Terjemahan Berbahasa Kannada - Hamzah Batur

Terjemahan Makna Al-Qur'an al-Karim

Diterjemahkan oleh Muhammad Hamzah Batur. Dikembangkan di bawah pengawasan Pusat Terjemah Ruwwād.

QR Code https://quran.islamcontent.com/id/kannada_hamza

لِإِيلَٰفِ قُرَيۡشٍ

ಕುರೈಷರನ್ನು ಪರಿಚಿತಗೊಳಿಸುವುದಕ್ಕಾಗಿ.[1]

[1] ಕುರೈಷ್ ಗೋತ್ರವು ಅರೇಬಿಯನ್ ಪರ್ಯಾಯ ದ್ವೀಪದಲ್ಲಿ ಉನ್ನತ ಸ್ಥಾನಮಾನವನ್ನು ಹೊಂದಿತ್ತು. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಈ ಗೋತ್ರದ ಬನೂ ಹಾಶಿಮ್ ಕುಟುಂಬದಲ್ಲಿ ಹುಟ್ಟಿದ್ದರು. ಕುರೈಷರು ಪವಿತ್ರ ಕಅಬಾಲಯದ ಪರಿಪಾಲಕರಾಗಿದ್ದರಿಂದ ಅರೇಬಿಯನ್ ಪರ್ಯಾಯ ದ್ವೀಪದ ಎಲ್ಲಾ ಗೋತ್ರಗಳು ಅವರನ್ನು ಗೌರವಿಸುತ್ತಿದ್ದವು. ಈ ಕಾರಣದಿಂದ ಅವರ ವ್ಯಾಪಾರ ಪ್ರಯಾಣಗಳು ಸುರಕ್ಷಿತವಾಗಿದ್ದವು. ವ್ಯಾಪಾರವು ಕುರೈಷರ ಪ್ರಮುಖ ವೃತ್ತಿಯಾಗಿದ್ದು ಅವರು ಬೇಸಿಗೆಗಾಲದಲ್ಲಿ ಶಾಮ್ (ಈಗಿನ ಸಿರಿಯಾ-ಜೋರ್ಡಾನ್-ಪ್ಯಾಲಸ್ತೀನ್) ಗೆ ಮತ್ತು ಚಳಿಗಾಲದಲ್ಲಿ ಯಮನ್‌ಗೆ ವ್ಯಾಪಾರ ನಿಮಿತ್ತ ಪ್ರಯಾಣ ಮಾಡುತ್ತಿದ್ದರು.
ಕುರೈಷರನ್ನು ಪರಿಚಿತಗೊಳಿಸುವುದಕ್ಕಾಗಿ.[1]

إِۦلَٰفِهِمۡ رِحۡلَةَ ٱلشِّتَآءِ وَٱلصَّيۡفِ

ಅಂದರೆ ಅವರಿಗೆ ಚಳಿ ಮತ್ತು ಬೇಸಿಗೆಯ ಪ್ರಯಾಣಗಳನ್ನು ಪರಿಚಿತಗೊಳಿಸುವುದಕ್ಕಾಗಿ.

ಅಂದರೆ ಅವರಿಗೆ ಚಳಿ ಮತ್ತು ಬೇಸಿಗೆಯ ಪ್ರಯಾಣಗಳನ್ನು ಪರಿಚಿತಗೊಳಿಸುವುದಕ್ಕಾಗಿ.

فَلۡيَعۡبُدُواْ رَبَّ هَٰذَا ٱلۡبَيۡتِ

ಆದ್ದರಿಂದ ಅವರು ಈ ಭವನದ (ಕಅಬಾಲಯದ) ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಲಿ.

ಆದ್ದರಿಂದ ಅವರು ಈ ಭವನದ (ಕಅಬಾಲಯದ) ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಲಿ.

ٱلَّذِيٓ أَطۡعَمَهُم مِّن جُوعٖ وَءَامَنَهُم مِّنۡ خَوۡفِۭ

ಅವನು ಯಾರೆಂದರೆ ಅವರು ಹಸಿದಿರುವಾಗ ಅವರಿಗೆ ಆಹಾರವನ್ನು ಒದಗಿಸಿದವನು ಮತ್ತು ಅವರು ಭಯದಲ್ಲಿದ್ದಾಗ ಅವರಿಗೆ ನಿರ್ಭಯವನ್ನು ನೀಡಿದವನು.

ಅವನು ಯಾರೆಂದರೆ ಅವರು ಹಸಿದಿರುವಾಗ ಅವರಿಗೆ ಆಹಾರವನ್ನು ಒದಗಿಸಿದವನು ಮತ್ತು ಅವರು ಭಯದಲ್ಲಿದ್ದಾಗ ಅವರಿಗೆ ನಿರ್ಭಯವನ್ನು ನೀಡಿದವನು.