Kannada translation - Hamza Butur
Translated by Muhammad Hamza Batur and developed under the supervision of Rowwad Translation Center
يَٰٓأَيُّهَا ٱلنَّبِيُّ ٱتَّقِ ٱللَّهَ وَلَا تُطِعِ ٱلۡكَٰفِرِينَ وَٱلۡمُنَٰفِقِينَۚ إِنَّ ٱللَّهَ كَانَ عَلِيمًا حَكِيمٗا
ಓ ಪ್ರವಾದಿಯವರೇ! ಅಲ್ಲಾಹನನ್ನು ಭಯಪಡಿರಿ. ಸತ್ಯನಿಷೇಧಿಗಳನ್ನು ಮತ್ತು ಕಪಟವಿಶ್ವಾಸಿಗಳನ್ನು ಅನುಸರಿಸಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಸರ್ವಜ್ಞನು ಮತ್ತು ವಿವೇಕಪೂರ್ಣನಾಗಿದ್ದಾನೆ.
وَٱتَّبِعۡ مَا يُوحَىٰٓ إِلَيۡكَ مِن رَّبِّكَۚ إِنَّ ٱللَّهَ كَانَ بِمَا تَعۡمَلُونَ خَبِيرٗا
ನಿಮಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನೀಡಲಾಗುವ ದೇವವಾಣಿಗಳನ್ನು ಅನುಸರಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ಸೂಕ್ಷ್ಮವಾಗಿ ತಿಳಿಯುತ್ತಾನೆ.
وَتَوَكَّلۡ عَلَى ٱللَّهِۚ وَكَفَىٰ بِٱللَّهِ وَكِيلٗا
ಅಲ್ಲಾಹನಲ್ಲಿ ಭರವಸೆಯಿಡಿ. ಕಾರ್ಯನಿರ್ವಾಹಕನಾಗಿ ಅಲ್ಲಾಹು ಸಾಕು.
مَّا جَعَلَ ٱللَّهُ لِرَجُلٖ مِّن قَلۡبَيۡنِ فِي جَوۡفِهِۦۚ وَمَا جَعَلَ أَزۡوَٰجَكُمُ ٱلَّٰٓـِٔي تُظَٰهِرُونَ مِنۡهُنَّ أُمَّهَٰتِكُمۡۚ وَمَا جَعَلَ أَدۡعِيَآءَكُمۡ أَبۡنَآءَكُمۡۚ ذَٰلِكُمۡ قَوۡلُكُم بِأَفۡوَٰهِكُمۡۖ وَٱللَّهُ يَقُولُ ٱلۡحَقَّ وَهُوَ يَهۡدِي ٱلسَّبِيلَ
ಅಲ್ಲಾಹು ಯಾವುದೇ ವ್ಯಕ್ತಿಗೂ ಅವನ ದೇಹದೊಳಗೆ ಎರಡು ಹೃದಯಗಳನ್ನು ಉಂಟುಮಾಡಿಲ್ಲ.[1] ನೀವು ಝಿಹಾರ್ ಮಾಡುವ ನಿಮ್ಮ ಪತ್ನಿಯರನ್ನು ಅವನು ನಿಮಗೆ ತಾಯಿಯಾಗಿ ಮಾಡಿಲ್ಲ.[2] ನಿಮ್ಮ ದತ್ತುಪುತ್ರರನ್ನು ಅವನು ನಿಮಗೆ ಪುತ್ರರಾಗಿ ಮಾಡಿಲ್ಲ.[3] ಇವೆಲ್ಲವೂ ನೀವು ನಿಮ್ಮ ಬಾಯಿಯಿಂದ ಹೇಳುವ ಮಾತುಗಳಾಗಿವೆ. ಅಲ್ಲಾಹು ಸತ್ಯವನ್ನೇ ಹೇಳುತ್ತಾನೆ. ಅವನು ಸನ್ಮಾರ್ಗವನ್ನು ತೋರಿಸಿಕೊಡುತ್ತಾನೆ.
ٱدۡعُوهُمۡ لِأٓبَآئِهِمۡ هُوَ أَقۡسَطُ عِندَ ٱللَّهِۚ فَإِن لَّمۡ تَعۡلَمُوٓاْ ءَابَآءَهُمۡ فَإِخۡوَٰنُكُمۡ فِي ٱلدِّينِ وَمَوَٰلِيكُمۡۚ وَلَيۡسَ عَلَيۡكُمۡ جُنَاحٞ فِيمَآ أَخۡطَأۡتُم بِهِۦ وَلَٰكِن مَّا تَعَمَّدَتۡ قُلُوبُكُمۡۚ وَكَانَ ٱللَّهُ غَفُورٗا رَّحِيمًا
ನೀವು ಅವರನ್ನು (ದತ್ತುಪುತ್ರರನ್ನು) ಅವರ ತಂದೆಯ ಹೆಸರಿಗೆ ಸೇರಿಸಿ ಕರೆಯಿರಿ. ಅದು ಅಲ್ಲಾಹನ ಬಳಿ ಅತ್ಯಂತ ನ್ಯಾಯಯುತವಾಗಿದೆ. ನಿಮಗೆ ಅವರ ತಂದೆ ಯಾರೆಂದು ಗೊತ್ತಿಲ್ಲದಿದ್ದರೆ ಅವರು ನಿಮ್ಮ ಧಾರ್ಮಿಕ ಸಹೋದರರು ಮತ್ತು ಮಿತ್ರರಾಗಿದ್ದಾರೆ. ನೀವು ಪ್ರಮಾದದಿಂದ ಏನಾದರೂ ತಪ್ಪುಗಳನ್ನು ಮಾಡಿದರೆ ಅದರಿಂದ ನಿಮಗೆ ದೋಷವಿಲ್ಲ. ಆದರೆ ನೀವು ಉದ್ದೇಶಪೂರ್ವಕ ಮಾಡುವ ತಪ್ಪುಗಳಿಗೆ ಶಿಕ್ಷೆಯಿದೆ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
ٱلنَّبِيُّ أَوۡلَىٰ بِٱلۡمُؤۡمِنِينَ مِنۡ أَنفُسِهِمۡۖ وَأَزۡوَٰجُهُۥٓ أُمَّهَٰتُهُمۡۗ وَأُوْلُواْ ٱلۡأَرۡحَامِ بَعۡضُهُمۡ أَوۡلَىٰ بِبَعۡضٖ فِي كِتَٰبِ ٱللَّهِ مِنَ ٱلۡمُؤۡمِنِينَ وَٱلۡمُهَٰجِرِينَ إِلَّآ أَن تَفۡعَلُوٓاْ إِلَىٰٓ أَوۡلِيَآئِكُم مَّعۡرُوفٗاۚ كَانَ ذَٰلِكَ فِي ٱلۡكِتَٰبِ مَسۡطُورٗا
ಸತ್ಯವಿಶ್ವಾಸಿಗಳಿಗೆ ಸ್ವಯಂ ಅವರಿಗಿಂತಲೂ ಹೆಚ್ಚು ಪ್ರವಾದಿಯವರು ಆಪ್ತರಾಗಿದ್ದಾರೆ.[1] ಅವರ ಪತ್ನಿಯರು ಸತ್ಯವಿಶ್ವಾಸಿಗಳ ಮಾತೆಯರಾಗಿದ್ದಾರೆ.[2] ಅಲ್ಲಾಹನ ಗ್ರಂಥದಲ್ಲಿ ಇತರ ಸತ್ಯವಿಶ್ವಾಸಿಗಳು ಮತ್ತು ಮುಹಾಜಿರರಿಗಿಂತಲೂ ಹೆಚ್ಚು ರಕ್ತ ಸಂಬಂಧಿಗಳು ಪರಸ್ಪರ ಆಪ್ತರಾಗಿದ್ದಾರೆ.[3] ಆದರೆ ನೀವು ನಿಮ್ಮ ಮಿತ್ರರೊಡನೆ ಉತ್ತಮವಾಗಿ ವರ್ತಿಸುವುದು ಇದರಿಂದ ಹೊರತಾಗಿದೆ. ಅದು ಗ್ರಂಥದಲ್ಲಿ ದಾಖಲಿಸಲಾದ ನಿಯಮವಾಗಿದೆ.
وَإِذۡ أَخَذۡنَا مِنَ ٱلنَّبِيِّـۧنَ مِيثَٰقَهُمۡ وَمِنكَ وَمِن نُّوحٖ وَإِبۡرَٰهِيمَ وَمُوسَىٰ وَعِيسَى ٱبۡنِ مَرۡيَمَۖ وَأَخَذۡنَا مِنۡهُم مِّيثَٰقًا غَلِيظٗا
ನಾವು ಪ್ರವಾದಿಗಳಿಂದ ಕರಾರು ಪಡೆದ ಸಂದರ್ಭ. ನಿಮ್ಮಿಂದ ಮತ್ತು ನೂಹ್, ಇಬ್ರಾಹೀಮ್, ಮೂಸಾ ಹಾಗೂ ಮರ್ಯಮರ ಪುತ್ರ ಈಸಾರಿಂದ. ನಾವು ಅವರೆಲ್ಲರಿಂದ ಬಲಿಷ್ಠವಾದ ಕರಾರನ್ನು ಪಡೆದೆವು.
لِّيَسۡـَٔلَ ٱلصَّٰدِقِينَ عَن صِدۡقِهِمۡۚ وَأَعَدَّ لِلۡكَٰفِرِينَ عَذَابًا أَلِيمٗا
ಸತ್ಯವಂತರೊಡನೆ ಅವರ ಸತ್ಯದ ಬಗ್ಗೆ ಪ್ರಶ್ನಿಸಲು. ಅವನು ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ.
يَٰٓأَيُّهَا ٱلَّذِينَ ءَامَنُواْ ٱذۡكُرُواْ نِعۡمَةَ ٱللَّهِ عَلَيۡكُمۡ إِذۡ جَآءَتۡكُمۡ جُنُودٞ فَأَرۡسَلۡنَا عَلَيۡهِمۡ رِيحٗا وَجُنُودٗا لَّمۡ تَرَوۡهَاۚ وَكَانَ ٱللَّهُ بِمَا تَعۡمَلُونَ بَصِيرًا
ಓ ಸತ್ಯವಿಶ್ವಾಸಿಗಳೇ! ಅಲ್ಲಾಹು ನಿಮಗೆ ತೋರಿದ ಅನುಗ್ರಹವನ್ನು ಸ್ಮರಿಸಿರಿ. ಆ ಸೈನ್ಯಗಳು ನಿಮ್ಮ ಬಳಿಗೆ ಬಂದಾಗ, ನಾವು ಅವರ ವಿರುದ್ಧ ಬಿರುಗಾಳಿಯನ್ನು ಮತ್ತು ನಿಮಗೆ ಕಾಣದಂತಹ ಸೈನ್ಯಗಳನ್ನು ಕಳುಹಿಸಿದ ಸಂದರ್ಭ.[1] ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳನ್ನು ನೋಡುತ್ತಿದ್ದಾನೆ.
إِذۡ جَآءُوكُم مِّن فَوۡقِكُمۡ وَمِنۡ أَسۡفَلَ مِنكُمۡ وَإِذۡ زَاغَتِ ٱلۡأَبۡصَٰرُ وَبَلَغَتِ ٱلۡقُلُوبُ ٱلۡحَنَاجِرَ وَتَظُنُّونَ بِٱللَّهِ ٱلظُّنُونَا۠
ಅವರು ನಿಮ್ಮ ಮೇಲ್ಭಾಗದಿಂದ ಮತ್ತು ನಿಮ್ಮ ತಳಭಾಗದಿಂದ ನಿಮ್ಮ ಬಳಿಗೆ ಬಂದ ಸಂದರ್ಭ. ಕಣ್ಣುಗಳು ಸ್ತಬ್ಧವಾದ ಮತ್ತು ಹೃದಯಗಳು ಗಂಟಲಿಗೆ ತಲುಪಿದ ಸಂದರ್ಭ. ಆಗ ನೀವು ಅಲ್ಲಾಹನ ಬಗ್ಗೆ ತಪ್ಪುಕಲ್ಪನೆಗಳನ್ನು ಕಲ್ಪಿಸುತ್ತಿದ್ದಿರಿ.
هُنَالِكَ ٱبۡتُلِيَ ٱلۡمُؤۡمِنُونَ وَزُلۡزِلُواْ زِلۡزَالٗا شَدِيدٗا
ಅಲ್ಲಿ ಸತ್ಯವಿಶ್ವಾಸಿಗಳನ್ನು ಪರೀಕ್ಷಿಸಲಾಯಿತು ಮತ್ತು ಅತ್ಯಂತ ಪ್ರಬಲವಾಗಿ ನಡುಗಿಸಲಾಯಿತು.
وَإِذۡ يَقُولُ ٱلۡمُنَٰفِقُونَ وَٱلَّذِينَ فِي قُلُوبِهِم مَّرَضٞ مَّا وَعَدَنَا ٱللَّهُ وَرَسُولُهُۥٓ إِلَّا غُرُورٗا
ಕಪಟವಿಶ್ವಾಸಿಗಳು ಮತ್ತು ಹೃದಯಗಳಲ್ಲಿ ರೋಗವಿರುವವರು ಹೇಳುತ್ತಿದ್ದರು: “ಅಲ್ಲಾಹು ಮತ್ತು ಅವನ ಸಂದೇಶವಾಹಕರು ನಮಗೆ ವಾಗ್ದಾನ ಮಾಡಿದ್ದೆಲ್ಲವೂ ವಂಚನೆ ಮತ್ತು ದ್ರೋಹವಾಗಿದೆ.”
وَإِذۡ قَالَت طَّآئِفَةٞ مِّنۡهُمۡ يَٰٓأَهۡلَ يَثۡرِبَ لَا مُقَامَ لَكُمۡ فَٱرۡجِعُواْۚ وَيَسۡتَـٔۡذِنُ فَرِيقٞ مِّنۡهُمُ ٱلنَّبِيَّ يَقُولُونَ إِنَّ بُيُوتَنَا عَوۡرَةٞ وَمَا هِيَ بِعَوۡرَةٍۖ إِن يُرِيدُونَ إِلَّا فِرَارٗا
ಅವರಲ್ಲಿ (ಕಪಟವಿಶ್ವಾಸಿಗಳಲ್ಲಿ) ಒಂದು ಗುಂಪು ಜನರು ಹೇಳಿದ ಸಂದರ್ಭ: “ಯಸ್ರಿಬಿನ[1] ಜನರೇ! ನಿಮಗೆ ಇಲ್ಲಿ ಯಾವುದೇ ಸ್ಥಾನವಿಲ್ಲ. ಇಲ್ಲಿಂದ ಮರಳಿ ಹೋಗಿ.” ಅವರಲ್ಲಿ ಇನ್ನೊಂದು ಗುಂಪು ಪ್ರವಾದಿಯ ಬಳಿಗೆ ಬಂದು (ಯುದ್ಧರಂಗದಿಂದ ಪಲಾಯನ ಮಾಡಲು) ಅನುಮತಿ ಕೇಳುತ್ತಾ ಹೇಳಿದರು: “ನಮ್ಮ ಮನೆಗಳು ಭದ್ರವಾಗಿಲ್ಲ.” ವಾಸ್ತವದಲ್ಲಿ ಅವರ ಮನೆಗಳು ಭದ್ರವಾಗಿದ್ದವು. ಅವರು ಪಲಾಯನ ಮಾಡಲು ಮಾತ್ರ ಬಯಸುತ್ತಿದ್ದರು.
وَلَوۡ دُخِلَتۡ عَلَيۡهِم مِّنۡ أَقۡطَارِهَا ثُمَّ سُئِلُواْ ٱلۡفِتۡنَةَ لَأٓتَوۡهَا وَمَا تَلَبَّثُواْ بِهَآ إِلَّا يَسِيرٗا
ಮದೀನದ ಎಲ್ಲಾ ದಿಕ್ಕುಗಳಿಂದಲೂ ವೈರಿಗಳು ಅವರ (ಕಪಟವಿಶ್ವಾಸಿಗಳ) ಬಳಿಗೆ ಬಂದು, ನಂತರ ಅವರೊಡನೆ ಧರ್ಮಪರಿತ್ಯಾಗ ಮಾಡಬೇಕೆಂದು ಬೇಡಿಕೆಯಿಟ್ಟರೆ, ಅವರು ಅದನ್ನು ಈಡೇರಿಸುವರು. ಸ್ವಲ್ಪವೇ ಹೊರತು ಅವರು ಅದರಿಂದ ಹಿಂಜರಿಯುವುದಿಲ್ಲ.
وَلَقَدۡ كَانُواْ عَٰهَدُواْ ٱللَّهَ مِن قَبۡلُ لَا يُوَلُّونَ ٱلۡأَدۡبَٰرَۚ وَكَانَ عَهۡدُ ٱللَّهِ مَسۡـُٔولٗا
ನಾವು ಯುದ್ಧರಂಗದಿಂದ ಪಲಾಯನ ಮಾಡುವುದಿಲ್ಲ ಎಂದು ಅವರು ಇದಕ್ಕೆ ಮೊದಲು ಅಲ್ಲಾಹನೊಂದಿಗೆ ಕರಾರು ಮಾಡಿದ್ದರು. ಅಲ್ಲಾಹನೊಡನೆ ಮಾಡಲಾದ ಕರಾರುಗಳನ್ನು ಖಂಡಿತ ವಿಚಾರಣೆ ಮಾಡಲಾಗುತ್ತದೆ.
قُل لَّن يَنفَعَكُمُ ٱلۡفِرَارُ إِن فَرَرۡتُم مِّنَ ٱلۡمَوۡتِ أَوِ ٱلۡقَتۡلِ وَإِذٗا لَّا تُمَتَّعُونَ إِلَّا قَلِيلٗا
ಹೇಳಿರಿ: “ನೀವು ಸಾವಿನಿಂದ ಅಥವಾ ಕೊಲೆಯಾಗುವುದರಿಂದ ತಪ್ಪಿಸಿಕೊಳ್ಳಲು ಪಲಾಯನ ಮಾಡುವುದಾದರೆ ಆ ಪಲಾಯನವು ನಿಮಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ನೀವು ಹಾಗೆ ಮಾಡಿದರೂ ನಿಮಗೆ ತಾತ್ಕಾಲಿಕ ಆನಂದ ಮಾತ್ರ ನೀಡಲಾಗುತ್ತದೆ.”
قُلۡ مَن ذَا ٱلَّذِي يَعۡصِمُكُم مِّنَ ٱللَّهِ إِنۡ أَرَادَ بِكُمۡ سُوٓءًا أَوۡ أَرَادَ بِكُمۡ رَحۡمَةٗۚ وَلَا يَجِدُونَ لَهُم مِّن دُونِ ٱللَّهِ وَلِيّٗا وَلَا نَصِيرٗا
ಹೇಳಿರಿ: “ಅಲ್ಲಾಹು ನಿಮಗೇನಾದರೂ ತೊಂದರೆ ಮಾಡಲು ಬಯಸಿದರೆ, ಅಥವಾ ನಿಮಗೆ ದಯೆ ತೋರಲು ಬಯಸಿದರೆ, ಅಲ್ಲಾಹನಿಂದ ನಿಮ್ಮನ್ನು ರಕ್ಷಿಸುವವನು ಯಾರು? ಅವರು ಅಲ್ಲಾಹನ ಹೊರತು ಬೇರೆ ರಕ್ಷಕನನ್ನು ಅಥವಾ ಸಹಾಯಕನನ್ನು ಕಾಣಲಾರರು.
۞ قَدۡ يَعۡلَمُ ٱللَّهُ ٱلۡمُعَوِّقِينَ مِنكُمۡ وَٱلۡقَآئِلِينَ لِإِخۡوَٰنِهِمۡ هَلُمَّ إِلَيۡنَاۖ وَلَا يَأۡتُونَ ٱلۡبَأۡسَ إِلَّا قَلِيلًا
ನಿಮ್ಮಲ್ಲಿ ಇತರ ಜನರನ್ನು ತಡೆಯುವವರು, ತಮ್ಮ ಸಹೋದರರೊಡನೆ “ನಮ್ಮ ಬಳಿ ಬನ್ನಿ” ಎಂದು ಹೇಳುವವರು ಮತ್ತು ಅಪರೂಪವಾಗಿ ಮಾತ್ರ ಯುದ್ಧಕ್ಕೆ ಹೋಗುವವರು ಯಾರೆಂದು ಅಲ್ಲಾಹನಿಗೆ ತಿಳಿದಿದೆ.
أَشِحَّةً عَلَيۡكُمۡۖ فَإِذَا جَآءَ ٱلۡخَوۡفُ رَأَيۡتَهُمۡ يَنظُرُونَ إِلَيۡكَ تَدُورُ أَعۡيُنُهُمۡ كَٱلَّذِي يُغۡشَىٰ عَلَيۡهِ مِنَ ٱلۡمَوۡتِۖ فَإِذَا ذَهَبَ ٱلۡخَوۡفُ سَلَقُوكُم بِأَلۡسِنَةٍ حِدَادٍ أَشِحَّةً عَلَى ٱلۡخَيۡرِۚ أُوْلَٰٓئِكَ لَمۡ يُؤۡمِنُواْ فَأَحۡبَطَ ٱللَّهُ أَعۡمَٰلَهُمۡۚ وَكَانَ ذَٰلِكَ عَلَى ٱللَّهِ يَسِيرٗا
ಅವರು ನಿಮಗೆ ಸಹಾಯ ಮಾಡುವುದರಲ್ಲಿ ಅತ್ಯಂತ ಜಿಪುಣರಾಗಿದ್ದಾರೆ. ಭಯದ ಸನ್ನಿವೇಶವುಂಟಾದರೆ ಅವರು ನಿಮ್ಮನ್ನು ದಿಟ್ಟಿಸಿ ನೋಡುವುದ್ನು ನಿಮಗೆ ಕಾಣಬಹುದು. ಸಾವಿನ ದವಡೆಯಲ್ಲಿರುವ ವ್ಯಕ್ತಿಯ ಕಣ್ಣುಗಳಂತೆ ಅವರ ಕಣ್ಣುಗಳು ತಿರುಗುತ್ತವೆ. ಆದರೆ ಭಯವು ನಿವಾರಣೆಯಾದರೆ ಅವರು ಹರಿತವಾದ ನಾಲಗೆಗಳ ಮೂಲಕ ನಿಮ್ಮನ್ನು ಚುಚ್ಚಿ ಮಾತನಾಡುತ್ತಾರೆ. ಅವರು ಸಂಪತ್ತನ್ನು ಅತಿಯಾಗಿ ಆಸೆಪಡುತ್ತಾರೆ. ಅವರು ಸತ್ಯವಿಶ್ವಾಸಿಗಳಲ್ಲ. ಆದ್ದರಿಂದ ಅಲ್ಲಾಹು ಅವರ ಕರ್ಮಗಳನ್ನು ನಿಷ್ಫಲಗೊಳಿಸಿದನು. ಅದು ಅಲ್ಲಾಹನ ಮಟ್ಟಿಗೆ ಬಹಳ ಸುಲಭವಾಗಿದೆ.
يَحۡسَبُونَ ٱلۡأَحۡزَابَ لَمۡ يَذۡهَبُواْۖ وَإِن يَأۡتِ ٱلۡأَحۡزَابُ يَوَدُّواْ لَوۡ أَنَّهُم بَادُونَ فِي ٱلۡأَعۡرَابِ يَسۡـَٔلُونَ عَنۡ أَنۢبَآئِكُمۡۖ وَلَوۡ كَانُواْ فِيكُم مَّا قَٰتَلُوٓاْ إِلَّا قَلِيلٗا
ಮಿತ್ರಪಡೆಗಳು (ವೈರಿಗಳು) ಓಡಿಹೋಗಿರಲಿಕ್ಕಿಲ್ಲ ಎಂದು ಅವರು (ಕಪಟವಿಶ್ವಾಸಿಗಳು) ಭಾವಿಸುತ್ತಾರೆ. ಮಿತ್ರಪಡೆಗಳೇನಾದರೂ ಪುನಃ ಬಂದರೆ, ಗ್ರಾಮೀಣ ಅರಬ್ಬರೊಂದಿಗೆ ಸೇರಿ ಮರುಭೂಮಿಗೆ ಹೋಗಿ ಅಲ್ಲಿ ನಿಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾ ಬದುಕುತ್ತಿದ್ದರೆ ಎಷ್ಟು ಚೆನ್ನಾಗಿತ್ತು ಎಂದು ಅವರು ಚಿಂತಿಸುತ್ತಾರೆ. ಇನ್ನು ಅವರು ನಿಮ್ಮ ಜೊತೆ (ಮದೀನದಲ್ಲಿ) ಇದ್ದರೂ ಅವರು ಸ್ವಲ್ಪ ಮಾತ್ರ ಯುದ್ಧ ಮಾಡುವರು.
لَّقَدۡ كَانَ لَكُمۡ فِي رَسُولِ ٱللَّهِ أُسۡوَةٌ حَسَنَةٞ لِّمَن كَانَ يَرۡجُواْ ٱللَّهَ وَٱلۡيَوۡمَ ٱلۡأٓخِرَ وَذَكَرَ ٱللَّهَ كَثِيرٗا
ನಿಮಗೆ ಅಲ್ಲಾಹನ ಸಂದೇಶವಾಹಕರಲ್ಲಿ ಅತ್ಯುತ್ತಮ ಮಾದರಿಯಿದೆ. ಅಲ್ಲಾಹನನ್ನು ಮತ್ತು ಅಂತ್ಯದಿನವನ್ನು ನಿರೀಕ್ಷಿಸುವವರಿಗೆ ಹಾಗೂ ಅಲ್ಲಾಹನನ್ನು ಅತ್ಯಧಿಕವಾಗಿ ಸ್ಮರಿಸುವವರಿಗೆ.
وَلَمَّا رَءَا ٱلۡمُؤۡمِنُونَ ٱلۡأَحۡزَابَ قَالُواْ هَٰذَا مَا وَعَدَنَا ٱللَّهُ وَرَسُولُهُۥ وَصَدَقَ ٱللَّهُ وَرَسُولُهُۥۚ وَمَا زَادَهُمۡ إِلَّآ إِيمَٰنٗا وَتَسۡلِيمٗا
ಸತ್ಯವಿಶ್ವಾಸಿಗಳು ಮಿತ್ರಪಡೆಗಳನ್ನು ಕಂಡಾಗ ಹೇಳಿದರು: “ಇದೇ ಅಲ್ಲಾಹು ಮತ್ತು ಅವನ ಸಂದೇಶವಾಹಕರು ನಮಗೆ ವಾಗ್ದಾನ ಮಾಡಿದ್ದು. ಅಲ್ಲಾಹು ಮತ್ತು ಅವನ ಸಂದೇಶವಾಹಕರು ಸತ್ಯವನ್ನೇ ಹೇಳಿದ್ದಾರೆ.” ಅದು ಅವರಿಗೆ ವಿಶ್ವಾಸ ಮತ್ತು ಶರಣಾಗತಿಯನ್ನು ಮಾತ್ರ ಹೆಚ್ಚಿಸಿತು.
مِّنَ ٱلۡمُؤۡمِنِينَ رِجَالٞ صَدَقُواْ مَا عَٰهَدُواْ ٱللَّهَ عَلَيۡهِۖ فَمِنۡهُم مَّن قَضَىٰ نَحۡبَهُۥ وَمِنۡهُم مَّن يَنتَظِرُۖ وَمَا بَدَّلُواْ تَبۡدِيلٗا
ಸತ್ಯವಿಶ್ವಾಸಿಗಳಲ್ಲಿ ಕೆಲವು ಪುರುಷರಿದ್ದಾರೆ. ಅವರು ಅಲ್ಲಾಹನೊಡನೆ ಮಾಡಿದ ಕರಾರನ್ನು ರುಜುವಾತುಪಡಿಸಿದ್ದಾರೆ. ಅವರಲ್ಲಿ ಕೆಲವರು (ಹುತಾತ್ಮರಾಗುವ ಮೂಲಕ) ತಮ್ಮ ಕರಾರನ್ನು ನೆರವೇರಿಸಿದರು. ಅವರಲ್ಲಿ ಕೆಲವರು ಅದನ್ನು ನಿರೀಕ್ಷಿಸುತ್ತಿದ್ದಾರೆ. ಅವರು ಅದರಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ.
لِّيَجۡزِيَ ٱللَّهُ ٱلصَّٰدِقِينَ بِصِدۡقِهِمۡ وَيُعَذِّبَ ٱلۡمُنَٰفِقِينَ إِن شَآءَ أَوۡ يَتُوبَ عَلَيۡهِمۡۚ إِنَّ ٱللَّهَ كَانَ غَفُورٗا رَّحِيمٗا
ಅಲ್ಲಾಹು ಸತ್ಯವಂತರಿಗೆ ಅವರ ಸತ್ಯದ ಪ್ರತಿಫಲವನ್ನು ನೀಡುವುದಕ್ಕಾಗಿ ಮತ್ತು ಅವನು ಬಯಸಿದರೆ ಕಪಟವಿಶ್ವಾಸಿಗಳನ್ನು ಶಿಕ್ಷಿಸುವುದಕ್ಕಾಗಿ ಅಥವಾ ಅವರ ಪಶ್ಚಾತ್ತಾಪವನ್ನು ಸ್ವೀಕರಿಸುವುದಕ್ಕಾಗಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
وَرَدَّ ٱللَّهُ ٱلَّذِينَ كَفَرُواْ بِغَيۡظِهِمۡ لَمۡ يَنَالُواْ خَيۡرٗاۚ وَكَفَى ٱللَّهُ ٱلۡمُؤۡمِنِينَ ٱلۡقِتَالَۚ وَكَانَ ٱللَّهُ قَوِيًّا عَزِيزٗا
ಅಲ್ಲಾಹು ಸತ್ಯನಿಷೇಧಿಗಳನ್ನು ಅವರ ರೋಷದೊಂದಿಗೇ ಮರಳಿ ಕಳುಹಿಸಿದನು. ಅವರು ಯಾವುದೇ ಲಾಭವನ್ನು ಪಡೆಯಲಿಲ್ಲ. ಯುದ್ಧದಲ್ಲಿ ಅಲ್ಲಾಹು ಸತ್ಯವಿಶ್ವಾಸಿಗಳಿಗೆ ಪರ್ಯಾಪ್ತನಾದನು. ಅಲ್ಲಾಹು ಮಹಾ ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.
وَأَنزَلَ ٱلَّذِينَ ظَٰهَرُوهُم مِّنۡ أَهۡلِ ٱلۡكِتَٰبِ مِن صَيَاصِيهِمۡ وَقَذَفَ فِي قُلُوبِهِمُ ٱلرُّعۡبَ فَرِيقٗا تَقۡتُلُونَ وَتَأۡسِرُونَ فَرِيقٗا
ಸತ್ಯನಿಷೇಧಿಗಳಿಗೆ ಸಹಾಯ ಮಾಡಿದ ಗ್ರಂಥದವರನ್ನು (ಯಹೂದಿಗಳನ್ನು) ಅಲ್ಲಾಹು ಅವರ ಕೋಟೆಗಳಿಂದ ಕೆಳಗಿಳಿಸಿದನು ಮತ್ತು ಅವರ ಹೃದಯಗಳಲ್ಲಿ ಭೀತಿಯನ್ನು ಬಿತ್ತಿದನು. ಅವರಲ್ಲಿ ಒಂದು ಗುಂಪನ್ನು ನೀವು ಕೊಂದಿದ್ದೀರಿ ಮತ್ತು ಇನ್ನೊಂದು ಗುಂಪನ್ನು ಸೆರೆಹಿಡಿದಿದ್ದೀರಿ.[1]
وَأَوۡرَثَكُمۡ أَرۡضَهُمۡ وَدِيَٰرَهُمۡ وَأَمۡوَٰلَهُمۡ وَأَرۡضٗا لَّمۡ تَطَـُٔوهَاۚ وَكَانَ ٱللَّهُ عَلَىٰ كُلِّ شَيۡءٖ قَدِيرٗا
ಅಲ್ಲಾಹು ನಿಮ್ಮನ್ನು ಅವರ ಜಮೀನುಗಳ, ವಾಸ್ತವ್ಯಗಳ ಮತ್ತು ಆಸ್ತಿಗಳ ವಾರಸುದಾರರನ್ನಾಗಿ ಮಾಡಿದನು. ನಿಮ್ಮ ಪಾದಗಳು ಇನ್ನೂ ತುಳಿಯದ ಭೂಮಿಗಳಿಗೂ ಅವನು ನಿಮ್ಮನ್ನು ವಾರಸುದಾರರನ್ನಾಗಿ ಮಾಡಿದನು. ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
يَٰٓأَيُّهَا ٱلنَّبِيُّ قُل لِّأَزۡوَٰجِكَ إِن كُنتُنَّ تُرِدۡنَ ٱلۡحَيَوٰةَ ٱلدُّنۡيَا وَزِينَتَهَا فَتَعَالَيۡنَ أُمَتِّعۡكُنَّ وَأُسَرِّحۡكُنَّ سَرَاحٗا جَمِيلٗا
ಪ್ರವಾದಿಯವರೇ! ನಿಮ್ಮ ಮಡದಿಯರೊಡನೆ ಹೇಳಿರಿ: “ನೀವು ಇಹಲೋಕ ಜೀವನವನ್ನು ಮತ್ತು ಅದರ ಅಲಂಕಾರವನ್ನು ಬಯಸುವುದಾದರೆ, ಬನ್ನಿ! ನಾನು ನಿಮಗೆ ಸ್ವಲ್ಪ ಸಂಪತ್ತನ್ನು ನೀಡಿ, ಅತ್ಯುತ್ತಮ ರೀತಿಯಲ್ಲಿ ನಿಮ್ಮನ್ನು ವಿಚ್ಛೇದಿಸುವೆನು.
وَإِن كُنتُنَّ تُرِدۡنَ ٱللَّهَ وَرَسُولَهُۥ وَٱلدَّارَ ٱلۡأٓخِرَةَ فَإِنَّ ٱللَّهَ أَعَدَّ لِلۡمُحۡسِنَٰتِ مِنكُنَّ أَجۡرًا عَظِيمٗا
ಆದರೆ ನೀವು ಅಲ್ಲಾಹು, ಅವನ ಸಂದೇಶವಾಹಕರು ಮತ್ತು ಪರಲೋಕ ಜೀವನವನ್ನು ಬಯಸುವುದಾದರೆ, ನಿಶ್ಚಯವಾಗಿಯೂ ನಿಮ್ಮಲ್ಲಿ ಒಳಿತು ಮಾಡುವವರಿಗೆ ಅಲ್ಲಾಹು ಮಹಾ ಪ್ರತಿಫಲವನ್ನು ಸಿದ್ಧಗೊಳಿಸಿದ್ದಾನೆ.”
يَٰنِسَآءَ ٱلنَّبِيِّ مَن يَأۡتِ مِنكُنَّ بِفَٰحِشَةٖ مُّبَيِّنَةٖ يُضَٰعَفۡ لَهَا ٱلۡعَذَابُ ضِعۡفَيۡنِۚ وَكَانَ ذَٰلِكَ عَلَى ٱللَّهِ يَسِيرٗا
ಓ ಪ್ರವಾದಿಯ ಮಡದಿಯರೇ! ನಿಮ್ಮಲ್ಲಿ ಯಾರಾದರೂ ಬಹಿರಂಗವಾಗಿ ಅಶ್ಲೀಲ ಕೃತ್ಯವನ್ನು ಮಾಡಿದರೆ ಅವರಿಗೆ ಇಮ್ಮಡಿ ಶಿಕ್ಷೆಯನ್ನು ನೀಡಲಾಗುವುದು. ಅದು ಅಲ್ಲಾಹನಿಗೆ ಅತಿ ಸುಲಭವಾಗಿದೆ.
۞ وَمَن يَقۡنُتۡ مِنكُنَّ لِلَّهِ وَرَسُولِهِۦ وَتَعۡمَلۡ صَٰلِحٗا نُّؤۡتِهَآ أَجۡرَهَا مَرَّتَيۡنِ وَأَعۡتَدۡنَا لَهَا رِزۡقٗا كَرِيمٗا
ನಿಮ್ಮಲ್ಲಿ ಯಾರು ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ವಿನಮ್ರರಾಗಿರುತ್ತಾರೋ ಮತ್ತು ಸತ್ಕರ್ಮವೆಸಗುತ್ತಾರೋ ಅವರಿಗೆ ನಾವು ಇಮ್ಮಡಿ ಪ್ರತಿಫಲವನ್ನು ನೀಡುವೆವು. ಅವರಿಗೆ ನಾವು ಗೌರವಾನ್ವಿತ ಉಪಜೀವನವನ್ನು ಸಿದ್ಧಗೊಳಿಸಿದ್ದೇವೆ.
يَٰنِسَآءَ ٱلنَّبِيِّ لَسۡتُنَّ كَأَحَدٖ مِّنَ ٱلنِّسَآءِ إِنِ ٱتَّقَيۡتُنَّۚ فَلَا تَخۡضَعۡنَ بِٱلۡقَوۡلِ فَيَطۡمَعَ ٱلَّذِي فِي قَلۡبِهِۦ مَرَضٞ وَقُلۡنَ قَوۡلٗا مَّعۡرُوفٗا
ಓ ಪ್ರವಾದಿಯ ಮಡದಿಯರೇ! ನೀವು ಇತರ ಮಹಿಳೆಯರಂತಲ್ಲ. ನೀವು ಅಲ್ಲಾಹನನ್ನು ಭಯಪಡುವುದಾದರೆ, ನೀವು ಮೃದುವಾಗಿ ಮಾತನಾಡಬೇಡಿ. ಏಕೆಂದರೆ ಅದರಿಂದ ಹೃದಯದಲ್ಲಿ ರೋಗವಿರುವವರು ನಿಮ್ಮ ಬಗ್ಗೆ ಕೆಟ್ಟ ಭಾವನೆಗಳನ್ನಿಟ್ಟುಕೊಳ್ಳಬಹುದು. ನೀವು ಯೋಗ್ಯವಾದ ಮಾತುಗಳನ್ನೇ ಆಡಿರಿ.
وَقَرۡنَ فِي بُيُوتِكُنَّ وَلَا تَبَرَّجۡنَ تَبَرُّجَ ٱلۡجَٰهِلِيَّةِ ٱلۡأُولَىٰۖ وَأَقِمۡنَ ٱلصَّلَوٰةَ وَءَاتِينَ ٱلزَّكَوٰةَ وَأَطِعۡنَ ٱللَّهَ وَرَسُولَهُۥٓۚ إِنَّمَا يُرِيدُ ٱللَّهُ لِيُذۡهِبَ عَنكُمُ ٱلرِّجۡسَ أَهۡلَ ٱلۡبَيۡتِ وَيُطَهِّرَكُمۡ تَطۡهِيرٗا
ನೀವು ನಿಮ್ಮ ಮನೆಗಳಲ್ಲೇ ಇರಿ. ಹಿಂದಿನ ಅಜ್ಞಾನಕಾಲದಂತೆ ನಿಮ್ಮ ಸೌಂದರ್ಯ ಪ್ರದರ್ಶನ ಮಾಡಬೇಡಿ. ನಮಾಝನ್ನು ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ. ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞಾಪಾಲನೆ ಮಾಡಿರಿ. ಓ ಪ್ರವಾದಿಯ ಮನೆಯವರೇ! ಅಲ್ಲಾಹು ನಿಮ್ಮಿಂದ ಕೊಳೆಯನ್ನು ನಿವಾರಿಸಲು ಮತ್ತು ನಿಮ್ಮನ್ನು ಸಂಪೂರ್ಣ ಶುದ್ಧೀಕರಿಸಲು ಬಯಸುತ್ತಾನೆ.
وَٱذۡكُرۡنَ مَا يُتۡلَىٰ فِي بُيُوتِكُنَّ مِنۡ ءَايَٰتِ ٱللَّهِ وَٱلۡحِكۡمَةِۚ إِنَّ ٱللَّهَ كَانَ لَطِيفًا خَبِيرًا
ನಿಮಗೆ ನಿಮ್ಮ ಮನೆಗಳಲ್ಲಿ ಓದಿಕೊಡಲಾಗುವ ಅಲ್ಲಾಹನ ವಚನಗಳನ್ನು ಮತ್ತು ವಿವೇಕವನ್ನು ಸ್ಮರಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಅನುಕಂಪವುಳ್ಳವನು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.
إِنَّ ٱلۡمُسۡلِمِينَ وَٱلۡمُسۡلِمَٰتِ وَٱلۡمُؤۡمِنِينَ وَٱلۡمُؤۡمِنَٰتِ وَٱلۡقَٰنِتِينَ وَٱلۡقَٰنِتَٰتِ وَٱلصَّٰدِقِينَ وَٱلصَّٰدِقَٰتِ وَٱلصَّٰبِرِينَ وَٱلصَّٰبِرَٰتِ وَٱلۡخَٰشِعِينَ وَٱلۡخَٰشِعَٰتِ وَٱلۡمُتَصَدِّقِينَ وَٱلۡمُتَصَدِّقَٰتِ وَٱلصَّٰٓئِمِينَ وَٱلصَّٰٓئِمَٰتِ وَٱلۡحَٰفِظِينَ فُرُوجَهُمۡ وَٱلۡحَٰفِظَٰتِ وَٱلذَّٰكِرِينَ ٱللَّهَ كَثِيرٗا وَٱلذَّٰكِرَٰتِ أَعَدَّ ٱللَّهُ لَهُم مَّغۡفِرَةٗ وَأَجۡرًا عَظِيمٗا
ನಿಶ್ಚಯವಾಗಿಯೂ ಮುಸಲ್ಮಾನ ಪುರುಷರು ಮತ್ತು ಮಹಿಳೆಯರು, ಸತ್ಯವಿಶ್ವಾಸಿ ಪುರುಷರು ಮತ್ತು ಮಹಿಳೆಯರು, ದೇವಭಯವುಳ್ಳ ಪುರುಷರು ಮತ್ತು ಮಹಿಳೆಯರು, ಸತ್ಯವಂತ ಪುರುಷರು ಮತ್ತು ಮಹಿಳೆಯರು, ತಾಳ್ಮೆ ವಹಿಸುವ ಪುರುಷರು ಮತ್ತು ಮಹಿಳೆಯರು, ವಿನಮ್ರತೆ ತೋರುವ ಪುರುಷರು ಮತ್ತು ಮಹಿಳೆಯರು, ದಾನಧರ್ಮ ಮಾಡುವ ಪುರುಷರು ಮತ್ತು ಮಹಿಳೆಯರು, ಉಪವಾಸ ಆಚರಿಸುವ ಪುರುಷರು ಮತ್ತು ಮಹಿಳೆಯರು, ತಮ್ಮ ಗುಹ್ಯಭಾಗಗಳನ್ನು ಸಂರಕ್ಷಿಸುವ ಪುರುಷರು ಮತ್ತು ಮಹಿಳೆಯರು, ಅಲ್ಲಾಹನನ್ನು ಅತಿಯಾಗಿ ಸ್ಮರಿಸುವ ಪುರುಷರು ಮತ್ತು ಮಹಿಳೆಯರು—ಇವರಿಗೆ ಅಲ್ಲಾಹು ಕ್ಷಮೆ ಮತ್ತು ಮಹಾ ಪ್ರತಿಫಲವನ್ನು ಸಿದ್ಧಗೊಳಿಸಿದ್ದಾನೆ.
وَمَا كَانَ لِمُؤۡمِنٖ وَلَا مُؤۡمِنَةٍ إِذَا قَضَى ٱللَّهُ وَرَسُولُهُۥٓ أَمۡرًا أَن يَكُونَ لَهُمُ ٱلۡخِيَرَةُ مِنۡ أَمۡرِهِمۡۗ وَمَن يَعۡصِ ٱللَّهَ وَرَسُولَهُۥ فَقَدۡ ضَلَّ ضَلَٰلٗا مُّبِينٗا
ಅಲ್ಲಾಹು ಮತ್ತು ಅವನ ಸಂದೇಶವಾಹಕರು ಯಾವುದೇ ಒಂದು ವಿಷಯವನ್ನು ತೀರ್ಮಾನಿಸಿದರೆ, ನಂತರ ಸತ್ಯವಿಶ್ವಾಸಿ ಪುರುಷರಿಗೆ ಅಥವಾ ಮಹಿಳೆಯರಿಗೆ ಅವರ ವಿಷಯಕ್ಕೆ ಸಂಬಂಧಿಸಿ ಯಾವುದೇ ಆಯ್ಕೆಯಿರುವುದಿಲ್ಲ. ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞೆಗಳನ್ನು ಉಲ್ಲಂಘಿಸುತ್ತಾನೋ—ಅವನು ಅತ್ಯಂತ ಸ್ಪಷ್ಟ ದುರ್ಮಾರ್ಗಕ್ಕೆ ಸಾಗಿದ್ದಾನೆ.
وَإِذۡ تَقُولُ لِلَّذِيٓ أَنۡعَمَ ٱللَّهُ عَلَيۡهِ وَأَنۡعَمۡتَ عَلَيۡهِ أَمۡسِكۡ عَلَيۡكَ زَوۡجَكَ وَٱتَّقِ ٱللَّهَ وَتُخۡفِي فِي نَفۡسِكَ مَا ٱللَّهُ مُبۡدِيهِ وَتَخۡشَى ٱلنَّاسَ وَٱللَّهُ أَحَقُّ أَن تَخۡشَىٰهُۖ فَلَمَّا قَضَىٰ زَيۡدٞ مِّنۡهَا وَطَرٗا زَوَّجۡنَٰكَهَا لِكَيۡ لَا يَكُونَ عَلَى ٱلۡمُؤۡمِنِينَ حَرَجٞ فِيٓ أَزۡوَٰجِ أَدۡعِيَآئِهِمۡ إِذَا قَضَوۡاْ مِنۡهُنَّ وَطَرٗاۚ وَكَانَ أَمۡرُ ٱللَّهِ مَفۡعُولٗا
(ಪ್ರವಾದಿಯವರೇ) ಅಲ್ಲಾಹು ಅನುಗ್ರಹಗಳನ್ನು ನೀಡಿದ ಮತ್ತು ನೀವು ಕೂಡ ಅನುಗ್ರಹಗಳನ್ನು ನೀಡಿದ ವ್ಯಕ್ತಿಯೊಡನೆ, “ನಿನ್ನ ಪತ್ನಿಯನ್ನು ನಿನ್ನ ಬಳಿಯೇ ಇರಿಸು ಮತ್ತು ಅಲ್ಲಾಹನನ್ನು ಭಯಪಡು” ಎಂದು ನೀವು ಹೇಳಿದ ಸಂದರ್ಭ.[1] ಅಲ್ಲಾಹು ಬಹಿರಂಗಪಡಿಸಲಿದ್ದ ಒಂದು ವಿಷಯವನ್ನು ನೀವು ನಿಮ್ಮ ಹೃದಯದಲ್ಲಿ ಮುಚ್ಚಿಟ್ಟಿರಿ. ನೀವು ಜನರನ್ನು ಭಯಪಟ್ಟಿರಿ. ಆದರೆ ನೀವು ಭಯಪಡಲು ಅಲ್ಲಾಹು ಹೆಚ್ಚು ಅರ್ಹನಾಗಿದ್ದಾನೆ. ನಂತರ ಝೈದ್ (ಪ್ರವಾದಿಯ ದತ್ತುಪುತ್ರ) ಅವಳಿಂದ ತನ್ನ ಅಗತ್ಯವನ್ನು ಪೂರೈಸಿದಾಗ, ನಾವು ಅವಳನ್ನು ನಿಮಗೆ ವಿವಾಹ ಮಾಡಿಕೊಟ್ಟೆವು.[2] ಇದೇಕೆಂದರೆ, ಸತ್ಯವಿಶ್ವಾಸಿಗಳಿಗೆ ಅವರ ದತ್ತುಪುತ್ರರ ಪತ್ನಿಯರನ್ನು ವಿವಾಹವಾಗುವ ವಿಷಯದಲ್ಲಿ ಯಾವುದೇ ಸಂಕಟವಾಗದಿರುವುದಕ್ಕಾಗಿ—ಆ ದತ್ತುಪುತ್ರರು ಅವರಿಂದ ತಮ್ಮ ಅಗತ್ಯವನ್ನು ಪೂರೈಸಿದ ಬಳಿಕ. ಅಲ್ಲಾಹನ ಆಜ್ಞೆಯು ನೆರವೇರುವಂತದ್ದೇ ಆಗಿದೆ.
مَّا كَانَ عَلَى ٱلنَّبِيِّ مِنۡ حَرَجٖ فِيمَا فَرَضَ ٱللَّهُ لَهُۥۖ سُنَّةَ ٱللَّهِ فِي ٱلَّذِينَ خَلَوۡاْ مِن قَبۡلُۚ وَكَانَ أَمۡرُ ٱللَّهِ قَدَرٗا مَّقۡدُورًا
ಅಲ್ಲಾಹು ಅವನ ಪ್ರವಾದಿಗೆ ಯಾವೆಲ್ಲಾ ವಿಷಯಗಳನ್ನು ನಿಶ್ಚಯಿಸಿದ್ದಾನೋ ಅದರಲ್ಲಿ ಪ್ರವಾದಿಗೆ ಯಾವುದೇ ಸಂಕಟವಾಗಬಾರದು. ಇದಕ್ಕೆ ಮೊದಲಿನ ಪ್ರವಾದಿಗಳ ಮೇಲೂ ಅಲ್ಲಾಹು ರಿವಾಜು ನಡೆಯುತ್ತಿತ್ತು. ಅಲ್ಲಾಹನ ಆಜ್ಞೆಯು ನಿಶ್ಚಯಿಸಲಾದ ತೀರ್ಮಾನವಾಗಿದೆ.
ٱلَّذِينَ يُبَلِّغُونَ رِسَٰلَٰتِ ٱللَّهِ وَيَخۡشَوۡنَهُۥ وَلَا يَخۡشَوۡنَ أَحَدًا إِلَّا ٱللَّهَۗ وَكَفَىٰ بِٱللَّهِ حَسِيبٗا
ಅಲ್ಲಾಹನ ಸಂದೇಶಗಳನ್ನು ತಲುಪಿಸುವವರು, ಅವನನ್ನು ಮಾತ್ರ ಭಯಪಡುವವರು ಮತ್ತು ಅಲ್ಲಾಹನನ್ನು ಬಿಟ್ಟು ಇತರ ಯಾರನ್ನೂ ಭಯಪಡದವರು. ವಿಚಾರಣೆ ಮಾಡುವವನಾಗಿ ಅಲ್ಲಾಹು ಸಾಕು.
مَّا كَانَ مُحَمَّدٌ أَبَآ أَحَدٖ مِّن رِّجَالِكُمۡ وَلَٰكِن رَّسُولَ ٱللَّهِ وَخَاتَمَ ٱلنَّبِيِّـۧنَۗ وَكَانَ ٱللَّهُ بِكُلِّ شَيۡءٍ عَلِيمٗا
ಮುಹಮ್ಮದ್ ನಿಮ್ಮ ಪುರುಷರಲ್ಲಿ ಯಾರಿಗೂ ತಂದೆಯಲ್ಲ.[1] ಆದರೆ ಅವರು ಅಲ್ಲಾಹನ ಸಂದೇಶವಾಹಕರು ಮತ್ತು ಎಲ್ಲಾ ಪ್ರವಾದಿಗಳ ಮೊಹರಾಗಿದ್ದಾರೆ.[2] ಅಲ್ಲಾಹು ಎಲ್ಲಾ ವಿಷಯಗಳ ಬಗ್ಗೆ ತಿಳಿದವನಾಗಿದ್ದಾನೆ.
يَٰٓأَيُّهَا ٱلَّذِينَ ءَامَنُواْ ٱذۡكُرُواْ ٱللَّهَ ذِكۡرٗا كَثِيرٗا
ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಅತಿಯಾಗಿ ಸ್ಮರಿಸಿರಿ.
وَسَبِّحُوهُ بُكۡرَةٗ وَأَصِيلًا
ಮುಂಜಾನೆ ಮತ್ತು ಸಂಜೆ ಅವನ ಪರಿಶುದ್ಧಿಯನ್ನು ಕೊಂಡಾಡಿರಿ.
هُوَ ٱلَّذِي يُصَلِّي عَلَيۡكُمۡ وَمَلَٰٓئِكَتُهُۥ لِيُخۡرِجَكُم مِّنَ ٱلظُّلُمَٰتِ إِلَى ٱلنُّورِۚ وَكَانَ بِٱلۡمُؤۡمِنِينَ رَحِيمٗا
ನಿಮ್ಮ ಮೇಲೆ ಅನುಗ್ರಹಗಳನ್ನು ಸುರಿಸುವವನು ಅವನೇ. ಅವನ ದೇವದೂತರುಗಳು ನಿಮಗಾಗಿ ಪ್ರಾರ್ಥಿಸುತ್ತಾರೆ. ನಿಮ್ಮನ್ನು ಅಂಧಕಾರಗಳಿಂದ ಬೆಳಕಿಗೆ ತರುವುದಕ್ಕಾಗಿ. ಅವನು ಸತ್ಯವಿಶ್ವಾಸಿಗಳ ಮೇಲೆ ಅತ್ಯಧಿಕ ದಯೆಯುಳ್ಳವನಾಗಿದ್ದಾನೆ.
تَحِيَّتُهُمۡ يَوۡمَ يَلۡقَوۡنَهُۥ سَلَٰمٞۚ وَأَعَدَّ لَهُمۡ أَجۡرٗا كَرِيمٗا
ಅವರು ಅವನನ್ನು ಭೇಟಿಯಾಗುವ ದಿನ ಅವರ ಅಭಿವಂದನೆಯು “ಸಲಾಂ” ಆಗಿರುವುದು. ಅವನು ಅವರಿಗೆ ಉದಾರ ಪ್ರತಿಫಲವನ್ನು ಸಿದ್ಧಗೊಳಿಸಿದ್ದಾನೆ.
يَٰٓأَيُّهَا ٱلنَّبِيُّ إِنَّآ أَرۡسَلۡنَٰكَ شَٰهِدٗا وَمُبَشِّرٗا وَنَذِيرٗا
ಓ ಪ್ರವಾದಿಯವರೇ! ನಿಶ್ಚಯವಾಗಿಯೂ ನಾವು ನಿಮ್ಮನ್ನು ಸಾಕ್ಷಿಯಾಗಿ, ಸುವಾರ್ತೆ ತಿಳಿಸುವ ಮತ್ತು ಮುನ್ನೆಚ್ಚರಿಕೆ ನೀಡುವ (ಪ್ರವಾದಿಯಾಗಿ) ಕಳುಹಿಸಿದ್ದೇವೆ.
وَدَاعِيًا إِلَى ٱللَّهِ بِإِذۡنِهِۦ وَسِرَاجٗا مُّنِيرٗا
ಅಲ್ಲಾಹನ ಅಪ್ಪಣೆಯಂತೆ ಅವನ ಕಡೆಗೆ ಕರೆ ನೀಡುವವರಾಗಿ ಮತ್ತು ಬೆಳಕು ಹರಿಸುವ ದೀಪವಾಗಿ ಕಳುಹಿಸಿದ್ದೇವೆ.
وَبَشِّرِ ٱلۡمُؤۡمِنِينَ بِأَنَّ لَهُم مِّنَ ٱللَّهِ فَضۡلٗا كَبِيرٗا
ಸತ್ಯವಿಶ್ವಾಸಿಗಳಿಗೆ ಅಲ್ಲಾಹನ ಬಳಿ ಮಹಾ ಔದಾರ್ಯವಿದೆಯೆಂಬ ಸುವಾರ್ತೆಯನ್ನು ತಿಳಿಸಿರಿ.
وَلَا تُطِعِ ٱلۡكَٰفِرِينَ وَٱلۡمُنَٰفِقِينَ وَدَعۡ أَذَىٰهُمۡ وَتَوَكَّلۡ عَلَى ٱللَّهِۚ وَكَفَىٰ بِٱللَّهِ وَكِيلٗا
ಸತ್ಯನಿಷೇಧಿಗಳನ್ನು ಮತ್ತು ಕಪಟವಿಶ್ವಾಸಿಗಳನ್ನು ಅನುಸರಿಸಬೇಡಿ. ಅವರು ನೀಡುವ ತೊಂದರೆಗಳನ್ನು ನಿರ್ಲಕ್ಷಿಸಿರಿ ಮತ್ತು ಅಲ್ಲಾಹನಲ್ಲಿ ಭರವಸೆಯಿಡಿ. ಕಾರ್ಯನಿರ್ವಾಹಕನಾಗಿ ಅಲ್ಲಾಹು ಸಾಕು.
يَٰٓأَيُّهَا ٱلَّذِينَ ءَامَنُوٓاْ إِذَا نَكَحۡتُمُ ٱلۡمُؤۡمِنَٰتِ ثُمَّ طَلَّقۡتُمُوهُنَّ مِن قَبۡلِ أَن تَمَسُّوهُنَّ فَمَا لَكُمۡ عَلَيۡهِنَّ مِنۡ عِدَّةٖ تَعۡتَدُّونَهَاۖ فَمَتِّعُوهُنَّ وَسَرِّحُوهُنَّ سَرَاحٗا جَمِيلٗا
ಓ ಸತ್ಯವಿಶ್ವಾಸಿಗಳೇ! ನೀವು ಸತ್ಯವಿಶ್ವಾಸಿ ಮಹಿಳೆಯರನ್ನು ವಿವಾಹವಾಗಿ, ನಂತರ ಅವರೊಡನೆ ಲೈಂಗಿಕ ಸಂಪರ್ಕ ಮಾಡುವುದಕ್ಕೆ ಮೊದಲೇ ಅವರಿಗೆ ವಿಚ್ಛೇದನ ನೀಡಿದರೆ, ನೀವು ಎಣಿಸುವ ಇದ್ದಃ (ದೀಕ್ಷಾಕಾಲ) ವನ್ನು ಆಚರಿಸಬೇಕಾದ ಹೊಣೆ ಅವರಿಗಿಲ್ಲ. ನೀವು ಅವರಿಗೆ ಏನಾದರೂ ನೀಡಿರಿ ಮತ್ತು ಅತ್ಯುತ್ತಮ ರೀತಿಯಲ್ಲಿ ಅವರನ್ನು ಕಳುಹಿಸಿಕೊಡಿ.
يَٰٓأَيُّهَا ٱلنَّبِيُّ إِنَّآ أَحۡلَلۡنَا لَكَ أَزۡوَٰجَكَ ٱلَّٰتِيٓ ءَاتَيۡتَ أُجُورَهُنَّ وَمَا مَلَكَتۡ يَمِينُكَ مِمَّآ أَفَآءَ ٱللَّهُ عَلَيۡكَ وَبَنَاتِ عَمِّكَ وَبَنَاتِ عَمَّٰتِكَ وَبَنَاتِ خَالِكَ وَبَنَاتِ خَٰلَٰتِكَ ٱلَّٰتِي هَاجَرۡنَ مَعَكَ وَٱمۡرَأَةٗ مُّؤۡمِنَةً إِن وَهَبَتۡ نَفۡسَهَا لِلنَّبِيِّ إِنۡ أَرَادَ ٱلنَّبِيُّ أَن يَسۡتَنكِحَهَا خَالِصَةٗ لَّكَ مِن دُونِ ٱلۡمُؤۡمِنِينَۗ قَدۡ عَلِمۡنَا مَا فَرَضۡنَا عَلَيۡهِمۡ فِيٓ أَزۡوَٰجِهِمۡ وَمَا مَلَكَتۡ أَيۡمَٰنُهُمۡ لِكَيۡلَا يَكُونَ عَلَيۡكَ حَرَجٞۗ وَكَانَ ٱللَّهُ غَفُورٗا رَّحِيمٗا
ಓ ಪ್ರವಾದಿಯವರೇ! ನೀವು ವಧುದಕ್ಷಿಣೆ (ಮಹರ್) ನೀಡಿ ವಿವಾಹವಾದ ನಿಮ್ಮ ಮಡದಿಯರನ್ನು ನಾವು ನಿಮಗೆ ಧರ್ಮಸಮ್ಮತಗೊಳಿಸಿದ್ದೇವೆ. ಅದೇ ರೀತಿ ಅಲ್ಲಾಹು ನಿಮಗೆ ಯುದ್ಧಾರ್ಜಿತವಾಗಿ ನೀಡಿದ ಗುಲಾಮ ಸ್ತ್ರೀಯರನ್ನು, ನಿಮ್ಮೊಂದಿಗೆ ವಲಸೆ (ಹಿಜ್ರ) ಮಾಡಿದ ನಿಮ್ಮ ತಂದೆಯ ಸಹೋದರರ ಪುತ್ರಿಯರನ್ನು, ತಂದೆಯ ಸಹೋದರಿಯ ಪುತ್ರಿಯರನ್ನು, ತಾಯಿಯ ಸಹೋದರರ ಪುತ್ರಿಯರನ್ನು ಮತ್ತು ತಾಯಿಯ ಸಹೋದರಿಯ ಪುತ್ರಿಯರನ್ನು ಧರ್ಮಸಮ್ಮತಗೊಳಿಸಿದ್ದೇವೆ. ಅದೇ ರೀತಿ ಸತ್ಯವಿಶ್ವಾಸಿಯಾದ ಹೆಣ್ಣು ತನ್ನ ದೇಹವನ್ನು ಪ್ರವಾದಿಗೆ ನೀಡಲು ಬಯಸುವುದಾದರೆ ಮತ್ತು ಪ್ರವಾದಿಯು ಆಕೆಯನ್ನು ವಿವಾಹವಾಗಲು ಬಯಸುವುದಾದರೆ ಅವಳು ಕೂಡ ಧರ್ಮಸಮ್ಮತವಾಗಿದ್ದಾಳೆ. ಇದು ವಿಶೇಷವಾಗಿ ನಿಮಗೆ ಮಾತ್ರವಾಗಿದೆ. ಸತ್ಯವಿಶ್ವಾಸಿಗಳಿಗೆ ಈ ಅವಕಾಶವಿಲ್ಲ. ನಾವು ಅವರ ಪತ್ನಿಯರ ಮತ್ತು ಗುಲಾಮ ಸ್ತ್ರೀಯರ ವಿಷಯದಲ್ಲಿ ಏನು ನಿಯಮ ಮಾಡಿದ್ದೇವೆಂದು ನಮಗೆ ಚೆನ್ನಾಗಿ ತಿಳಿದಿದೆ. ಇದು ನಿಮಗೆ ಯಾವುದೇ ತೊಂದರೆ ಉಂಟಾಗದಿರಲಿ ಎಂದು. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
۞ تُرۡجِي مَن تَشَآءُ مِنۡهُنَّ وَتُـٔۡوِيٓ إِلَيۡكَ مَن تَشَآءُۖ وَمَنِ ٱبۡتَغَيۡتَ مِمَّنۡ عَزَلۡتَ فَلَا جُنَاحَ عَلَيۡكَۚ ذَٰلِكَ أَدۡنَىٰٓ أَن تَقَرَّ أَعۡيُنُهُنَّ وَلَا يَحۡزَنَّ وَيَرۡضَيۡنَ بِمَآ ءَاتَيۡتَهُنَّ كُلُّهُنَّۚ وَٱللَّهُ يَعۡلَمُ مَا فِي قُلُوبِكُمۡۚ وَكَانَ ٱللَّهُ عَلِيمًا حَلِيمٗا
(ಪ್ರವಾದಿಯವರೇ) ಅವರಲ್ಲಿ ನೀವು ಇಚ್ಛಿಸುವವರನ್ನು ದೂರವಿಡಬಹುದು ಮತ್ತು ನೀವು ಇಚ್ಛಿಸುವವರನ್ನು ಹತ್ತಿರವಿಡಬಹುದು. ನೀವು ದೂರವಿಟ್ಟ ಪತ್ನಿಯರಲ್ಲಿ ಯಾರನ್ನಾದರೂ ನೀವು ಹತ್ತಿರಕ್ಕೆ ಕರೆದರೆ ಅದರಲ್ಲಿ ನಿಮಗೆ ದೋಷವಿಲ್ಲ. ಅವರ ಕಣ್ಣು ತಂಪಾಗಲು, ಅವರು ಬೇಸರಪಡದಿರಲು ಮತ್ತು ನೀವು ಅವರಿಗೆ ನೀಡಿರುವುದರಲ್ಲಿ ಅವರೆಲ್ಲರೂ ಸಂತೃಪ್ತರಾಗಲು ಇದು ಅತ್ಯಂತ ಸೂಕ್ತವಾಗಿದೆ. ನಿಮ್ಮ ಹೃದಯಗಳಲ್ಲಿ ಏನಿದೆಯೆಂದು ಅಲ್ಲಾಹು ತಿಳಿಯುತ್ತಾನೆ. ಅಲ್ಲಾಹು ಸರ್ವಜ್ಞನು ಮತ್ತು ಸಹಿಷ್ಣುತೆಯುಳ್ಳನಾಗಿದ್ದಾನೆ.
لَّا يَحِلُّ لَكَ ٱلنِّسَآءُ مِنۢ بَعۡدُ وَلَآ أَن تَبَدَّلَ بِهِنَّ مِنۡ أَزۡوَٰجٖ وَلَوۡ أَعۡجَبَكَ حُسۡنُهُنَّ إِلَّا مَا مَلَكَتۡ يَمِينُكَۗ وَكَانَ ٱللَّهُ عَلَىٰ كُلِّ شَيۡءٖ رَّقِيبٗا
ಇನ್ನು ಮುಂದೆ ಬೇರೆ ಸ್ತ್ರೀಯರನ್ನು ವಿವಾಹವಾಗುವುದು ನಿಮಗೆ ಧರ್ಮಸಮ್ಮತವಲ್ಲ. ಅದೇ ರೀತಿ ಇವರ ಬದಲಿಗೆ ಬೇರೆಯವರನ್ನು ವಿವಾಹವಾಗುವುದು ಕೂಡ ನಿಮಗೆ ಧರ್ಮಸಮ್ಮತವಲ್ಲ. ಅವರ ಅಂದವು ನಿಮ್ಮನ್ನು ಮಂತ್ರಮುಗ್ಧಗೊಳಿಸಿದರೂ ಸಹ. ಆದರೆ ನಿಮ್ಮ ಗುಲಾಮಸ್ತ್ರೀಯರ ಹೊರತು. ಅಲ್ಲಾಹು ಎಲ್ಲ ವಿಷಯಗಳನ್ನೂ ಗಮನಿಸುವವನಾಗಿದ್ದಾನೆ.
يَٰٓأَيُّهَا ٱلَّذِينَ ءَامَنُواْ لَا تَدۡخُلُواْ بُيُوتَ ٱلنَّبِيِّ إِلَّآ أَن يُؤۡذَنَ لَكُمۡ إِلَىٰ طَعَامٍ غَيۡرَ نَٰظِرِينَ إِنَىٰهُ وَلَٰكِنۡ إِذَا دُعِيتُمۡ فَٱدۡخُلُواْ فَإِذَا طَعِمۡتُمۡ فَٱنتَشِرُواْ وَلَا مُسۡتَـٔۡنِسِينَ لِحَدِيثٍۚ إِنَّ ذَٰلِكُمۡ كَانَ يُؤۡذِي ٱلنَّبِيَّ فَيَسۡتَحۡيِۦ مِنكُمۡۖ وَٱللَّهُ لَا يَسۡتَحۡيِۦ مِنَ ٱلۡحَقِّۚ وَإِذَا سَأَلۡتُمُوهُنَّ مَتَٰعٗا فَسۡـَٔلُوهُنَّ مِن وَرَآءِ حِجَابٖۚ ذَٰلِكُمۡ أَطۡهَرُ لِقُلُوبِكُمۡ وَقُلُوبِهِنَّۚ وَمَا كَانَ لَكُمۡ أَن تُؤۡذُواْ رَسُولَ ٱللَّهِ وَلَآ أَن تَنكِحُوٓاْ أَزۡوَٰجَهُۥ مِنۢ بَعۡدِهِۦٓ أَبَدًاۚ إِنَّ ذَٰلِكُمۡ كَانَ عِندَ ٱللَّهِ عَظِيمًا
ಓ ಸತ್ಯವಿಶ್ವಾಸಿಗಳೇ! ನಿಮಗೆ ಅನುಮತಿ ಸಿಗುವ ತನಕ ನೀವು ಆಹಾರ ಸೇವಿಸಲು ಪ್ರವಾದಿಯ ಮನೆಗಳನ್ನು ಪ್ರವೇಶಿಸಬೇಡಿ—ಆಹಾರ ಸಿದ್ಧವಾಗುವುದನ್ನು ಕಾಯುತ್ತಾ ಅಲ್ಲಿ ಕೂರುವುದಕ್ಕಾಗಿ. ಬದಲಿಗೆ, ನಿಮ್ಮನ್ನು ಕರೆಯಲಾದರೆ ಒಳಗೆ ಪ್ರವೇಶಿಸಿರಿ ಮತ್ತು ಆಹಾರ ಸೇವಿಸಿದ ಬಳಿಕ ಹೊರಟು ಹೋಗಿರಿ. ಅಲ್ಲಿ ಹರಟೆ ಹೊಡೆಯುತ್ತಾ ಕೂರಬೇಡಿ. ಇದರಿಂದ ಪ್ರವಾದಿಯವರಿಗೆ ಖಂಡಿತ ತೊಂದರೆಯಾಗುತ್ತದೆ. ಅದನ್ನು ನಿಮ್ಮೊಡನೆ ಹೇಳಲು ಅವರು ಸಂಕೋಚಪಡುತ್ತಾರೆ. ಆದರೆ ಸತ್ಯವನ್ನು ಹೇಳಲು ಅಲ್ಲಾಹು ಸಂಕೋಚಪಡುವುದಿಲ್ಲ. ನೀವು ಅವರೊಡನೆ (ಪ್ರವಾದಿ ಪತ್ನಿಯರೊಡನೆ) ಏನಾದರೂ ವಸ್ತುವನ್ನು ಕೇಳುವುದಾದರೆ ಪರದೆಯ ಹಿಂದಿನಿಂದ ಕೇಳಿರಿ. ಅದು ನಿಮ್ಮ ಮತ್ತು ಅವರ ಹೃದಯಗಳಿಗೆ ಹೆಚ್ಚು ಪರಿಶುದ್ಧಿಯನ್ನು ನೀಡುತ್ತದೆ. ಅಲ್ಲಾಹನ ಪ್ರವಾದಿಗೆ ತೊಂದರೆ ಕೊಡುವುದು ನಿಮಗೆ ಧರ್ಮಸಮ್ಮತವಲ್ಲ. ಅದೇ ರೀತಿ ಅವರ ನಿಧನದ ಬಳಿಕ ಅವರ ಪತ್ನಿಯರನ್ನು ಯಾವುದೇ ಸ್ಥಿತಿಯಲ್ಲೂ ವಿವಾಹವಾಗುವುದು ನಿಮಗೆ ಧರ್ಮಸಮ್ಮತವಲ್ಲ. ನಿಶ್ಚಯವಾಗಿಯೂ ಅವೆಲ್ಲವೂ ಅಲ್ಲಾಹನ ದೃಷ್ಟಿಯಲ್ಲಿ ಗಂಭೀರ ಅಪರಾಧಗಳಾಗಿವೆ.
إِن تُبۡدُواْ شَيۡـًٔا أَوۡ تُخۡفُوهُ فَإِنَّ ٱللَّهَ كَانَ بِكُلِّ شَيۡءٍ عَلِيمٗا
ನೀವು ಯಾವುದೇ ವಿಷಯವನ್ನು ಬಹಿರಂಗಪಡಿಸಿದರೂ ಅಥವಾ ಅಡಗಿಸಿಟ್ಟರೂ—ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳನ್ನು ತಿಳಿದವನಾಗಿದ್ದಾನೆ.
لَّا جُنَاحَ عَلَيۡهِنَّ فِيٓ ءَابَآئِهِنَّ وَلَآ أَبۡنَآئِهِنَّ وَلَآ إِخۡوَٰنِهِنَّ وَلَآ أَبۡنَآءِ إِخۡوَٰنِهِنَّ وَلَآ أَبۡنَآءِ أَخَوَٰتِهِنَّ وَلَا نِسَآئِهِنَّ وَلَا مَا مَلَكَتۡ أَيۡمَٰنُهُنَّۗ وَٱتَّقِينَ ٱللَّهَۚ إِنَّ ٱللَّهَ كَانَ عَلَىٰ كُلِّ شَيۡءٖ شَهِيدًا
ಮಹಿಳೆಯರು ಅವರ ತಂದೆಯಂದಿರು, ಪುತ್ರರು, ಸಹೋದರರು, ಸಹೋದರ ಪುತ್ರರು, ಸಹೋದರಿ ಪುತ್ರರು, ಅವರದ್ದೇ ಮಹಿಳೆಯರು ಮತ್ತು ಅವರ ಅಧೀನದಲ್ಲಿರುವ ಗುಲಾಮರು ಮುಂತಾದವರ ಮುಂದೆ (ಹಿಜಾಬ್ ಧರಿಸದೆ) ಬರುವುದರಲ್ಲಿ ತೊಂದರೆಯಿಲ್ಲ. (ಮಹಿಳೆಯರೇ) ನೀವು ಅಲ್ಲಾಹನನ್ನು ಭಯಪಡಿರಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ.
إِنَّ ٱللَّهَ وَمَلَٰٓئِكَتَهُۥ يُصَلُّونَ عَلَى ٱلنَّبِيِّۚ يَٰٓأَيُّهَا ٱلَّذِينَ ءَامَنُواْ صَلُّواْ عَلَيۡهِ وَسَلِّمُواْ تَسۡلِيمًا
ನಿಶ್ಚಯವಾಗಿಯೂ ಅಲ್ಲಾಹು ಪ್ರವಾದಿಯ ಮೇಲೆ ಕೃಪೆ ತೋರುತ್ತಾನೆ ಮತ್ತು ದೇವದೂತರುಗಳು ಅದಕ್ಕಾಗಿ ಪ್ರಾರ್ಥಿಸುತ್ತಾರೆ. ಓ ಸತ್ಯವಿಶ್ವಾಸಿಗಳೇ! ನೀವು ಕೂಡ ಅವರ ಮೇಲೆ ಕೃಪೆ ಮತ್ತು ಶಾಂತಿ ವರ್ಷಿಸಲು ಪ್ರಾರ್ಥಿಸಿರಿ.
إِنَّ ٱلَّذِينَ يُؤۡذُونَ ٱللَّهَ وَرَسُولَهُۥ لَعَنَهُمُ ٱللَّهُ فِي ٱلدُّنۡيَا وَٱلۡأٓخِرَةِ وَأَعَدَّ لَهُمۡ عَذَابٗا مُّهِينٗا
ನಿಶ್ಚಯವಾಗಿಯೂ ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ತೊಂದರೆ ಕೊಡುವವರನ್ನು ಅಲ್ಲಾಹು ಇಹಲೋಕದಲ್ಲೂ, ಪರಲೋಕದಲ್ಲೂ ಶಪಿಸಿದ್ದಾನೆ. ಅವರಿಗೆ ಅತ್ಯಂತ ಅವಮಾನಕರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ.
وَٱلَّذِينَ يُؤۡذُونَ ٱلۡمُؤۡمِنِينَ وَٱلۡمُؤۡمِنَٰتِ بِغَيۡرِ مَا ٱكۡتَسَبُواْ فَقَدِ ٱحۡتَمَلُواْ بُهۡتَٰنٗا وَإِثۡمٗا مُّبِينٗا
ಸತ್ಯವಿಶ್ವಾಸಿ ಪುರುಷರು ಮತ್ತು ಮಹಿಳೆಯರು ಯಾವುದೇ ತಪ್ಪು ಮಾಡದಿದ್ದರೂ ಸಹ ಅವರಿಗೆ ತೊಂದರೆ ಕೊಡುವವರು ಯಾರೋ ಅವರು ಮಹಾ ಸುಳ್ಳಾರೋಪವನ್ನು ಮತ್ತು ಸ್ಪಷ್ಟ ಪಾಪವನ್ನು ಹೊತ್ತುಕೊಳ್ಳುತ್ತಾರೆ.
يَٰٓأَيُّهَا ٱلنَّبِيُّ قُل لِّأَزۡوَٰجِكَ وَبَنَاتِكَ وَنِسَآءِ ٱلۡمُؤۡمِنِينَ يُدۡنِينَ عَلَيۡهِنَّ مِن جَلَٰبِيبِهِنَّۚ ذَٰلِكَ أَدۡنَىٰٓ أَن يُعۡرَفۡنَ فَلَا يُؤۡذَيۡنَۗ وَكَانَ ٱللَّهُ غَفُورٗا رَّحِيمٗا
ಓ ಪ್ರವಾದಿಯವರೇ! ನಿಮ್ಮ ಮಡದಿಯರಿಗೆ, ಪುತ್ರಿಯರಿಗೆ ಮತ್ತು ಸತ್ಯವಿಶ್ವಾಸಿ ಮಹಿಳೆಯರಿಗೆ—ಅವರು ತಮ್ಮ ಮೈಮೇಲೆ ಚಾದರಗಳನ್ನು ಹೊದ್ದುಕೊಳ್ಳಲು ಹೇಳಿರಿ. ಇದರಿಂದ ಅವರನ್ನು ಬಹಳ ಬೇಗ ಗುರುತು ಹಚ್ಚಲು ಸಾಧ್ಯವಾಗುತ್ತದೆ ಮತ್ತು ಅವರಿಗೆ ಕಿರುಕುಳಗಳು ಉಂಟಾಗುವುದಿಲ್ಲ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
۞ لَّئِن لَّمۡ يَنتَهِ ٱلۡمُنَٰفِقُونَ وَٱلَّذِينَ فِي قُلُوبِهِم مَّرَضٞ وَٱلۡمُرۡجِفُونَ فِي ٱلۡمَدِينَةِ لَنُغۡرِيَنَّكَ بِهِمۡ ثُمَّ لَا يُجَاوِرُونَكَ فِيهَآ إِلَّا قَلِيلٗا
ಕಪಟವಿಶ್ವಾಸಿಗಳು, ಹೃದಯಗಳಲ್ಲಿ ರೋಗವಿರುವವರು ಮತ್ತು ಮದೀನದಲ್ಲಿ ಸುಳ್ಳು ವದಂತಿ ಹಬ್ಬಿಸುವವರು ಅದನ್ನು ನಿಲ್ಲಿಸದಿದ್ದರೆ ನಾವು ನಿಮಗೆ ಖಂಡಿತ ಅವರ ಮೇಲೆ ಹತೋಟಿಯನ್ನು ನೀಡುತ್ತೇವೆ. ನಂತರ ಅವರು ಸ್ವಲ್ಪ ದಿನಗಳವರೆಗೆ ಮಾತ್ರ ನಿಮ್ಮೊಡನೆ ಅಲ್ಲಿ (ಮದೀನದಲ್ಲಿ) ಇರಲು ಸಾಧ್ಯ.
مَّلۡعُونِينَۖ أَيۡنَمَا ثُقِفُوٓاْ أُخِذُواْ وَقُتِّلُواْ تَقۡتِيلٗا
ಅವರು ಶಾಪಗ್ರಸ್ತರು. ಅವರು ಎಲ್ಲೇ ಕಂಡುಬಂದರೂ ಅವರನ್ನು ಸೆರೆ ಹಿಡಿಯಲಾಗಲಿ ಮತ್ತು ಕಗ್ಗೊಲೆ ಮಾಡಲಾಗಲಿ.
سُنَّةَ ٱللَّهِ فِي ٱلَّذِينَ خَلَوۡاْ مِن قَبۡلُۖ وَلَن تَجِدَ لِسُنَّةِ ٱللَّهِ تَبۡدِيلٗا
ಹಿಂದಿನ ಕಾಲದವರ ವಿಷಯದಲ್ಲೂ ಅಲ್ಲಾಹು ಇದೇ ಕ್ರಮ ಕೈಗೊಂಡಿದ್ದನು. ಅಲ್ಲಾಹನ ಕ್ರಮಕ್ಕೆ ನೀವು ಯಾವುದೇ ಬದಲಾವಣೆಯನ್ನು ಕಾಣಲಾರಿರಿ.
يَسۡـَٔلُكَ ٱلنَّاسُ عَنِ ٱلسَّاعَةِۖ قُلۡ إِنَّمَا عِلۡمُهَا عِندَ ٱللَّهِۚ وَمَا يُدۡرِيكَ لَعَلَّ ٱلسَّاعَةَ تَكُونُ قَرِيبًا
ಜನರು ನಿಮ್ಮೊಂದಿಗೆ ಅಂತ್ಯಸಮಯದ ಬಗ್ಗೆ ಕೇಳುತ್ತಾರೆ. ಹೇಳಿರಿ: “ಅದರ ಜ್ಞಾನವಿರುವುದು ಅಲ್ಲಾಹನ ಬಳಿ ಮಾತ್ರ.” ನಿಮಗೇನು ಗೊತ್ತು? ಅಂತ್ಯಸಮಯವು ಬಹಳ ಹತ್ತಿರದಲ್ಲೇ ಇರಬಹುದು!
إِنَّ ٱللَّهَ لَعَنَ ٱلۡكَٰفِرِينَ وَأَعَدَّ لَهُمۡ سَعِيرًا
ನಿಶ್ಚಯವಾಗಿಯೂ ಅಲ್ಲಾಹು ಸತ್ಯನಿಷೇಧಿಗಳನ್ನು ಶಪಿಸಿದ್ದಾನೆ ಮತ್ತು ಅವರಿಗೆ ಜ್ವಲಿಸುವ ನರಕವನ್ನು ಸಿದ್ಧಗೊಳಿಸಿದ್ದಾನೆ.
خَٰلِدِينَ فِيهَآ أَبَدٗاۖ لَّا يَجِدُونَ وَلِيّٗا وَلَا نَصِيرٗا
ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅವರಿಗೆ ಯಾವುದೇ ರಕ್ಷಕರು ಅಥವಾ ಸಹಾಯಕರು ಇರುವುದಿಲ್ಲ.
يَوۡمَ تُقَلَّبُ وُجُوهُهُمۡ فِي ٱلنَّارِ يَقُولُونَ يَٰلَيۡتَنَآ أَطَعۡنَا ٱللَّهَ وَأَطَعۡنَا ٱلرَّسُولَا۠
ಅವರ ಮುಖಗಳು ನರಕದಲ್ಲಿ ಬುಡಮೇಲಾಗುವ ದಿನ! ಅವರು ಹೇಳುವರು: “ನಾವು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞಾಪಾಲನೆ ಮಾಡುತ್ತಿದ್ದರೆ ಎಷ್ಟು ಚೆನ್ನಾಗಿತ್ತು!”
وَقَالُواْ رَبَّنَآ إِنَّآ أَطَعۡنَا سَادَتَنَا وَكُبَرَآءَنَا فَأَضَلُّونَا ٱلسَّبِيلَا۠
ಅವರು ಹೇಳುವರು: “ನಮ್ಮ ಪರಿಪಾಲಕನೇ! ನಾವು ನಮ್ಮ ಮುಖಂಡರು ಮತ್ತು ಹಿರಿಯರು ಹೇಳಿದಂತೆ ಕೇಳಿದೆವು. ಅವರು ನಮ್ಮನ್ನು ನೇರಮಾರ್ಗದಿಂದ ತಪ್ಪಿಸಿದರು.
رَبَّنَآ ءَاتِهِمۡ ضِعۡفَيۡنِ مِنَ ٱلۡعَذَابِ وَٱلۡعَنۡهُمۡ لَعۡنٗا كَبِيرٗا
ನಮ್ಮ ಪರಿಪಾಲಕನೇ! ಅವರಿಗೆ ಇಮ್ಮಡಿ ಶಿಕ್ಷೆಯನ್ನು ನೀಡು ಮತ್ತು ಅವರನ್ನು ಉಗ್ರವಾಗಿ ಶಪಿಸು.”
يَٰٓأَيُّهَا ٱلَّذِينَ ءَامَنُواْ لَا تَكُونُواْ كَٱلَّذِينَ ءَاذَوۡاْ مُوسَىٰ فَبَرَّأَهُ ٱللَّهُ مِمَّا قَالُواْۚ وَكَانَ عِندَ ٱللَّهِ وَجِيهٗا
ಓ ಸತ್ಯವಿಶ್ವಾಸಿಗಳೇ! ಮೂಸಾರಿಗೆ ತೊಂದರೆ ಕೊಟ್ಟ ಜನರಂತೆ ನೀವಾಗಬೇಡಿ. ಅವರು ಏನು ಮಾತು ಹೇಳಿದರೋ ಅದರಿಂದ ಅಲ್ಲಾಹು ಅವರನ್ನು (ಮೂಸಾರನ್ನು) ಮುಕ್ತಗೊಳಿಸಿದನು. ಅವರು (ಮೂಸಾ) ಅಲ್ಲಾಹನ ಬಳಿ ಉತ್ಕೃಷ್ಟರಾಗಿದ್ದಾರೆ.
يَٰٓأَيُّهَا ٱلَّذِينَ ءَامَنُواْ ٱتَّقُواْ ٱللَّهَ وَقُولُواْ قَوۡلٗا سَدِيدٗا
ಓ ಸತ್ಯವಿಶ್ವಾಸಿಗಳೇ! ನೀವು ಅಲ್ಲಾಹನನ್ನು ಭಯಪಡಿರಿ ಮತ್ತು ನೇರವಾದ (ಸತ್ಯವಾದ) ಮಾತುಗಳನ್ನಾಡಿರಿ.
يُصۡلِحۡ لَكُمۡ أَعۡمَٰلَكُمۡ وَيَغۡفِرۡ لَكُمۡ ذُنُوبَكُمۡۗ وَمَن يُطِعِ ٱللَّهَ وَرَسُولَهُۥ فَقَدۡ فَازَ فَوۡزًا عَظِيمًا
ಹಾಗಾದರೆ ಅಲ್ಲಾಹು ನಿಮಗೆ ನಿಮ್ಮ ಕರ್ಮಗಳನ್ನು ಸರಿಪಡಿಸುವನು ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸುವನು. ಯಾರು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞೆಗಳನ್ನು ಪಾಲಿಸುತ್ತಾನೋ ಅವನು ಮಹಾ ವಿಜಯವನ್ನು ಗಳಿಸಿದ್ದಾನೆ.
إِنَّا عَرَضۡنَا ٱلۡأَمَانَةَ عَلَى ٱلسَّمَٰوَٰتِ وَٱلۡأَرۡضِ وَٱلۡجِبَالِ فَأَبَيۡنَ أَن يَحۡمِلۡنَهَا وَأَشۡفَقۡنَ مِنۡهَا وَحَمَلَهَا ٱلۡإِنسَٰنُۖ إِنَّهُۥ كَانَ ظَلُومٗا جَهُولٗا
ನಿಶ್ಚಯವಾಗಿಯೂ ನಾವು ಆ ವಿಶ್ವಸ್ತತೆಯನ್ನು ಭೂಮ್ಯಾಕಾಶಗಳು ಮತ್ತು ಪರ್ವತಗಳ ಮುಂದೆ ಇಟ್ಟಾಗ, ಅದನ್ನು ವಹಿಸಿಕೊಳ್ಳಲು ಅವೆಲ್ಲವೂ ನಿರಾಕರಿಸಿದವು ಮತ್ತು ಅದನ್ನು ಭಯಪಟ್ಟವು. ಆದರೆ ಮನುಷ್ಯನು ಅದನ್ನು ವಹಿಸಿಕೊಂಡನು. ಮನುಷ್ಯನು ಮಹಾ ಅಕ್ರಮಿ ಮತ್ತು ಅವಿವೇಕಿಯಾಗಿದ್ದಾನೆ.
لِّيُعَذِّبَ ٱللَّهُ ٱلۡمُنَٰفِقِينَ وَٱلۡمُنَٰفِقَٰتِ وَٱلۡمُشۡرِكِينَ وَٱلۡمُشۡرِكَٰتِ وَيَتُوبَ ٱللَّهُ عَلَى ٱلۡمُؤۡمِنِينَ وَٱلۡمُؤۡمِنَٰتِۗ وَكَانَ ٱللَّهُ غَفُورٗا رَّحِيمَۢا
ಅಲ್ಲಾಹು ಕಪಟವಿಶ್ವಾಸಿ ಪುರುಷರನ್ನು ಮತ್ತು ಮಹಿಳೆಯರನ್ನು ಹಾಗೂ ಬಹುದೇವವಿಶ್ವಾಸಿ ಪುರುಷರನ್ನು ಮತ್ತು ಮಹಿಳೆಯನ್ನು ಶಿಕ್ಷಿಸುವುದಕ್ಕಾಗಿ ಹಾಗೂ ಸತ್ಯವಿಶ್ವಾಸಿ ಪುರುಷರು ಮತ್ತು ಮಹಿಳೆಯರ ಪಶ್ಚಾತ್ತಾಪವನ್ನು ಸ್ವೀಕರಿಸುವುದಕ್ಕಾಗಿ. ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
مشاركة عبر