Header Include

Kannada translation - Hamza Butur

Translated by Muhammad Hamza Batur and developed under the supervision of Rowwad Translation Center

QR Code https://quran.islamcontent.com/ln/kannada_hamza

سَبَّحَ لِلَّهِ مَا فِي ٱلسَّمَٰوَٰتِ وَمَا فِي ٱلۡأَرۡضِۖ وَهُوَ ٱلۡعَزِيزُ ٱلۡحَكِيمُ

ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅಲ್ಲಾಹನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

هُوَ ٱلَّذِيٓ أَخۡرَجَ ٱلَّذِينَ كَفَرُواْ مِنۡ أَهۡلِ ٱلۡكِتَٰبِ مِن دِيَٰرِهِمۡ لِأَوَّلِ ٱلۡحَشۡرِۚ مَا ظَنَنتُمۡ أَن يَخۡرُجُواْۖ وَظَنُّوٓاْ أَنَّهُم مَّانِعَتُهُمۡ حُصُونُهُم مِّنَ ٱللَّهِ فَأَتَىٰهُمُ ٱللَّهُ مِنۡ حَيۡثُ لَمۡ يَحۡتَسِبُواْۖ وَقَذَفَ فِي قُلُوبِهِمُ ٱلرُّعۡبَۚ يُخۡرِبُونَ بُيُوتَهُم بِأَيۡدِيهِمۡ وَأَيۡدِي ٱلۡمُؤۡمِنِينَ فَٱعۡتَبِرُواْ يَٰٓأُوْلِي ٱلۡأَبۡصَٰرِ

ಅವನೇ ಪ್ರಥಮ ಗಡೀಪಾರಿನಲ್ಲಿ ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳನ್ನು ಅವರ ಮನೆಗಳಿಂದ ಹೊರದಬ್ಬಿದವನು.[1] ಅವರು ಹೊರಹೋಗುವರೆಂದು ನೀವು ಊಹಿಸಿಯೂ ಇರಲಿಲ್ಲ. ಅವರ ಕೋಟೆಗಳು ಅವರನ್ನು ಅಲ್ಲಾಹನ ಶಿಕ್ಷೆಯಿಂದ ಕಾಪಾಡುತ್ತವೆ ಎಂದು ಅವರು ಭಾವಿಸಿದ್ದರು. ಆದರೆ ಅವರು ನಿರೀಕ್ಷಿಸಿಯೇ ಇರದ ಕಡೆಯಿಂದ ಅಲ್ಲಾಹನ ಶಿಕ್ಷೆಯು ಅವರ ಬಳಿಗೆ ಬಂತು. ಅಲ್ಲಾಹು ಅವರ ಹೃದಯದಲ್ಲಿ ಭೀತಿಯನ್ನು ಬಿತ್ತಿದನು. ಅವರು ಅವರ ಕೈಗಳಿಂದಲೇ ಅವರ ಮನೆಗಳನ್ನು ನಾಶ ಮಾಡುತ್ತಿದ್ದರು. ಸತ್ಯವಿಶ್ವಾಸಿಗಳ ಕೈಗಳು ಕೂಡ (ಅವುಗಳನ್ನು ನಾಶ ಮಾಡಿಸುತ್ತಿದ್ದವು). ಆದ್ದರಿಂದ ಓ ದೃಷ್ಟಿಯುಳ್ಳವರೇ, ಇದರಿಂದ ಪಾಠ ಕಲಿತುಕೊಳ್ಳಿರಿ.

[1] ಮದೀನದ ಆಸುಪಾಸಿನಲ್ಲಿ ಮೂರು ಯಹೂದಿ ಗೋತ್ರಗಳು ವಾಸವಾಗಿದ್ದವು. ಬನೂ ನದೀರ್, ಬನೂ ಕುರೈಝ ಮತ್ತು ಬನೂ ಕೈನುಕಾ. ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮದೀನಕ್ಕೆ ಬಂದಾಗ ಇವರೊಡನೆ ಶಾಂತಿ ಒಪ್ಪಂದ ಮಾಡಿಕೊಂಡಿದ್ದರು. ಆದರೆ ಅವಕಾಶ ದೊರೆತಾಗಲೆಲ್ಲಾ ಇವರು ರಹಸ್ಯ ಮಾತುಕತೆ ನಡೆಸಿ ಮುಸ್ಲಿಮರ ವಿರುದ್ಧ ವೈರಿಗಳೊಡನೆ ಕೈ ಜೋಡಿಸುತ್ತಿದ್ದರು. ಒಮ್ಮೆ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಬನೂ ನದೀರ್ ಗೋತ್ರದವರ ಬಳಿಗೆ ಹೋದಾಗ ಅವರು ಒಂದು ದೊಡ್ಡ ಕಲ್ಲನ್ನು ಉರುಳಿಸಿ ಪ್ರವಾದಿಯವರನ್ನು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಕೊಲೆ ಮಾಡುವ ಸಂಚು ನಡೆಸಿದ್ದರು. ದಿವ್ಯವಾಣಿಯ ಮೂಲಕ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಇದರ ಬಗ್ಗೆ ತಿಳಿದು ಮದೀನಕ್ಕೆ ಮರಳಿದರು. ಒಪ್ಪಂದವನ್ನು ಮುರಿದ ಕಾರಣ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಅವರ ಮೇಲೆ ದಾಳಿ ಮಾಡಿದರು. ಅವರು ತಮ್ಮ ಕೋಟೆಗಳಲ್ಲಿ ಆಶ್ರಯಪಡೆದರು. ಹಲವು ದಿನಗಳ ಕಾಲ ಕೋಟೆಯೊಳಗಿದ್ದು ನಂತರ ಗತ್ಯಂತರವಿಲ್ಲದೆ ಅವರು ಶರಣಾಗಿ ಪ್ರಾಣವನ್ನು ಉಳಿಸಿಕೊಳ್ಳಲು ಮದೀನದಿಂದ ಹೊರಹೋಗುತ್ತೇವೆಂದರು. ಇದನ್ನು ಪ್ರಥಮ ಗಡೀಪಾರು ಎಂದು ಕರೆಯಲಾಗುತ್ತದೆ. ಅವರು ಮದೀನದಿಂದ ಹೊರಹೋಗಿ ಖೈಬರ್‌ನಲ್ಲಿ ಆಶ್ರಯಪಡೆದರು. ಎರಡನೇ ಖಲೀಫ ಉಮರ್ (ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಲಿ) ತಮ್ಮ ಆಡಳಿತಕಾಲದಲ್ಲಿ ಇವರು ಅಲ್ಲಿಂದ ಶಾಮ್ (ಸಿರಿಯಾ ಜೋರ್ಡಾನ್ ಪ್ರದೇಶ)ಗೆ ಗಡೀಪಾರ ಮಾಡಿದರು.
ಅವನೇ ಪ್ರಥಮ ಗಡೀಪಾರಿನಲ್ಲಿ ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳನ್ನು ಅವರ ಮನೆಗಳಿಂದ ಹೊರದಬ್ಬಿದವನು.[1] ಅವರು ಹೊರಹೋಗುವರೆಂದು ನೀವು ಊಹಿಸಿಯೂ ಇರಲಿಲ್ಲ. ಅವರ ಕೋಟೆಗಳು ಅವರನ್ನು ಅಲ್ಲಾಹನ ಶಿಕ್ಷೆಯಿಂದ ಕಾಪಾಡುತ್ತವೆ ಎಂದು ಅವರು ಭಾವಿಸಿದ್ದರು. ಆದರೆ ಅವರು ನಿರೀಕ್ಷಿಸಿಯೇ ಇರದ ಕಡೆಯಿಂದ ಅಲ್ಲಾಹನ ಶಿಕ್ಷೆಯು ಅವರ ಬಳಿಗೆ ಬಂತು. ಅಲ್ಲಾಹು ಅವರ ಹೃದಯದಲ್ಲಿ ಭೀತಿಯನ್ನು ಬಿತ್ತಿದನು. ಅವರು ಅವರ ಕೈಗಳಿಂದಲೇ ಅವರ ಮನೆಗಳನ್ನು ನಾಶ ಮಾಡುತ್ತಿದ್ದರು. ಸತ್ಯವಿಶ್ವಾಸಿಗಳ ಕೈಗಳು ಕೂಡ (ಅವುಗಳನ್ನು ನಾಶ ಮಾಡಿಸುತ್ತಿದ್ದವು). ಆದ್ದರಿಂದ ಓ ದೃಷ್ಟಿಯುಳ್ಳವರೇ, ಇದರಿಂದ ಪಾಠ ಕಲಿತುಕೊಳ್ಳಿರಿ.

وَلَوۡلَآ أَن كَتَبَ ٱللَّهُ عَلَيۡهِمُ ٱلۡجَلَآءَ لَعَذَّبَهُمۡ فِي ٱلدُّنۡيَاۖ وَلَهُمۡ فِي ٱلۡأٓخِرَةِ عَذَابُ ٱلنَّارِ

ಅಲ್ಲಾಹು ಅವರಿಗೆ ಊರು ಬಿಡುವುದನ್ನು ವಿಧಿಸದಿರುತ್ತಿದ್ದರೆ ಭೂಲೋಕದಲ್ಲೇ ಅವರನ್ನು ಶಿಕ್ಷಿಸುತ್ತಿದ್ದನು. ಪರಲೋಕದಲ್ಲಿ ಅವರಿಗೆ ನರಕಾಗ್ನಿಯ ಶಿಕ್ಷೆಯಿದೆ.

ಅಲ್ಲಾಹು ಅವರಿಗೆ ಊರು ಬಿಡುವುದನ್ನು ವಿಧಿಸದಿರುತ್ತಿದ್ದರೆ ಭೂಲೋಕದಲ್ಲೇ ಅವರನ್ನು ಶಿಕ್ಷಿಸುತ್ತಿದ್ದನು. ಪರಲೋಕದಲ್ಲಿ ಅವರಿಗೆ ನರಕಾಗ್ನಿಯ ಶಿಕ್ಷೆಯಿದೆ.

ذَٰلِكَ بِأَنَّهُمۡ شَآقُّواْ ٱللَّهَ وَرَسُولَهُۥۖ وَمَن يُشَآقِّ ٱللَّهَ فَإِنَّ ٱللَّهَ شَدِيدُ ٱلۡعِقَابِ

ಅದೇಕೆಂದರೆ ಅವರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗಿದರು. ಯಾರು ಅಲ್ಲಾಹನಿಗೆ ವಿರುದ್ಧವಾಗಿ ಸಾಗುತ್ತಾರೋ—ಅವರಿಗೆ ಅಲ್ಲಾಹು ಅತಿಕಠೋರ ಶಿಕ್ಷೆಯನ್ನು ನೀಡುತ್ತಾನೆ.

ಅದೇಕೆಂದರೆ ಅವರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗಿದರು. ಯಾರು ಅಲ್ಲಾಹನಿಗೆ ವಿರುದ್ಧವಾಗಿ ಸಾಗುತ್ತಾರೋ—ಅವರಿಗೆ ಅಲ್ಲಾಹು ಅತಿಕಠೋರ ಶಿಕ್ಷೆಯನ್ನು ನೀಡುತ್ತಾನೆ.

مَا قَطَعۡتُم مِّن لِّينَةٍ أَوۡ تَرَكۡتُمُوهَا قَآئِمَةً عَلَىٰٓ أُصُولِهَا فَبِإِذۡنِ ٱللَّهِ وَلِيُخۡزِيَ ٱلۡفَٰسِقِينَ

ನೀವು ಖರ್ಜೂರದ ಮರಗಳಲ್ಲಿ ಯಾವುದನ್ನೆಲ್ಲಾ ಕಡಿದಿದ್ದೀರೋ ಮತ್ತು ಯಾವುದನ್ನೆಲ್ಲಾ ಅದರ ಕಾಂಡದ ಮೇಲೆ ನಿಲ್ಲುವಂತೆ ಹಾಗೆಯೇ ಬಿಟ್ಟಿದ್ದೀರೋ—ಇವೆಲ್ಲವೂ ಅಲ್ಲಾಹನ ಅಪ್ಪಣೆಯಿಂದಲೇ ಆಗಿತ್ತು. ಅದು ಅಲ್ಲಾಹು ಆ ದುಷ್ಕರ್ಮಿಗಳನ್ನು ಅವಮಾನಿಸುವುದಕ್ಕಾಗಿತ್ತು.

ನೀವು ಖರ್ಜೂರದ ಮರಗಳಲ್ಲಿ ಯಾವುದನ್ನೆಲ್ಲಾ ಕಡಿದಿದ್ದೀರೋ ಮತ್ತು ಯಾವುದನ್ನೆಲ್ಲಾ ಅದರ ಕಾಂಡದ ಮೇಲೆ ನಿಲ್ಲುವಂತೆ ಹಾಗೆಯೇ ಬಿಟ್ಟಿದ್ದೀರೋ—ಇವೆಲ್ಲವೂ ಅಲ್ಲಾಹನ ಅಪ್ಪಣೆಯಿಂದಲೇ ಆಗಿತ್ತು. ಅದು ಅಲ್ಲಾಹು ಆ ದುಷ್ಕರ್ಮಿಗಳನ್ನು ಅವಮಾನಿಸುವುದಕ್ಕಾಗಿತ್ತು.

وَمَآ أَفَآءَ ٱللَّهُ عَلَىٰ رَسُولِهِۦ مِنۡهُمۡ فَمَآ أَوۡجَفۡتُمۡ عَلَيۡهِ مِنۡ خَيۡلٖ وَلَا رِكَابٖ وَلَٰكِنَّ ٱللَّهَ يُسَلِّطُ رُسُلَهُۥ عَلَىٰ مَن يَشَآءُۚ وَٱللَّهُ عَلَىٰ كُلِّ شَيۡءٖ قَدِيرٞ

ಅವರ ಆಸ್ತಿಗಳಲ್ಲಿ ಏನನ್ನೆಲ್ಲಾ ಅಲ್ಲಾಹು ಅವನ ಸಂದೇಶವಾಹಕರಿಗೆ ವಶಪಡಿಸಿಕೊಟ್ಟನೋ ಅದಕ್ಕಾಗಿ ನೀವು ಕುದುರೆಗಳನ್ನೋ ಒಂಟೆಗಳನ್ನೋ ಓಡಿಸಬೇಕಾಗಿ ಬರಲಿಲ್ಲ.[1] ಅಲ್ಲಾಹು ಅವನು ಇಚ್ಛಿಸುವವರ ಮೇಲೆ ಅವನ ಸಂದೇಶವಾಹಕರಿಗೆ ಅಧಿಕಾರವನ್ನು ನೀಡುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.

[1] ಬನೂ ನದೀರ್ ವಾಸವಾಗಿದ್ದ ಸ್ಥಳವು ಮದೀನದಿಂದ ಕೇವಲ ಮೂರು ಅಥವಾ ನಾಲ್ಕು ಮೈಲು ದೂರದಲ್ಲಿತ್ತು. ಆದ್ದರಿಂದ ಅದನ್ನು ವಶಪಡಿಸಲು ಮುಸ್ಲಿಮರಿಗೆ ದೀರ್ಘ ಯಾತ್ರೆ ಮಾಡುವ ಅಗತ್ಯ ಬರಲಿಲ್ಲ. ಅಥವಾ ಅದನ್ನು ವಶಪಡಿಸಲು ಮುಸ್ಲಿಮರಿಗೆ ಒಂಟೆ ಅಥವಾ ಕುದುರೆಗಳನ್ನು ಓಡಿಸಬೇಕಾಗಿ ಬರಲಿಲ್ಲ. ಮಾತ್ರವಲ್ಲದೆ, ಅದನ್ನು ಒಪ್ಪಂದದ ಮೂಲಕ ವಶಪಡಿಸಲಾಯಿತು. ಯುದ್ಧವಿಲ್ಲದೆ ವಶವಾಗುವ ಸಂಪತ್ತನ್ನು ಫೈಅ್ ಎಂದು ಕರೆಯಲಾಗುತ್ತದೆ. ಯುದ್ಧದಿಂದ ವಶವಾಗುವ ಸಂಪತ್ತನ್ನು ಗನೀಮತ್ (ಸಮರಾರ್ಜಿತ ಸೊತ್ತು) ಎಂದು ಕರೆಯಲಾಗುತ್ತದೆ.
ಅವರ ಆಸ್ತಿಗಳಲ್ಲಿ ಏನನ್ನೆಲ್ಲಾ ಅಲ್ಲಾಹು ಅವನ ಸಂದೇಶವಾಹಕರಿಗೆ ವಶಪಡಿಸಿಕೊಟ್ಟನೋ ಅದಕ್ಕಾಗಿ ನೀವು ಕುದುರೆಗಳನ್ನೋ ಒಂಟೆಗಳನ್ನೋ ಓಡಿಸಬೇಕಾಗಿ ಬರಲಿಲ್ಲ.[1] ಅಲ್ಲಾಹು ಅವನು ಇಚ್ಛಿಸುವವರ ಮೇಲೆ ಅವನ ಸಂದೇಶವಾಹಕರಿಗೆ ಅಧಿಕಾರವನ್ನು ನೀಡುತ್ತಾನೆ. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.

مَّآ أَفَآءَ ٱللَّهُ عَلَىٰ رَسُولِهِۦ مِنۡ أَهۡلِ ٱلۡقُرَىٰ فَلِلَّهِ وَلِلرَّسُولِ وَلِذِي ٱلۡقُرۡبَىٰ وَٱلۡيَتَٰمَىٰ وَٱلۡمَسَٰكِينِ وَٱبۡنِ ٱلسَّبِيلِ كَيۡ لَا يَكُونَ دُولَةَۢ بَيۡنَ ٱلۡأَغۡنِيَآءِ مِنكُمۡۚ وَمَآ ءَاتَىٰكُمُ ٱلرَّسُولُ فَخُذُوهُ وَمَا نَهَىٰكُمۡ عَنۡهُ فَٱنتَهُواْۚ وَٱتَّقُواْ ٱللَّهَۖ إِنَّ ٱللَّهَ شَدِيدُ ٱلۡعِقَابِ

ವಿವಿಧ ಊರುಗಳ ಜನರ ಆಸ್ತಿಗಳಿಂದ ಅಲ್ಲಾಹು ತನ್ನ ಸಂದೇಶವಾಹಕರಿಗೆ ಏನನ್ನು ವಶಪಡಿಸಿಕೊಟ್ಟನೋ, ಅದು ಅಲ್ಲಾಹನಿಗೆ, ಸಂದೇಶವಾಹಕರಿಗೆ, ಹತ್ತಿರದ ಸಂಬಂಧಿಕರಿಗೆ, ಅನಾಥರಿಗೆ, ಕಡುಬಡವರಿಗೆ ಮತ್ತು ಪ್ರಯಾಣಿಕರಿಗೆ ಇರುವುದಾಗಿದೆ. ಇದೇಕೆಂದರೆ, ಧನವು ನಿಮ್ಮಲ್ಲಿನ ಶ್ರೀಮಂತರ ನಡುವೆ ಮಾತ್ರ ಚಲಾವಣೆಯಾಗದಿರುವುದಕ್ಕಾಗಿ. ಸಂದೇಶವಾಹಕರು ನಿಮಗೆ ಏನು ಕೊಡುತ್ತಾರೋ ಅದನ್ನು ಸ್ವೀಕರಿಸಿರಿ ಮತ್ತು ಅವರು ನಿಮಗೆ ಏನು ವಿರೋಧಿಸುತ್ತಾರೋ ಅದರಿಂದ ದೂರವಿರಿ. ಅಲ್ಲಾಹನನ್ನು ಭಯಪಡಿರಿ. ನಿಶ್ತಯವಾಗಿಯೂ ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.

ವಿವಿಧ ಊರುಗಳ ಜನರ ಆಸ್ತಿಗಳಿಂದ ಅಲ್ಲಾಹು ತನ್ನ ಸಂದೇಶವಾಹಕರಿಗೆ ಏನನ್ನು ವಶಪಡಿಸಿಕೊಟ್ಟನೋ, ಅದು ಅಲ್ಲಾಹನಿಗೆ, ಸಂದೇಶವಾಹಕರಿಗೆ, ಹತ್ತಿರದ ಸಂಬಂಧಿಕರಿಗೆ, ಅನಾಥರಿಗೆ, ಕಡುಬಡವರಿಗೆ ಮತ್ತು ಪ್ರಯಾಣಿಕರಿಗೆ ಇರುವುದಾಗಿದೆ. ಇದೇಕೆಂದರೆ, ಧನವು ನಿಮ್ಮಲ್ಲಿನ ಶ್ರೀಮಂತರ ನಡುವೆ ಮಾತ್ರ ಚಲಾವಣೆಯಾಗದಿರುವುದಕ್ಕಾಗಿ. ಸಂದೇಶವಾಹಕರು ನಿಮಗೆ ಏನು ಕೊಡುತ್ತಾರೋ ಅದನ್ನು ಸ್ವೀಕರಿಸಿರಿ ಮತ್ತು ಅವರು ನಿಮಗೆ ಏನು ವಿರೋಧಿಸುತ್ತಾರೋ ಅದರಿಂದ ದೂರವಿರಿ. ಅಲ್ಲಾಹನನ್ನು ಭಯಪಡಿರಿ. ನಿಶ್ತಯವಾಗಿಯೂ ಅಲ್ಲಾಹು ಅತಿಕಠೋರವಾಗಿ ಶಿಕ್ಷಿಸುವವನಾಗಿದ್ದಾನೆ.

لِلۡفُقَرَآءِ ٱلۡمُهَٰجِرِينَ ٱلَّذِينَ أُخۡرِجُواْ مِن دِيَٰرِهِمۡ وَأَمۡوَٰلِهِمۡ يَبۡتَغُونَ فَضۡلٗا مِّنَ ٱللَّهِ وَرِضۡوَٰنٗا وَيَنصُرُونَ ٱللَّهَ وَرَسُولَهُۥٓۚ أُوْلَٰٓئِكَ هُمُ ٱلصَّٰدِقُونَ

(ಆ ಧನವು) ತಮ್ಮ ಮನೆಗಳಿಂದ ಮತ್ತು ಆಸ್ತಿಗಳಿಂದ ಹೊರದಬ್ಬಲಾದ ಬಡ ಮುಹಾಜಿರರಿಗೆ ಇರುವುದಾಗಿದೆ. ಅವರು ಅಲ್ಲಾಹನ ಔದಾರ್ಯ ಮತ್ತು ಸಂಪ್ರೀತಿಯನ್ನು ಹುಡುಕುತ್ತಾರೆ ಮತ್ತು ಅಲ್ಲಾಹು ಹಾಗೂ ಅವನ ಸಂದೇಶವಾಹಕರಿಗೆ ಸಹಾಯ ಮಾಡುತ್ತಾರೆ. ಅವರೇ ಸತ್ಯವಂತರು.

(ಆ ಧನವು) ತಮ್ಮ ಮನೆಗಳಿಂದ ಮತ್ತು ಆಸ್ತಿಗಳಿಂದ ಹೊರದಬ್ಬಲಾದ ಬಡ ಮುಹಾಜಿರರಿಗೆ ಇರುವುದಾಗಿದೆ. ಅವರು ಅಲ್ಲಾಹನ ಔದಾರ್ಯ ಮತ್ತು ಸಂಪ್ರೀತಿಯನ್ನು ಹುಡುಕುತ್ತಾರೆ ಮತ್ತು ಅಲ್ಲಾಹು ಹಾಗೂ ಅವನ ಸಂದೇಶವಾಹಕರಿಗೆ ಸಹಾಯ ಮಾಡುತ್ತಾರೆ. ಅವರೇ ಸತ್ಯವಂತರು.

وَٱلَّذِينَ تَبَوَّءُو ٱلدَّارَ وَٱلۡإِيمَٰنَ مِن قَبۡلِهِمۡ يُحِبُّونَ مَنۡ هَاجَرَ إِلَيۡهِمۡ وَلَا يَجِدُونَ فِي صُدُورِهِمۡ حَاجَةٗ مِّمَّآ أُوتُواْ وَيُؤۡثِرُونَ عَلَىٰٓ أَنفُسِهِمۡ وَلَوۡ كَانَ بِهِمۡ خَصَاصَةٞۚ وَمَن يُوقَ شُحَّ نَفۡسِهِۦ فَأُوْلَٰٓئِكَ هُمُ ٱلۡمُفۡلِحُونَ

ಅವರಿಗಿಂತ ಮೊದಲೇ ಆ ಮನೆಯಲ್ಲಿ (ಮದೀನದಲ್ಲಿ) ಮತ್ತು ಸತ್ಯವಿಶ್ವಾಸದಲ್ಲಿ ವಾಸ್ತವ್ಯವನ್ನು ಸಿದ್ಧಗೊಳಿಸಿದವರಿಗೂ (ಇರುವುದಾಗಿದೆ). ಅವರು ತಮ್ಮ ಬಳಿಗೆ ವಲಸೆ (ಹಿಜ್ರ) ಮಾಡಿದವರನ್ನು ಪ್ರೀತಿಸುತ್ತಾರೆ.[1] ಮುಹಾಜಿರರಿಗೆ ಏನು ಕೊಡಲಾಗುತ್ತದೋ ಅದರ ಬಗ್ಗೆ ಇವರಿಗೆ ಇವರ ಹೃದಯದಲ್ಲಿ ಯಾವುದೇ ಅಸಮಾಧಾನವು ಉಂಟಾಗುವುದಿಲ್ಲ. ತಮಗೆ ಎಷ್ಟೇ ಅಗತ್ಯವಿದ್ದರೂ ಸಹ ಇವರು ಅವರಿಗೆ ಆದ್ಯತೆಯನ್ನು ನೀಡುತ್ತಾರೆ. ಯಾರನ್ನು ಅವರ ಮನಸ್ಸಿನ ಜಿಪುಣತನದಿಂದ ರಕ್ಷಿಸಲಾಗಿದೆಯೋ ಅವರೇ ಯಶಸ್ವಿಯಾದವರು.

[1] ಮುಹಾಜಿರ್‌ಗಳೆಂದರೆ ಮಕ್ಕಾದಿಂದ ಮದೀನಕ್ಕೆ ವಲಸೆ ಬಂದವರು. ಅವರಿಗೆ ಸಂರಕ್ಷಣೆ ನೀಡಿ ಸಹಾಯ ಮಾಡಿದ ಮದೀನ ನಿವಾಸಿಗಳಾದ ಮುಸ್ಲಿಮರನ್ನು ಅನ್ಸಾರ್ ಎಂದು ಕರೆಯಲಾಗುತ್ತದೆ.
ಅವರಿಗಿಂತ ಮೊದಲೇ ಆ ಮನೆಯಲ್ಲಿ (ಮದೀನದಲ್ಲಿ) ಮತ್ತು ಸತ್ಯವಿಶ್ವಾಸದಲ್ಲಿ ವಾಸ್ತವ್ಯವನ್ನು ಸಿದ್ಧಗೊಳಿಸಿದವರಿಗೂ (ಇರುವುದಾಗಿದೆ). ಅವರು ತಮ್ಮ ಬಳಿಗೆ ವಲಸೆ (ಹಿಜ್ರ) ಮಾಡಿದವರನ್ನು ಪ್ರೀತಿಸುತ್ತಾರೆ.[1] ಮುಹಾಜಿರರಿಗೆ ಏನು ಕೊಡಲಾಗುತ್ತದೋ ಅದರ ಬಗ್ಗೆ ಇವರಿಗೆ ಇವರ ಹೃದಯದಲ್ಲಿ ಯಾವುದೇ ಅಸಮಾಧಾನವು ಉಂಟಾಗುವುದಿಲ್ಲ. ತಮಗೆ ಎಷ್ಟೇ ಅಗತ್ಯವಿದ್ದರೂ ಸಹ ಇವರು ಅವರಿಗೆ ಆದ್ಯತೆಯನ್ನು ನೀಡುತ್ತಾರೆ. ಯಾರನ್ನು ಅವರ ಮನಸ್ಸಿನ ಜಿಪುಣತನದಿಂದ ರಕ್ಷಿಸಲಾಗಿದೆಯೋ ಅವರೇ ಯಶಸ್ವಿಯಾದವರು.

وَٱلَّذِينَ جَآءُو مِنۢ بَعۡدِهِمۡ يَقُولُونَ رَبَّنَا ٱغۡفِرۡ لَنَا وَلِإِخۡوَٰنِنَا ٱلَّذِينَ سَبَقُونَا بِٱلۡإِيمَٰنِ وَلَا تَجۡعَلۡ فِي قُلُوبِنَا غِلّٗا لِّلَّذِينَ ءَامَنُواْ رَبَّنَآ إِنَّكَ رَءُوفٞ رَّحِيمٌ

ಅವರ ಬಳಿಕ ಬಂದವರಿಗೂ (ಇರುವುದಾಗಿದೆ). ಅವರು ಹೇಳುತ್ತಾರೆ: “ನಮ್ಮ ಪರಿಪಾಲಕನೇ! ನಮಗೆ ಮತ್ತು ಸತ್ಯವಿಶ್ವಾಸದಲ್ಲಿ ನಮಗಿಂತ ಮುಂಚೂಣಿಯಲ್ಲಿರುವ ನಮ್ಮ ಸಹೋದರರಿಗೆ ಕ್ಷಮಿಸು. ಸತ್ಯವಿಶ್ವಾಸಿಗಳ ಬಗ್ಗೆ ನಮ್ಮ ಹೃದಯದಲ್ಲಿ ಯಾವುದೇ ದ್ವೇಷವನ್ನು ಉಂಟುಮಾಡಬೇಡ. ನಮ್ಮ ಪರಿಪಾಲಕನೇ! ನಿಶ್ಚಯವಾಗಿಯೂ ನೀನು ಕೃಪೆ ತೋರುವವನು ಮತ್ತು ದಯೆ ತೋರುವವನಾಗಿರುವೆ.”

ಅವರ ಬಳಿಕ ಬಂದವರಿಗೂ (ಇರುವುದಾಗಿದೆ). ಅವರು ಹೇಳುತ್ತಾರೆ: “ನಮ್ಮ ಪರಿಪಾಲಕನೇ! ನಮಗೆ ಮತ್ತು ಸತ್ಯವಿಶ್ವಾಸದಲ್ಲಿ ನಮಗಿಂತ ಮುಂಚೂಣಿಯಲ್ಲಿರುವ ನಮ್ಮ ಸಹೋದರರಿಗೆ ಕ್ಷಮಿಸು. ಸತ್ಯವಿಶ್ವಾಸಿಗಳ ಬಗ್ಗೆ ನಮ್ಮ ಹೃದಯದಲ್ಲಿ ಯಾವುದೇ ದ್ವೇಷವನ್ನು ಉಂಟುಮಾಡಬೇಡ. ನಮ್ಮ ಪರಿಪಾಲಕನೇ! ನಿಶ್ಚಯವಾಗಿಯೂ ನೀನು ಕೃಪೆ ತೋರುವವನು ಮತ್ತು ದಯೆ ತೋರುವವನಾಗಿರುವೆ.”

۞ أَلَمۡ تَرَ إِلَى ٱلَّذِينَ نَافَقُواْ يَقُولُونَ لِإِخۡوَٰنِهِمُ ٱلَّذِينَ كَفَرُواْ مِنۡ أَهۡلِ ٱلۡكِتَٰبِ لَئِنۡ أُخۡرِجۡتُمۡ لَنَخۡرُجَنَّ مَعَكُمۡ وَلَا نُطِيعُ فِيكُمۡ أَحَدًا أَبَدٗا وَإِن قُوتِلۡتُمۡ لَنَنصُرَنَّكُمۡ وَٱللَّهُ يَشۡهَدُ إِنَّهُمۡ لَكَٰذِبُونَ

ಆ ಕಪಟವಿಶ್ವಾಸಿಗಳನ್ನು ನೀವು ನೋಡಿಲ್ಲವೇ? ಗ್ರಂಥದವರಲ್ಲಿ ಸೇರಿದ ತಮ್ಮ ಸತ್ಯನಿಷೇಧಿ ಸಹೋದರರೊಂದಿಗೆ ಅವರು ಹೇಳುತ್ತಾರೆ: “ನಿಮ್ಮನ್ನು ಗಡೀಪಾರು ಮಾಡಲಾದರೆ ಖಂಡಿತವಾಗಿಯೂ ನಾವು ನಿಮ್ಮೊಂದಿಗೆ ಹೊರಹೋಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಯಾರ ಮಾತನ್ನೂ ಕೇಳುವುದಿಲ್ಲ. ನಿಮ್ಮ ವಿರುದ್ಧ ಯುದ್ಧ ನಡೆದರೆ ಖಂಡಿತವಾಗಿಯೂ ನಾವು ನಿಮಗೆ ಸಹಾಯ ಮಾಡುತ್ತೇವೆ.” ನಿಶ್ಚಯವಾಗಿಯೂ ಅವರು ಸುಳ್ಳು ಹೇಳುತ್ತಿದ್ದಾರೆಂದು ಅಲ್ಲಾಹು ಸಾಕ್ಷಿ ನುಡಿಯುತ್ತಾನೆ.

ಆ ಕಪಟವಿಶ್ವಾಸಿಗಳನ್ನು ನೀವು ನೋಡಿಲ್ಲವೇ? ಗ್ರಂಥದವರಲ್ಲಿ ಸೇರಿದ ತಮ್ಮ ಸತ್ಯನಿಷೇಧಿ ಸಹೋದರರೊಂದಿಗೆ ಅವರು ಹೇಳುತ್ತಾರೆ: “ನಿಮ್ಮನ್ನು ಗಡೀಪಾರು ಮಾಡಲಾದರೆ ಖಂಡಿತವಾಗಿಯೂ ನಾವು ನಿಮ್ಮೊಂದಿಗೆ ಹೊರಹೋಗುತ್ತೇವೆ. ನಿಮ್ಮ ವಿಷಯದಲ್ಲಿ ನಾವು ಯಾರ ಮಾತನ್ನೂ ಕೇಳುವುದಿಲ್ಲ. ನಿಮ್ಮ ವಿರುದ್ಧ ಯುದ್ಧ ನಡೆದರೆ ಖಂಡಿತವಾಗಿಯೂ ನಾವು ನಿಮಗೆ ಸಹಾಯ ಮಾಡುತ್ತೇವೆ.” ನಿಶ್ಚಯವಾಗಿಯೂ ಅವರು ಸುಳ್ಳು ಹೇಳುತ್ತಿದ್ದಾರೆಂದು ಅಲ್ಲಾಹು ಸಾಕ್ಷಿ ನುಡಿಯುತ್ತಾನೆ.

لَئِنۡ أُخۡرِجُواْ لَا يَخۡرُجُونَ مَعَهُمۡ وَلَئِن قُوتِلُواْ لَا يَنصُرُونَهُمۡ وَلَئِن نَّصَرُوهُمۡ لَيُوَلُّنَّ ٱلۡأَدۡبَٰرَ ثُمَّ لَا يُنصَرُونَ

ಅವರನ್ನು (ಯಹೂದಿಗಳನ್ನು) ಗಡೀಪಾರು ಮಾಡಲಾದರೆ ಇವರು (ಕಪಟವಿಶ್ವಾಸಿಗಳು) ಅವರ ಜೊತೆಗೆ ಖಂಡಿತ ಹೊರಹೋಗುವುದಿಲ್ಲ. ಅವರ ವಿರುದ್ಧ ಯುದ್ಧ ನಡೆದರೆ ಇವರು ಅವರಿಗೆ ಸಹಾಯ ಮಾಡುವುದೂ ಇಲ್ಲ. ಇವರು ಅವರಿಗೆ ಸಹಾಯ ಮಾಡಲು ಬಂದರೂ ಇವರು ಖಂಡಿತವಾಗಿಯೂ ಬೆನ್ನು ತೋರಿಸಿ ಓಡುತ್ತಾರೆ. ನಂತರ ಅವರಿಗೆ ಯಾವುದೇ ಸಹಾಯವೂ ದೊರೆಯುವುದಿಲ್ಲ.

ಅವರನ್ನು (ಯಹೂದಿಗಳನ್ನು) ಗಡೀಪಾರು ಮಾಡಲಾದರೆ ಇವರು (ಕಪಟವಿಶ್ವಾಸಿಗಳು) ಅವರ ಜೊತೆಗೆ ಖಂಡಿತ ಹೊರಹೋಗುವುದಿಲ್ಲ. ಅವರ ವಿರುದ್ಧ ಯುದ್ಧ ನಡೆದರೆ ಇವರು ಅವರಿಗೆ ಸಹಾಯ ಮಾಡುವುದೂ ಇಲ್ಲ. ಇವರು ಅವರಿಗೆ ಸಹಾಯ ಮಾಡಲು ಬಂದರೂ ಇವರು ಖಂಡಿತವಾಗಿಯೂ ಬೆನ್ನು ತೋರಿಸಿ ಓಡುತ್ತಾರೆ. ನಂತರ ಅವರಿಗೆ ಯಾವುದೇ ಸಹಾಯವೂ ದೊರೆಯುವುದಿಲ್ಲ.

لَأَنتُمۡ أَشَدُّ رَهۡبَةٗ فِي صُدُورِهِم مِّنَ ٱللَّهِۚ ذَٰلِكَ بِأَنَّهُمۡ قَوۡمٞ لَّا يَفۡقَهُونَ

ಅವರ ಹೃದಯಗಳಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ನಿಮ್ಮ ಬಗ್ಗೆ ಭಯವಿದೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ.

ಅವರ ಹೃದಯಗಳಲ್ಲಿ ಅಲ್ಲಾಹನಿಗಿಂತಲೂ ಹೆಚ್ಚು ನಿಮ್ಮ ಬಗ್ಗೆ ಭಯವಿದೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ.

لَا يُقَٰتِلُونَكُمۡ جَمِيعًا إِلَّا فِي قُرٗى مُّحَصَّنَةٍ أَوۡ مِن وَرَآءِ جُدُرِۭۚ بَأۡسُهُم بَيۡنَهُمۡ شَدِيدٞۚ تَحۡسَبُهُمۡ جَمِيعٗا وَقُلُوبُهُمۡ شَتَّىٰۚ ذَٰلِكَ بِأَنَّهُمۡ قَوۡمٞ لَّا يَعۡقِلُونَ

ಅವರೆಲ್ಲರೂ ಒಟ್ಟಾಗಿಯೂ ಕೂಡ ನಿಮ್ಮೊಡನೆ ಯುದ್ಧ ಮಾಡಲಾರರು—ಸುಭದ್ರ ಕೋಟೆಗಳಿರುವ ನಗರಗಳಿಂದ ಅಥವಾ ಗೋಡೆಗಳ ಹಿಂಭಾಗದಿಂದ ಹೊರತು. ಅವರೊಳಗಿನ ಆಂತರಿಕ ಕಲಹವು ಬಹಳ ತೀಕ್ಷ್ಣವಾಗಿದೆ. ಅವರು ಒಗ್ಗಟ್ಟಿನಲ್ಲಿದ್ದಾರೆಂದು ನೀವು ಭಾವಿಸುತ್ತೀರಿ. ಆದರೆ ಅವರ ಹೃದಯಗಳು ಭಿನ್ನವಾಗಿವೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ.

ಅವರೆಲ್ಲರೂ ಒಟ್ಟಾಗಿಯೂ ಕೂಡ ನಿಮ್ಮೊಡನೆ ಯುದ್ಧ ಮಾಡಲಾರರು—ಸುಭದ್ರ ಕೋಟೆಗಳಿರುವ ನಗರಗಳಿಂದ ಅಥವಾ ಗೋಡೆಗಳ ಹಿಂಭಾಗದಿಂದ ಹೊರತು. ಅವರೊಳಗಿನ ಆಂತರಿಕ ಕಲಹವು ಬಹಳ ತೀಕ್ಷ್ಣವಾಗಿದೆ. ಅವರು ಒಗ್ಗಟ್ಟಿನಲ್ಲಿದ್ದಾರೆಂದು ನೀವು ಭಾವಿಸುತ್ತೀರಿ. ಆದರೆ ಅವರ ಹೃದಯಗಳು ಭಿನ್ನವಾಗಿವೆ. ಅದೇಕೆಂದರೆ, ಅವರು (ಸತ್ಯಸಂಗತಿಯನ್ನು) ಅರ್ಥಮಾಡಿಕೊಳ್ಳದ ಜನರಾಗಿದ್ದಾರೆ.

كَمَثَلِ ٱلَّذِينَ مِن قَبۡلِهِمۡ قَرِيبٗاۖ ذَاقُواْ وَبَالَ أَمۡرِهِمۡ وَلَهُمۡ عَذَابٌ أَلِيمٞ

(ಅವರ ಸ್ಥಿತಿಯು) ಅವರಿಗಿಂತ ಸ್ವಲ್ಪ ಮೊದಲಿನವರ ಸ್ಥಿತಿಯಂತೆ![1] ಅವರು ತಮ್ಮ ಕಾರ್ಯದ ದುಷ್ಫಲವನ್ನು ಅನುಭವಿಸಿದರು. ಅವರಿಗೆ ವೇದನಾಭರಿತ ಶಿಕ್ಷೆಯಿದೆ.

[1] ಅಂದರೆ ಬದ್ರ್ ಯುದ್ಧದಲ್ಲಿ ಸೋತು ಸುಣ್ಣವಾಗಿ ಹೋದ ಕುರೈಶರು, ಅಥವಾ ಯಹೂದಿಗಳ ಇನ್ನೊಂದು ಗೋತ್ರವಾದ ಬನೂ ಕೈನುಕಾದವರು.
(ಅವರ ಸ್ಥಿತಿಯು) ಅವರಿಗಿಂತ ಸ್ವಲ್ಪ ಮೊದಲಿನವರ ಸ್ಥಿತಿಯಂತೆ![1] ಅವರು ತಮ್ಮ ಕಾರ್ಯದ ದುಷ್ಫಲವನ್ನು ಅನುಭವಿಸಿದರು. ಅವರಿಗೆ ವೇದನಾಭರಿತ ಶಿಕ್ಷೆಯಿದೆ.

كَمَثَلِ ٱلشَّيۡطَٰنِ إِذۡ قَالَ لِلۡإِنسَٰنِ ٱكۡفُرۡ فَلَمَّا كَفَرَ قَالَ إِنِّي بَرِيٓءٞ مِّنكَ إِنِّيٓ أَخَافُ ٱللَّهَ رَبَّ ٱلۡعَٰلَمِينَ

ಶೈತಾನನ ಸ್ಥಿತಿಯಂತೆ! ಅವನು ಮನುಷ್ಯನೊಡನೆ “ಸತ್ಯನಿಷೇಧಿಯಾಗು” ಎಂದು ಹೇಳಿದ ಸಂದರ್ಭ. ಮನುಷ್ಯ ಸತ್ಯನಿಷೇಧಿಯಾದಾಗ ಅವನು ಹೇಳುತ್ತಾನೆ: “ನಿಶ್ಚಯವಾಗಿಯೂ ನಾನು ನಿನ್ನಿಂದ ದೂರ ಸರಿದಿದ್ದೇನೆ. ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನನ್ನು ಭಯಪಡುತ್ತೇನೆ.”

ಶೈತಾನನ ಸ್ಥಿತಿಯಂತೆ! ಅವನು ಮನುಷ್ಯನೊಡನೆ “ಸತ್ಯನಿಷೇಧಿಯಾಗು” ಎಂದು ಹೇಳಿದ ಸಂದರ್ಭ. ಮನುಷ್ಯ ಸತ್ಯನಿಷೇಧಿಯಾದಾಗ ಅವನು ಹೇಳುತ್ತಾನೆ: “ನಿಶ್ಚಯವಾಗಿಯೂ ನಾನು ನಿನ್ನಿಂದ ದೂರ ಸರಿದಿದ್ದೇನೆ. ನಿಶ್ಚಯವಾಗಿಯೂ ನಾನು ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನನ್ನು ಭಯಪಡುತ್ತೇನೆ.”

فَكَانَ عَٰقِبَتَهُمَآ أَنَّهُمَا فِي ٱلنَّارِ خَٰلِدَيۡنِ فِيهَاۚ وَذَٰلِكَ جَزَٰٓؤُاْ ٱلظَّٰلِمِينَ

ಹೀಗೆ ಅವರಿಬ್ಬರ ಅಂತ್ಯವು ಅವರಿಬ್ಬರೂ ನರಕದಲ್ಲಿ ಶಾಶ್ವತವಾಗಿ ವಾಸಿಸುವುದಾಗಿದೆ. ಅದು ಅಕ್ರಮಿಗಳಿಗಿರುವ ಪ್ರತಿಫಲವಾಗಿದೆ.

ಹೀಗೆ ಅವರಿಬ್ಬರ ಅಂತ್ಯವು ಅವರಿಬ್ಬರೂ ನರಕದಲ್ಲಿ ಶಾಶ್ವತವಾಗಿ ವಾಸಿಸುವುದಾಗಿದೆ. ಅದು ಅಕ್ರಮಿಗಳಿಗಿರುವ ಪ್ರತಿಫಲವಾಗಿದೆ.

يَٰٓأَيُّهَا ٱلَّذِينَ ءَامَنُواْ ٱتَّقُواْ ٱللَّهَ وَلۡتَنظُرۡ نَفۡسٞ مَّا قَدَّمَتۡ لِغَدٖۖ وَٱتَّقُواْ ٱللَّهَۚ إِنَّ ٱللَّهَ خَبِيرُۢ بِمَا تَعۡمَلُونَ

ಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ. ಪ್ರತಿಯೊಬ್ಬರೂ ನಾಳೆಗಾಗಿ (ಪುನರುತ್ಥಾನ ದಿನಕ್ಕಾಗಿ) ಏನು ಮಾಡಿದ್ದೇನೆಂದು ನೋಡಿಕೊಳ್ಳಲಿ. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.

ಓ ಸತ್ಯವಿಶ್ವಾಸಿಗಳೇ! ಅಲ್ಲಾಹನನ್ನು ಭಯಪಡಿರಿ. ಪ್ರತಿಯೊಬ್ಬರೂ ನಾಳೆಗಾಗಿ (ಪುನರುತ್ಥಾನ ದಿನಕ್ಕಾಗಿ) ಏನು ಮಾಡಿದ್ದೇನೆಂದು ನೋಡಿಕೊಳ್ಳಲಿ. ಅಲ್ಲಾಹನನ್ನು ಭಯಪಡಿರಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.

وَلَا تَكُونُواْ كَٱلَّذِينَ نَسُواْ ٱللَّهَ فَأَنسَىٰهُمۡ أَنفُسَهُمۡۚ أُوْلَٰٓئِكَ هُمُ ٱلۡفَٰسِقُونَ

ನೀವು ಅಲ್ಲಾಹನನ್ನು (ಅಲ್ಲಾಹನ ನಿಯಮಗಳನ್ನು) ಮರೆತುಬಿಟ್ಟ ಜನರಂತೆ ಆಗಬೇಡಿ. ಆಗ ಅವರು ಅವರನ್ನೇ ಮರೆಯುವಂತೆ ಅಲ್ಲಾಹು ಮಾಡಿದನು. ಅವರೇ ದುಷ್ಕರ್ಮಿಗಳು.

ನೀವು ಅಲ್ಲಾಹನನ್ನು (ಅಲ್ಲಾಹನ ನಿಯಮಗಳನ್ನು) ಮರೆತುಬಿಟ್ಟ ಜನರಂತೆ ಆಗಬೇಡಿ. ಆಗ ಅವರು ಅವರನ್ನೇ ಮರೆಯುವಂತೆ ಅಲ್ಲಾಹು ಮಾಡಿದನು. ಅವರೇ ದುಷ್ಕರ್ಮಿಗಳು.

لَا يَسۡتَوِيٓ أَصۡحَٰبُ ٱلنَّارِ وَأَصۡحَٰبُ ٱلۡجَنَّةِۚ أَصۡحَٰبُ ٱلۡجَنَّةِ هُمُ ٱلۡفَآئِزُونَ

ನರಕವಾಸಿಗಳು ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳೇ ಯಶಸ್ವಿಯಾದವರು.

ನರಕವಾಸಿಗಳು ಮತ್ತು ಸ್ವರ್ಗವಾಸಿಗಳು ಸಮಾನರಲ್ಲ. ಸ್ವರ್ಗವಾಸಿಗಳೇ ಯಶಸ್ವಿಯಾದವರು.

لَوۡ أَنزَلۡنَا هَٰذَا ٱلۡقُرۡءَانَ عَلَىٰ جَبَلٖ لَّرَأَيۡتَهُۥ خَٰشِعٗا مُّتَصَدِّعٗا مِّنۡ خَشۡيَةِ ٱللَّهِۚ وَتِلۡكَ ٱلۡأَمۡثَٰلُ نَضۡرِبُهَا لِلنَّاسِ لَعَلَّهُمۡ يَتَفَكَّرُونَ

ನಾವು ಈ ಕುರ್‌ಆನನ್ನು ಒಂದು ಪರ್ವತದ ಮೇಲೆ ಅವತೀರ್ಣಗೊಳಿಸುತ್ತಿದ್ದರೆ ಅಲ್ಲಾಹನ ಭಯದಿಂದ ಅದು ವಿನಮ್ರವಾಗಿ ಒಡೆದು ಚೂರಾಗುವುದನ್ನು ನೀವು ಕಾಣುತ್ತಿದ್ದಿರಿ. ನಾವು ಜನರಿಗೆ ಈ ಉದಾಹರಣೆಗಳನ್ನು ವಿವರಿಸಿಕೊಡುತ್ತೇವೆ. ಅವರು ಆಲೋಚಿಸುವುದಕ್ಕಾಗಿ.

ನಾವು ಈ ಕುರ್‌ಆನನ್ನು ಒಂದು ಪರ್ವತದ ಮೇಲೆ ಅವತೀರ್ಣಗೊಳಿಸುತ್ತಿದ್ದರೆ ಅಲ್ಲಾಹನ ಭಯದಿಂದ ಅದು ವಿನಮ್ರವಾಗಿ ಒಡೆದು ಚೂರಾಗುವುದನ್ನು ನೀವು ಕಾಣುತ್ತಿದ್ದಿರಿ. ನಾವು ಜನರಿಗೆ ಈ ಉದಾಹರಣೆಗಳನ್ನು ವಿವರಿಸಿಕೊಡುತ್ತೇವೆ. ಅವರು ಆಲೋಚಿಸುವುದಕ್ಕಾಗಿ.

هُوَ ٱللَّهُ ٱلَّذِي لَآ إِلَٰهَ إِلَّا هُوَۖ عَٰلِمُ ٱلۡغَيۡبِ وَٱلشَّهَٰدَةِۖ هُوَ ٱلرَّحۡمَٰنُ ٱلرَّحِيمُ

ಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ದೃಶ್ಯ-ಅದೃಶ್ಯವನ್ನು ತಿಳಿದವನು. ಅವನು ಪರಮ ದಯಾಮಯನು ಮತ್ತು ಕರುಣಾನಿಧಿಯಾಗಿದ್ದಾನೆ.

ಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ದೃಶ್ಯ-ಅದೃಶ್ಯವನ್ನು ತಿಳಿದವನು. ಅವನು ಪರಮ ದಯಾಮಯನು ಮತ್ತು ಕರುಣಾನಿಧಿಯಾಗಿದ್ದಾನೆ.

هُوَ ٱللَّهُ ٱلَّذِي لَآ إِلَٰهَ إِلَّا هُوَ ٱلۡمَلِكُ ٱلۡقُدُّوسُ ٱلسَّلَٰمُ ٱلۡمُؤۡمِنُ ٱلۡمُهَيۡمِنُ ٱلۡعَزِيزُ ٱلۡجَبَّارُ ٱلۡمُتَكَبِّرُۚ سُبۡحَٰنَ ٱللَّهِ عَمَّا يُشۡرِكُونَ

ಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಸಾಮ್ರಾಟನು, ಪರಮ ಪರಿಶುದ್ಧನು, (ಎಲ್ಲಾ ಕುಂದು-ಕೊರತೆಗಳಿಂದ ಮತ್ತು ಅಪೂರ್ಣತೆಗಳಿಂದ) ಸುರಕ್ಷಿತನು, ಅಭಯದಾತನು, ಮೇಲ್ನೋಟ ವಹಿಸುವವನು, ಪ್ರಬಲನು, ಸರ್ವಾಧಿಕಾರಿ ಮತ್ತು ಮಹಾಮಹಿಮನು. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ.

ಅವನೇ ಅಲ್ಲಾಹು! ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಅವನು ಸಾಮ್ರಾಟನು, ಪರಮ ಪರಿಶುದ್ಧನು, (ಎಲ್ಲಾ ಕುಂದು-ಕೊರತೆಗಳಿಂದ ಮತ್ತು ಅಪೂರ್ಣತೆಗಳಿಂದ) ಸುರಕ್ಷಿತನು, ಅಭಯದಾತನು, ಮೇಲ್ನೋಟ ವಹಿಸುವವನು, ಪ್ರಬಲನು, ಸರ್ವಾಧಿಕಾರಿ ಮತ್ತು ಮಹಾಮಹಿಮನು. ಅವರು ಮಾಡುವ ಸಹಭಾಗಿತ್ವ (ಶಿರ್ಕ್) ದಿಂದ ಅಲ್ಲಾಹು ಎಷ್ಟೋ ಪರಿಶುದ್ಧನಾಗಿದ್ದಾನೆ.

هُوَ ٱللَّهُ ٱلۡخَٰلِقُ ٱلۡبَارِئُ ٱلۡمُصَوِّرُۖ لَهُ ٱلۡأَسۡمَآءُ ٱلۡحُسۡنَىٰۚ يُسَبِّحُ لَهُۥ مَا فِي ٱلسَّمَٰوَٰتِ وَٱلۡأَرۡضِۖ وَهُوَ ٱلۡعَزِيزُ ٱلۡحَكِيمُ

ಅವನೇ ಅಲ್ಲಾಹು! ಸೃಷ್ಟಿಕರ್ತನು, ಅಸ್ತಿತ್ವವನ್ನು ನೀಡುವವನು ಮತ್ತು ರೂಪ ನೀಡುವವನು. ಅವನಿಗೆ ಅತ್ಯುತ್ತಮವಾದ ಹೆಸರುಗಳಿವೆ. ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.

ಅವನೇ ಅಲ್ಲಾಹು! ಸೃಷ್ಟಿಕರ್ತನು, ಅಸ್ತಿತ್ವವನ್ನು ನೀಡುವವನು ಮತ್ತು ರೂಪ ನೀಡುವವನು. ಅವನಿಗೆ ಅತ್ಯುತ್ತಮವಾದ ಹೆಸರುಗಳಿವೆ. ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳೂ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಿವೆ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
Footer Include