કન્નડ ભાષામાં અનુવાદ - હમઝહ બતુર
તેનું અનુવાદ મોહમ્મદ હમઝહ બતૂર દ્વારા કરવામાં આવ્યું. ફરી રવ્વાદ ભાષાંતર કેન્દ્રની દેખરેખ હેઠળ તેની ચકાસણી કરવામાં આવી.
إِنَّآ أَرۡسَلۡنَا نُوحًا إِلَىٰ قَوۡمِهِۦٓ أَنۡ أَنذِرۡ قَوۡمَكَ مِن قَبۡلِ أَن يَأۡتِيَهُمۡ عَذَابٌ أَلِيمٞ
ನಿಶ್ಚಯವಾಗಿಯೂ ನಾವು ನೂಹರನ್ನು ಅವರ ಜನರ ಬಳಿಗೆ ಕಳುಹಿಸಿದೆವು. ಅವರಿಗೆ ಯಾತನಾಮಯ ಶಿಕ್ಷೆ ಎರಗುವುದಕ್ಕೆ ಮೊದಲೇ ಅವರಿಗೆ ಎಚ್ಚರಿಕೆ ನೀಡಿರಿ ಎಂಬ ಸಂದೇಶದೊಂದಿಗೆ.
قَالَ يَٰقَوۡمِ إِنِّي لَكُمۡ نَذِيرٞ مُّبِينٌ
ನೂಹ್ ಹೇಳಿದರು: “ಓ ನನ್ನ ಜನರೇ! ನಿಶ್ಚಯವಾಗಿಯೂ ನಾನು ನಿಮಗೆ ಸ್ಪಷ್ಟ ಮುನ್ನೆಚ್ಚರಿಕೆಗಾರನಾಗಿದ್ದೇನೆ.
أَنِ ٱعۡبُدُواْ ٱللَّهَ وَٱتَّقُوهُ وَأَطِيعُونِ
ನೀವು ಅಲ್ಲಾಹನನ್ನು ಆರಾಧಿಸಿರಿ, ಅವನನ್ನು ಭಯಪಡಿರಿ ಮತ್ತು ನನ್ನನ್ನು ಅನುಸರಿಸಿರಿ.
يَغۡفِرۡ لَكُم مِّن ذُنُوبِكُمۡ وَيُؤَخِّرۡكُمۡ إِلَىٰٓ أَجَلٖ مُّسَمًّىۚ إِنَّ أَجَلَ ٱللَّهِ إِذَا جَآءَ لَا يُؤَخَّرُۚ لَوۡ كُنتُمۡ تَعۡلَمُونَ
ಅವನು ನಿಮ್ಮ ಪಾಪಗಳನ್ನು ಕ್ಷಮಿಸುವನು ಮತ್ತು ಒಂದು ನಿಶ್ಚಿತ ಅವಧಿಯವರೆಗೆ ನಿಮ್ಮನ್ನು ಬಿಟ್ಟುಬಿಡುವನು. ನಿಶ್ಚಯವಾಗಿಯೂ ಅಲ್ಲಾಹನ ಅವಧಿಯು ಬಂದರೆ ಅದನ್ನು ಮುಂದೂಡಲಾಗುವುದಿಲ್ಲ. ನೀವು ತಿಳಿದವರಾಗಿದ್ದರೆ!
قَالَ رَبِّ إِنِّي دَعَوۡتُ قَوۡمِي لَيۡلٗا وَنَهَارٗا
ನೂಹ್ ಹೇಳಿದರು: “ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ ನಾನು ನನ್ನ ಜನರನ್ನು ಹಗಲು-ರಾತ್ರಿ ನಿನ್ನ ಕಡೆಗೆ ಕರೆದಿದ್ದೇನೆ.
فَلَمۡ يَزِدۡهُمۡ دُعَآءِيٓ إِلَّا فِرَارٗا
ಆದರೆ ನನ್ನ ಕರೆಯು ಅವರಿಗೆ ಪಲಾಯನವನ್ನೇ ವಿನಾ ಇನ್ನೇನನ್ನೂ ಹೆಚ್ಚಿಸಲಿಲ್ಲ.
وَإِنِّي كُلَّمَا دَعَوۡتُهُمۡ لِتَغۡفِرَ لَهُمۡ جَعَلُوٓاْ أَصَٰبِعَهُمۡ فِيٓ ءَاذَانِهِمۡ وَٱسۡتَغۡشَوۡاْ ثِيَابَهُمۡ وَأَصَرُّواْ وَٱسۡتَكۡبَرُواْ ٱسۡتِكۡبَارٗا
ನಿಶ್ಚಯವಾಗಿಯೂ ನೀನು ಅವರನ್ನು ಕ್ಷಮಿಸಬೇಕೆಂದು ನಾನು ಅವರನ್ನು ನಿನ್ನ ಕಡೆಗೆ ಕರೆದಾಗಲೆಲ್ಲಾ ಅವರು ತಮ್ಮ ಬೆರಳುಗಳನ್ನು ಕಿವಿಗಳಲ್ಲಿಟ್ಟರು, ಬಟ್ಟೆಗಳಿಂದ ತಮ್ಮನ್ನು ಮುಚ್ಚಿಕೊಂಡರು, (ಸತ್ಯನಿಷೇಧದಲ್ಲಿ) ದೃಢವಾಗಿ ನಿಂತರು ಮತ್ತು ಮಹಾ ಅಹಂಕಾರವನ್ನು ತೋರಿದರು.
ثُمَّ إِنِّي دَعَوۡتُهُمۡ جِهَارٗا
ನಂತರ ನಿಶ್ಚಯವಾಗಿಯೂ ನಾನು ಅವರನ್ನು ಉಚ್ಛ ಧ್ವನಿಯಲ್ಲಿ ಕರೆದೆ.
ثُمَّ إِنِّيٓ أَعۡلَنتُ لَهُمۡ وَأَسۡرَرۡتُ لَهُمۡ إِسۡرَارٗا
ನಂತರ ನಾನು ಅವರಿಗೆ ಬಹಿರಂಗವಾಗಿ ತಿಳಿಸಿದೆ. ಅತ್ಯಂತ ರಹಸ್ಯವಾಗಿಯೂ ತಿಳಿಸಿದೆ.
فَقُلۡتُ ٱسۡتَغۡفِرُواْ رَبَّكُمۡ إِنَّهُۥ كَانَ غَفَّارٗا
ನಾನು ಹೇಳಿದೆ: “ನೀವು ನಿಮ್ಮ ಪರಿಪಾಲಕನಲ್ಲಿ (ಅಲ್ಲಾಹನಲ್ಲಿ) ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅವನು ಅತ್ಯಧಿಕ ಕ್ಷಮಿಸುವವನು.
يُرۡسِلِ ٱلسَّمَآءَ عَلَيۡكُم مِّدۡرَارٗا
ಅವನು ಆಕಾಶದಿಂದ ನಿಮಗೆ ಧಾರಾಕಾರ ಮಳೆಯನ್ನು ಸುರಿಸುವನು.
وَيُمۡدِدۡكُم بِأَمۡوَٰلٖ وَبَنِينَ وَيَجۡعَل لَّكُمۡ جَنَّٰتٖ وَيَجۡعَل لَّكُمۡ أَنۡهَٰرٗا
ಅವನು ನಿಮಗೆ ಹೇರಳ ಆಸ್ತಿಪಾಸ್ತಿ ಮತ್ತು ಗಂಡುಮಕ್ಕಳನ್ನು ನೀಡಿ ನೆರವಾಗುವನು. ಅವನು ನಿಮಗೆ ತೋಟಗಳನ್ನು ಕೊಡುವನು ಮತ್ತು ಹೊಳೆಗಳನ್ನು ಹರಿಸುವನು.”
مَّا لَكُمۡ لَا تَرۡجُونَ لِلَّهِ وَقَارٗا
ಅಲ್ಲಾಹನ ಮಹಿಮೆಯಲ್ಲಿ ನಂಬಿಕೆಯಿಡದಿರಲು ನಿಮಗೇನಾಗಿದೆ?
وَقَدۡ خَلَقَكُمۡ أَطۡوَارًا
ಅವನು ನಿಮ್ಮನ್ನು ಹಲವು ಘಟ್ಟಗಳ ಮೂಲಕ ಸೃಷ್ಟಿಸಿದ್ದಾನೆ.
أَلَمۡ تَرَوۡاْ كَيۡفَ خَلَقَ ٱللَّهُ سَبۡعَ سَمَٰوَٰتٖ طِبَاقٗا
ಅಲ್ಲಾಹು ಏಳು ಆಕಾಶಗಳನ್ನು ಹೇಗೆ ಅಂತಸ್ತುಗಳಾಗಿ ಸೃಷ್ಟಿಸಿದ್ದಾನೆಂದು ನೀವು ನೋಡಿಲ್ಲವೇ?
وَجَعَلَ ٱلۡقَمَرَ فِيهِنَّ نُورٗا وَجَعَلَ ٱلشَّمۡسَ سِرَاجٗا
ಅವನು ಅವುಗಳಲ್ಲಿ ಚಂದ್ರನನ್ನು ಬೆಳಕಾಗಿ ಮತ್ತು ಸೂರ್ಯನನ್ನು (ಉರಿಯುವ) ದೀಪವಾಗಿ ಮಾಡಿದನು.
وَٱللَّهُ أَنۢبَتَكُم مِّنَ ٱلۡأَرۡضِ نَبَاتٗا
ಅಲ್ಲಾಹು ನಿಮ್ಮನ್ನು (ವಿಶೇಷ ಮುತುವರ್ಜಿ ನೀಡಿ) ಭೂಮಿಯಿಂದ ಬೆಳೆಸಿದನು.
ثُمَّ يُعِيدُكُمۡ فِيهَا وَيُخۡرِجُكُمۡ إِخۡرَاجٗا
ನಂತರ ಅವನು ನಿಮ್ಮನ್ನು ಅದಕ್ಕೆ ಮರಳಿಸುವನು ಮತ್ತು (ವಿಶೇಷ ರೀತಿಯಲ್ಲಿ) ನಿಮ್ಮನ್ನು ಹೊರತರುವನು.
وَٱللَّهُ جَعَلَ لَكُمُ ٱلۡأَرۡضَ بِسَاطٗا
ಅಲ್ಲಾಹು ನಿಮಗೆ ಭೂಮಿಯನ್ನು ಒಂದು ಹಾಸಿನಂತೆ ಮಾಡಿಕೊಟ್ಟನು.
لِّتَسۡلُكُواْ مِنۡهَا سُبُلٗا فِجَاجٗا
ನೀವು ಅದರ ವಿಶಾಲವಾದ ದಾರಿಗಳಲ್ಲಿ ಸಾಗಲಿಕ್ಕಾಗಿ.
قَالَ نُوحٞ رَّبِّ إِنَّهُمۡ عَصَوۡنِي وَٱتَّبَعُواْ مَن لَّمۡ يَزِدۡهُ مَالُهُۥ وَوَلَدُهُۥٓ إِلَّا خَسَارٗا
ನೂಹ್ ಹೇಳಿದರು: “ನನ್ನ ಪರಿಪಾಲಕನೇ! ನಿಶ್ಚಯವಾಗಿಯೂ ಅವರು ನನಗೆ ಅವಿಧೇಯತೆ ತೋರಿದ್ದಾರೆ. ಯಾರ ಆಸ್ತಿ ಹಾಗೂ ಮಕ್ಕಳು ಅವನಿಗೆ ನಷ್ಟವನ್ನಲ್ಲದೆ ಇನ್ನೇನನ್ನೂ ಹೆಚ್ಚಿಸುವುದಿಲ್ಲವೋ ಅಂತಹವನನ್ನು ಅವರು ಹಿಂಬಾಲಿಸಿದ್ದಾರೆ.
وَمَكَرُواْ مَكۡرٗا كُبَّارٗا
ಅವರು ಬಹುದೊಡ್ಡ ಸಂಚು ರೂಪಿಸಿದ್ದಾರೆ.
وَقَالُواْ لَا تَذَرُنَّ ءَالِهَتَكُمۡ وَلَا تَذَرُنَّ وَدّٗا وَلَا سُوَاعٗا وَلَا يَغُوثَ وَيَعُوقَ وَنَسۡرٗا
“(ಜನರೇ) ನೀವು ನಿಮ್ಮ ದೇವರುಗಳನ್ನು ಯಾವುದೇ ಕಾರಣಕ್ಕೂ ತೊರೆಯಬೇಡಿ. ವದ್ದ್, ಸುವಾಅ್, ಯಗೂಸ್, ಯಊಕ್ ಮತ್ತು ನಸ್ರ್ರನ್ನು ಯಾವುದೇ ಕಾರಣಕ್ಕೂ ತೊರೆಯಬೇಡಿ” ಎಂದು ಅವರು ಹೇಳುತ್ತಾರೆ.
وَقَدۡ أَضَلُّواْ كَثِيرٗاۖ وَلَا تَزِدِ ٱلظَّٰلِمِينَ إِلَّا ضَلَٰلٗا
ಅವರು ಈಗಾಗಲೇ ಬಹಳಷ್ಟು ಜನರನ್ನು ದಾರಿ ತಪ್ಪಿಸಿದ್ದಾರೆ. ನೀನು ಆ ಅಕ್ರಮಿಗಳಿಗೆ ಅವರ ದುರ್ಮಾರ್ಗವನ್ನು ಇನ್ನಷ್ಟು ಹೆಚ್ಚಿಸಿಕೊಡು.”
مِّمَّا خَطِيٓـَٰٔتِهِمۡ أُغۡرِقُواْ فَأُدۡخِلُواْ نَارٗا فَلَمۡ يَجِدُواْ لَهُم مِّن دُونِ ٱللَّهِ أَنصَارٗا
ಅವರ ಪಾಪಗಳ ಕಾರಣದಿಂದ ಅವರನ್ನು ಮುಳುಗಿಸಲಾಯಿತು. ನಂತರ ನರಕಾಗ್ನಿಗೆ ಪ್ರವೇಶ ಮಾಡಿಸಲಾಯಿತು. ಅವರು ಅಲ್ಲಾಹನ ಹೊರತು ಬೇರೆ ಯಾವುದೇ ಸಹಾಯಕರನ್ನು ಕಾಣಲಿಲ್ಲ.
وَقَالَ نُوحٞ رَّبِّ لَا تَذَرۡ عَلَى ٱلۡأَرۡضِ مِنَ ٱلۡكَٰفِرِينَ دَيَّارًا
ನೂಹ್ ಹೇಳಿದರು: “ನನ್ನ ಪರಿಪಾಲಕನೇ! ನೀನು ಭೂಮಿಯ ಮೇಲೆ ಸತ್ಯನಿಷೇಧಿಗಳಲ್ಲಿ ಯಾರನ್ನೂ ವಾಸಿಸಲು ಬಿಡಬೇಡ.
إِنَّكَ إِن تَذَرۡهُمۡ يُضِلُّواْ عِبَادَكَ وَلَا يَلِدُوٓاْ إِلَّا فَاجِرٗا كَفَّارٗا
ನೀನೇನಾದರೂ ಅವರನ್ನು ಬಿಟ್ಟುಬಿಟ್ಟರೆ ಅವರು ನಿನ್ನ ದಾಸರನ್ನು ದಾರಿತಪ್ಪಿಸುವರು. ಅವರು ದುಷ್ಕರ್ಮಿಗಳು ಮತ್ತು ಸತ್ಯನಿಷೇಧಿಗಳಿಗೆ ಮಾತ್ರ ಜನ್ಮ ನೀಡುವರು.
رَّبِّ ٱغۡفِرۡ لِي وَلِوَٰلِدَيَّ وَلِمَن دَخَلَ بَيۡتِيَ مُؤۡمِنٗا وَلِلۡمُؤۡمِنِينَ وَٱلۡمُؤۡمِنَٰتِۖ وَلَا تَزِدِ ٱلظَّٰلِمِينَ إِلَّا تَبَارَۢا
ನನ್ನ ಪರಿಪಾಲಕನೇ! ನನಗೆ, ನನ್ನ ಮಾತಾಪಿತರಿಗೆ ಮತ್ತು ಸತ್ಯವಿಶ್ವಾಸಿಯಾಗಿ ನನ್ನ ಮನೆಯನ್ನು ಪ್ರವೇಶಿಸಿದವನಿಗೆ ಕ್ಷಮಿಸು. ಸತ್ಯವಿಶ್ವಾಸಿ ಪುರುಷರಿಗೆ ಮತ್ತು ಸ್ತ್ರೀಯರಿಗೆ ಕ್ಷಮಿಸು. ಅಕ್ರಮಿಗಳಿಗೆ ಸರ್ವನಾಶವಲ್ಲದೆ ಇನ್ನೇನೂ ಹೆಚ್ಚಿಸಬೇಡ.”
مشاركة عبر