ಯವಂತರಾಗಿದ್ದರೆ ಅವರ ಸಹಭಾಗಿಗಳನ್ನು ಕರೆದುಕೊಂಡು ಬರಲಿ.

يَوۡمَ يُكۡشَفُ عَن سَاقٖ وَيُدۡعَوۡنَ إِلَى ٱلسُّجُودِ فَلَا يَسۡتَطِيعُونَ

ಕಣಕಾಲನ್ನು ಪ್ರದರ್ಶಿಸಲಾಗುವ ದಿನ. ಆಗ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುವುದು. ಆದರೆ ಅವರಿಗೆ (ಸಾಷ್ಟಾಂಗ ಮಾಡಲು) ಸಾಧ್ಯವಾಗುವುದಿಲ್ಲ.[1]

[1] ಪುನರುತ್ಥಾನದ ದಿನ ಅಲ್ಲಾಹು ತನ್ನ ಮಹತ್ವಕ್ಕೆ ಹೊಂದಿಕೆಯಾಗುವ ವಿಧದಲ್ಲಿ ತನ್ನ ಕಣಕಾಲನ್ನು ಪ್ರದರ್ಶಿಸುತ್ತಾನೆ. ಆಗ ಸತ್ಯವಿಶ್ವಾಸಿಗಳಾದ ಪುರುಷರು ಮತ್ತು ಮಹಿಳೆಯರೆಲ್ಲರೂ ಅವನ ಮುಂದೆ ಸಾಷ್ಟಾಂಗ ಮಾಡುತ್ತಾರೆ. ಆದರೆ ಇಹಲೋಕದಲ್ಲಿ ತೋರಿಕೆಗಾಗಿ ಮತ್ತು ಜನಮನ್ನಣೆಗಾಗಿ ಸಾಷ್ಟಾಂಗ ಮಾಡುತ್ತಿದ್ದವರಿಗೆ ಅದು ಸಾಧ್ಯವಾಗವುದಿಲ್ಲ.
ಕಣಕಾಲನ್ನು ಪ್ರದರ್ಶಿಸಲಾಗುವ ದಿನ. ಆಗ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುವುದು. ಆದರೆ ಅವರಿಗೆ (ಸಾಷ್ಟಾಂಗ ಮಾಡಲು) ಸಾಧ್ಯವಾಗುವುದಿಲ್ಲ.[1]

خَٰشِعَةً أَبۡصَٰرُهُمۡ تَرۡهَقُهُمۡ ذِلَّةٞۖ وَقَدۡ كَانُواْ يُدۡعَوۡنَ إِلَى ٱلسُّجُودِ وَهُمۡ سَٰلِمُونَ

ಅವರ ಕಣ್ಣುಗಳು ತಗ್ಗಿಕೊಂಡಿರುವುವು ಮತ್ತು ಅವಮಾನವು ಅವರನ್ನು ಆವರಿಸಿಕೊಂಡಿರುವುದು. ವಾಸ್ತವದಲ್ಲಿ ಅವರು ಇಹಲೋಕದಲ್ಲಿ ಸುಸ್ಥಿತಿಯಲ್ಲಿದ್ದಾಗಲೂ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುತ್ತಿತ್ತು.

ಅವರ ಕಣ್ಣುಗಳು ತಗ್ಗಿಕೊಂಡಿರುವುವು ಮತ್ತು ಅವಮಾನವು ಅವರನ್ನು ಆವರಿಸಿಕೊಂಡಿರುವುದು. ವಾಸ್ತವದಲ್ಲಿ ಅವರು ಇಹಲೋಕದಲ್ಲಿ ಸುಸ್ಥಿತಿಯಲ್ಲಿದ್ದಾಗಲೂ ಅವರನ್ನು ಸಾಷ್ಟಾಂಗ ಮಾಡಲು ಕರೆಯಲಾಗುತ್ತಿತ್ತು.

فَذَرۡنِي وَمَن يُكَذِّبُ بِهَٰذَا ٱلۡحَدِيثِۖ سَنَسۡتَدۡرِجُهُم مِّنۡ حَيۡثُ لَا يَعۡلَمُونَ

ಆದ್ದರಿಂದ ನನ್ನನ್ನು ಮತ್ತು ಈ ಮಾತನ್ನು (ಕುರ್‌ಆನನ್ನು) ನಿಷೇಧಿಸುವವನನ್ನು ಬಿಟ್ಟುಬಿಡಿ.[1] ಅವರು ತಿಳಿಯದ ರೀತಿಯಲ್ಲಿ ನಾವು ಅವರನ್ನು ಹಂತ ಹಂತವಾಗಿ ಹಿಡಿಯುವೆವು.

[1] ಅಂದರೆ ಅವರ ವಿಷಯವನ್ನು ನಾನು ನೋಡಿಕೊಳ್ಳುತ್ತೇನೆ.
ಆದ್ದರಿಂದ ನನ್ನನ್ನು ಮತ್ತು ಈ ಮಾತನ್ನು (ಕುರ್‌ಆನನ್ನು) ನಿಷೇಧಿಸುವವನನ್ನು ಬಿಟ್ಟುಬಿಡಿ.[1] ಅವರು ತಿಳಿಯದ ರೀತಿಯಲ್ಲಿ ನಾವು ಅವರನ್ನು ಹಂತ ಹಂತವಾಗಿ ಹಿಡಿಯುವೆವು.

وَأُمۡلِي لَهُمۡۚ إِنَّ كَيۡدِي مَتِينٌ

ನಾನು ಅವರಿಗೆ ಕಾಲಾವಕಾಶ ನೀಡುವೆನು. ನಿಶ್ಚಯವಾಗಿಯೂ ನನ್ನ ತಂತ್ರವು ಬಲಿಷ್ಠವಾಗಿದೆ.

ನಾನು ಅವರಿಗೆ ಕಾಲಾವಕಾಶ ನೀಡುವೆನು. ನಿಶ್ಚಯವಾಗಿಯೂ ನನ್ನ ತಂತ್ರವು ಬಲಿಷ್ಠವಾಗಿದೆ.

أَمۡ تَسۡـَٔلُهُمۡ أَجۡرٗا فَهُم مِّن مَّغۡرَمٖ مُّثۡقَلُونَ

ನೀವು ಅವರೊಡನೆ ಪ್ರತಿಫಲವನ್ನು ಕೇಳಿ ಅವರು (ಅದನ್ನು ನೀಡಲು ಸಾಧ್ಯವಾಗದೆ) ಸಾಲದ ಹೊರೆಯನ್ನು ಹೊರುತ್ತಿದ್ದಾರೆಯೇ?

ನೀವು ಅವರೊಡನೆ ಪ್ರತಿಫಲವನ್ನು ಕೇಳಿ ಅವರು (ಅದನ್ನು ನೀಡಲು ಸಾಧ್ಯವಾಗದೆ) ಸಾಲದ ಹೊರೆಯನ್ನು ಹೊರುತ್ತಿದ್ದಾರೆಯೇ?

أَمۡ عِندَهُمُ ٱلۡغَيۡبُ فَهُمۡ يَكۡتُبُونَ

ಅವರ ಬಳಿ ಅದೃಶ್ಯ ಜ್ಞಾನವಿದ್ದು ಅವರು ಅದನ್ನು ಬರೆಯುತ್ತಿದ್ದಾರೆಯೇ?

ಅವರ ಬಳಿ ಅದೃಶ್ಯ ಜ್ಞಾನವಿದ್ದು ಅವರು ಅದನ್ನು ಬರೆಯುತ್ತಿದ್ದಾರೆಯೇ?

فَٱصۡبِرۡ لِحُكۡمِ رَبِّكَ وَلَا تَكُن كَصَاحِبِ ٱلۡحُوتِ إِذۡ نَادَىٰ وَهُوَ مَكۡظُومٞ

ಆದ್ದರಿಂದ, ನಿಮ್ಮ ಪರಿಪಾಲಕನ (ಅಲ್ಲಾಹನ) ತೀರ್ಮಾನಕ್ಕಾಗಿ ತಾಳ್ಮೆಯಿಂದಿರಿ. ನೀವು ಮೀನಿನ ಸಂಗಡಿಗನಂತೆ (ಯೂನುಸರಂತೆ) ಆಗಬೇಡಿ. ತೀವ್ರ ದುಃಖಿತನಾಗಿದ್ದ ಸ್ಥಿತಿಯಲ್ಲಿ ಅವರು ಕರೆದು ಪ್ರಾರ್ಥಿಸಿದ ಸಂದರ್ಭ.

ಆದ್ದರಿಂದ, ನಿಮ್ಮ ಪರಿಪಾಲಕನ (ಅಲ್ಲಾಹನ) ತೀರ್ಮಾನಕ್ಕಾಗಿ ತಾಳ್ಮೆಯಿಂದಿರಿ. ನೀವು ಮೀನಿನ ಸಂಗಡಿಗನಂತೆ (ಯೂನುಸರಂತೆ) ಆಗಬೇಡಿ. ತೀವ್ರ ದುಃಖಿತನಾಗಿದ್ದ ಸ್ಥಿತಿಯಲ್ಲಿ ಅವರು ಕರೆದು ಪ್ರಾರ್ಥಿಸಿದ ಸಂದರ್ಭ.

لَّوۡلَآ أَن تَدَٰرَكَهُۥ نِعۡمَةٞ مِّن رَّبِّهِۦ لَنُبِذَ بِٱلۡعَرَآءِ وَهُوَ مَذۡمُومٞ

ಅವರ ಪರಿಪಾಲಕನ (ಅಲ್ಲಾಹನ) ಅನುಗ್ರಹವು ಅವರನ್ನು ತಲುಪದಿರುತ್ತಿದ್ದರೆ, ಅವರನ್ನು ಆಕ್ಷೇಪಿತ ಸ್ಥಿತಿಯಲ್ಲಿ ಬಯಲು ತೀರಕ್ಕೆ ಎಸೆಯಲಾಗುತ್ತಿತ್ತು.

ಅವರ ಪರಿಪಾಲಕನ (ಅಲ್ಲಾಹನ) ಅನುಗ್ರಹವು ಅವರನ್ನು ತಲುಪದಿರುತ್ತಿದ್ದರೆ, ಅವರನ್ನು ಆಕ್ಷೇಪಿತ ಸ್ಥಿತಿಯಲ್ಲಿ ಬಯಲು ತೀರಕ್ಕೆ ಎಸೆಯಲಾಗುತ್ತಿತ್ತು.

فَٱجۡتَبَٰهُ رَبُّهُۥ فَجَعَلَهُۥ مِنَ ٱلصَّٰلِحِينَ

ಅವರ ಪರಿಪಾಲಕ (ಅಲ್ಲಾಹು) ಅವರನ್ನು ಆರಿಸಿದನು ಮತ್ತು ಅವರನ್ನು ನೀತಿವಂತರಲ್ಲಿ ಸೇರಿಸಿದನು.

ಅವರ ಪರಿಪಾಲಕ (ಅಲ್ಲಾಹು) ಅವರನ್ನು ಆರಿಸಿದನು ಮತ್ತು ಅವರನ್ನು ನೀತಿವಂತರಲ್ಲಿ ಸೇರಿಸಿದನು.

وَإِن يَكَادُ ٱلَّذِينَ كَفَرُواْ لَيُزۡلِقُونَكَ بِأَبۡصَٰرِهِمۡ لَمَّا سَمِعُواْ ٱلذِّكۡرَ وَيَقُولُونَ إِنَّهُۥ لَمَجۡنُونٞ

ಸತ್ಯನಿಷೇಧಿಗಳು ಈ ಉಪದೇಶವನ್ನು (ಕುರ್‌ಆನನ್ನು) ಕೇಳಿದಾಗ, ತಮ್ಮ ಕೆಟ್ಟದೃಷ್ಟಿಗಳಿಂದ ನಿಮ್ಮನ್ನು ಇನ್ನೇನು ಜಾರುವಂತೆ ಮಾಡುವುದರಲ್ಲಿದ್ದರು.[1] ಅವರು ಹೇಳುತ್ತಿದ್ದರು: “ನಿಶ್ಚಯವಾಗಿಯೂ ಅವನೊಬ್ಬ ಮಾನಸಿಕ ಅಸ್ವಸ್ಥ.”

[1] ಅಂದರೆ ನಿಮಗೆ ಅಲ್ಲಾಹನ ಸಂರಕ್ಷಣೆಯಿಲ್ಲದಿರುತ್ತಿದ್ದರೆ ನೀವು ಸತ್ಯನಿಷೇಧಿಗಳ ಕೆಟ್ಟದೃಷ್ಟಿಗೆ ಬಲಿಯಾಗುತ್ತಿದ್ದಿರಿ.
ಸತ್ಯನಿಷೇಧಿಗಳು ಈ ಉಪದೇಶವನ್ನು (ಕುರ್‌ಆನನ್ನು) ಕೇಳಿದಾಗ, ತಮ್ಮ ಕೆಟ್ಟದೃಷ್ಟಿಗಳಿಂದ ನಿಮ್ಮನ್ನು ಇನ್ನೇನು ಜಾರುವಂತೆ ಮಾಡುವುದರಲ್ಲಿದ್ದರು.[1] ಅವರು ಹೇಳುತ್ತಿದ್ದರು: “ನಿಶ್ಚಯವಾಗಿಯೂ ಅವನೊಬ್ಬ ಮಾನಸಿಕ ಅಸ್ವಸ್ಥ.”

وَمَا هُوَ إِلَّا ذِكۡرٞ لِّلۡعَٰلَمِينَ

ಇದು (ಕುರ್‌ಆನ್) ಸರ್ವಲೋಕಗಳ ಜನರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.

ಇದು (ಕುರ್‌ಆನ್) ಸರ್ವಲೋಕಗಳ ಜನರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.
Footer Include