Header Include

Kannada translation - Hamza Butur

Translated by Muhammad Hamza Batur and developed under the supervision of Rowwad Translation Center

QR Code https://quran.islamcontent.com/nl/kannada_hamza

يَٰٓأَيُّهَا ٱلۡمُدَّثِّرُ

ಓ ಹೊದಿಕೆಯನ್ನು ಹೊದ್ದುಕೊಂಡವರೇ![1]

[1] ಪ್ರವಾದಿಯವರಿಗೆ (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಮೊಟ್ಟಮೊದಲು ಸೂರ ಅಲಕ್‌ನ ಪ್ರಥಮ 5 ವಚನಗಳು ಅವತೀರ್ಣವಾದವು. ನಂತರ ದೀರ್ಘ ಸಮಯದ ತನಕ ಅವರಿಗೆ ಕುರ್‌ಆನ್ ಅವತೀರ್ಣವಾಗಲಿಲ್ಲ. ಒಂದಿನ ಇದ್ದಕ್ಕಿದ್ದಂತೆ ಹಿರಾ ಗುಹೆಯಲ್ಲಿ ನೋಡಿದ ಅದೇ ದೇವದೂತರು ಆಕಾಶ ಮತ್ತು ಭೂಮಿಯ ಮಧ್ಯೆ ಸಂಪೂರ್ಣ ದಿಗಂತವನ್ನು ಮುಚ್ಚುವ ರೀತಿಯಲ್ಲಿ ಕುಳಿತಿರುವುದನ್ನು ಕಂಡರು. ಅವರು ಭಯದಿಂದ ಮನೆಗೆ ಓಡಿ ನನ್ನನ್ನು ಹೊದಿಯಿರಿ; ನನ್ನನ್ನು ಹೊದಿಯಿರಿ ಎಂದರು. ಅವರನ್ನು ಹೊದಿಕೆಯಿಂದ ಹೊದಿಯಲಾಯಿತು. ಆಗ ಈ ವಚನಗಳು ಅವತೀರ್ಣವಾದವು.
ಓ ಹೊದಿಕೆಯನ್ನು ಹೊದ್ದುಕೊಂಡವರೇ![1]

قُمۡ فَأَنذِرۡ

ಎದ್ದೇಳಿರಿ ಮತ್ತು ಎಚ್ಚರಿಕೆ ನೀಡಿರಿ.

ಎದ್ದೇಳಿರಿ ಮತ್ತು ಎಚ್ಚರಿಕೆ ನೀಡಿರಿ.

وَرَبَّكَ فَكَبِّرۡ

ನಿಮ್ಮ ಪರಿಪಾಲಕನ (ಅಲ್ಲಾಹನ) ಮಹಾತ್ಮೆಯನ್ನು ಕೊಂಡಾಡಿರಿ.

ನಿಮ್ಮ ಪರಿಪಾಲಕನ (ಅಲ್ಲಾಹನ) ಮಹಾತ್ಮೆಯನ್ನು ಕೊಂಡಾಡಿರಿ.

وَثِيَابَكَ فَطَهِّرۡ

ನಿಮ್ಮ ಬಟ್ಟೆಗಳನ್ನು ಶುದ್ಧವಾಗಿಡಿರಿ.

ನಿಮ್ಮ ಬಟ್ಟೆಗಳನ್ನು ಶುದ್ಧವಾಗಿಡಿರಿ.

وَٱلرُّجۡزَ فَٱهۡجُرۡ

ಅಶುದ್ಧವನ್ನು ವರ್ಜಿಸಿರಿ.

ಅಶುದ್ಧವನ್ನು ವರ್ಜಿಸಿರಿ.

وَلَا تَمۡنُن تَسۡتَكۡثِرُ

ಉಪಕಾರ ಮಾಡಿ ಹೆಚ್ಚು ಗಳಿಸುವ ವ್ಯಾಮೋಹ ಬಿಟ್ಟುಬಿಡಿ.

ಉಪಕಾರ ಮಾಡಿ ಹೆಚ್ಚು ಗಳಿಸುವ ವ್ಯಾಮೋಹ ಬಿಟ್ಟುಬಿಡಿ.

وَلِرَبِّكَ فَٱصۡبِرۡ

ನಿಮ್ಮ ಪರಿಪಾಲಕನ (ಅಲ್ಲಾಹನ) ಮಾರ್ಗದಲ್ಲಿ ತಾಳ್ಮೆಯಿಂದಿರಿ.

ನಿಮ್ಮ ಪರಿಪಾಲಕನ (ಅಲ್ಲಾಹನ) ಮಾರ್ಗದಲ್ಲಿ ತಾಳ್ಮೆಯಿಂದಿರಿ.

فَإِذَا نُقِرَ فِي ٱلنَّاقُورِ

ಕಹಳೆಯಲ್ಲಿ ಊದಲಾಗುವಾಗ.

ಕಹಳೆಯಲ್ಲಿ ಊದಲಾಗುವಾಗ.

فَذَٰلِكَ يَوۡمَئِذٖ يَوۡمٌ عَسِيرٌ

ಆ ದಿನವು ಅತ್ಯಂತ ಕಠಿಣ ದಿನವಾಗಿರುವುದು.

ಆ ದಿನವು ಅತ್ಯಂತ ಕಠಿಣ ದಿನವಾಗಿರುವುದು.

عَلَى ٱلۡكَٰفِرِينَ غَيۡرُ يَسِيرٖ

ಅದು ಸತ್ಯನಿಷೇಧಿಗಳಿಗೆ ಸುಗಮವಾಗಿರುವುದಿಲ್ಲ.

ಅದು ಸತ್ಯನಿಷೇಧಿಗಳಿಗೆ ಸುಗಮವಾಗಿರುವುದಿಲ್ಲ.

ذَرۡنِي وَمَنۡ خَلَقۡتُ وَحِيدٗا

ನನ್ನನ್ನು ಹಾಗೂ ನಾನು ಏಕಾಂಗಿಯಾಗಿ ಸೃಷ್ಟಿದವನನ್ನು ಬಿಟ್ಟುಬಿಡಿ.[1]

[1] ಅಂದರೆ ಅವನ ವಿಷಯವನ್ನು ನಾನು ನೋಡಿಕೊಳ್ಳುವೆನು. ಅವನು ಅವನ ತಾಯಿಯ ಹೊಟ್ಟೆಯಿಂದ ಹೊರಬರುವಾಗ ಅವನಲ್ಲಿ ಐಶ್ವರ್ಯ ಅಥವಾ ಮಕ್ಕಳಿರಲಿಲ್ಲ. ಇವೆಲ್ಲವೂ ನಾನು ಅವನಿಗೆ ನೀಡಿದ ಅನುಗ್ರಹಗಳು. ಆದರೂ ಅವನು ಈಗ ನನ್ನ ವಿರುದ್ಧ ಸೆಟೆದು ನಿಂತಿದ್ದಾನೆ. — ಇಲ್ಲಿ ಹೇಳಲಾಗಿರುವುದು ಕುರೈಷಿ ಮುಖಂಡ ವಲೀದ್ ಬಿನ್ ಮುಗೀರ ಎಂಬವನ ಬಗ್ಗೆಯಾಗಿದೆ.
ನನ್ನನ್ನು ಹಾಗೂ ನಾನು ಏಕಾಂಗಿಯಾಗಿ ಸೃಷ್ಟಿದವನನ್ನು ಬಿಟ್ಟುಬಿಡಿ.[1]

وَجَعَلۡتُ لَهُۥ مَالٗا مَّمۡدُودٗا

ನಾನು ಅವನಿಗೆ ಹೇರಳ ಐಶ್ವರ್ಯವನ್ನು ನೀಡಿದೆನು.

ನಾನು ಅವನಿಗೆ ಹೇರಳ ಐಶ್ವರ್ಯವನ್ನು ನೀಡಿದೆನು.

وَبَنِينَ شُهُودٗا

ಸನ್ನದ್ಧರಾಗಿರುವ ಗಂಡು ಮಕ್ಕಳನ್ನು ನೀಡಿದೆನು.

ಸನ್ನದ್ಧರಾಗಿರುವ ಗಂಡು ಮಕ್ಕಳನ್ನು ನೀಡಿದೆನು.

وَمَهَّدتُّ لَهُۥ تَمۡهِيدٗا

ನಾನು ಅವನಿಗೆ ಅನೇಕ ಅನುಕೂಲತೆಗಳನ್ನು ಮಾಡಿಕೊಟ್ಟೆನು.

ನಾನು ಅವನಿಗೆ ಅನೇಕ ಅನುಕೂಲತೆಗಳನ್ನು ಮಾಡಿಕೊಟ್ಟೆನು.

ثُمَّ يَطۡمَعُ أَنۡ أَزِيدَ

ಆದರೂ ನಾನು ಅವನಿಗೆ ಇನ್ನೂ ಹೆಚ್ಚು ನೀಡಬೇಕೆಂದು ಅವನು ಹಾತೊರೆಯುತ್ತಾನೆ.

ಆದರೂ ನಾನು ಅವನಿಗೆ ಇನ್ನೂ ಹೆಚ್ಚು ನೀಡಬೇಕೆಂದು ಅವನು ಹಾತೊರೆಯುತ್ತಾನೆ.

كَلَّآۖ إِنَّهُۥ كَانَ لِأٓيَٰتِنَا عَنِيدٗا

ಖಂಡಿತ ಇಲ್ಲ. ಅವನು ನಮ್ಮ ವಚನಗಳ ವಿರೋಧಿಯಾಗಿದ್ದಾನೆ.

ಖಂಡಿತ ಇಲ್ಲ. ಅವನು ನಮ್ಮ ವಚನಗಳ ವಿರೋಧಿಯಾಗಿದ್ದಾನೆ.

سَأُرۡهِقُهُۥ صَعُودًا

ಸದ್ಯವೇ ನಾನು ಅವನನ್ನು ಒಂದು ಪ್ರಯಾಸಕರ ಏರುವಿಕೆಯನ್ನು ಏರುವಂತೆ ಮಾಡುವೆನು.[1]

[1] ಅಂದರೆ ಅವನಿಗೆ ಸಹಿಸಲು ಅಸಾಧ್ಯವಾದ ಶಿಕ್ಷೆಯನ್ನು ನೀಡುವೆನು. ಇತರ ಕೆಲವು ವ್ಯಾಖ್ಯಾನಕಾರರು ಹೇಳುವಂತೆ ನರಕದಲ್ಲಿ ಒಂದು ಅಗ್ನಿಯ ಪರ್ವತವಿದ್ದು ಈತ ಅದನ್ನು ಏರುತ್ತಲೇ ಇರುವನು.
ಸದ್ಯವೇ ನಾನು ಅವನನ್ನು ಒಂದು ಪ್ರಯಾಸಕರ ಏರುವಿಕೆಯನ್ನು ಏರುವಂತೆ ಮಾಡುವೆನು.[1]

إِنَّهُۥ فَكَّرَ وَقَدَّرَ

ಅವನು ಯೋಚಿಸಿದನು ಮತ್ತು ನಿರ್ಣಯಿಸಿದನು.

ಅವನು ಯೋಚಿಸಿದನು ಮತ್ತು ನಿರ್ಣಯಿಸಿದನು.

فَقُتِلَ كَيۡفَ قَدَّرَ

ಅವನು ನಾಶವಾಗಲಿ! ಅವನು ಹೇಗೆ ನಿರ್ಣಯಿಸಿದನು?

ಅವನು ನಾಶವಾಗಲಿ! ಅವನು ಹೇಗೆ ನಿರ್ಣಯಿಸಿದನು?

ثُمَّ قُتِلَ كَيۡفَ قَدَّرَ

ಪುನಃ ಅವನು ನಾಶವಾಗಲಿ! ಅವನು ಹೇಗೆ ನಿರ್ಣಯಿಸಿದನು?

ಪುನಃ ಅವನು ನಾಶವಾಗಲಿ! ಅವನು ಹೇಗೆ ನಿರ್ಣಯಿಸಿದನು?

ثُمَّ نَظَرَ

ನಂತರ ಅವನು ನೋಡಿದನು.

ನಂತರ ಅವನು ನೋಡಿದನು.

ثُمَّ عَبَسَ وَبَسَرَ

ನಂತರ ಅವನು ಹುಬ್ಬುಗಂಟಿಕ್ಕಿದನು ಮತ್ತು ಮುಖವನ್ನು ಸಿಂಡರಿಸಿದನು.

ನಂತರ ಅವನು ಹುಬ್ಬುಗಂಟಿಕ್ಕಿದನು ಮತ್ತು ಮುಖವನ್ನು ಸಿಂಡರಿಸಿದನು.

ثُمَّ أَدۡبَرَ وَٱسۡتَكۡبَرَ

ನಂತರ ಅವನು ಹಿಂದಡಿಯಿಟ್ಟನು ಮತ್ತು ಅಹಂಕಾರ ತೋರಿದನು.

ನಂತರ ಅವನು ಹಿಂದಡಿಯಿಟ್ಟನು ಮತ್ತು ಅಹಂಕಾರ ತೋರಿದನು.

فَقَالَ إِنۡ هَٰذَآ إِلَّا سِحۡرٞ يُؤۡثَرُ

ನಂತರ ಅವನು ಹೇಳಿದನು: “ಇದು (ಕುರ್‌ಆನ್) ನಕಲು ಮಾಡಲಾದ ಮಾಟಗಾರಿಕೆಯಲ್ಲದೆ ಇನ್ನೇನೂ ಅಲ್ಲ.

ನಂತರ ಅವನು ಹೇಳಿದನು: “ಇದು (ಕುರ್‌ಆನ್) ನಕಲು ಮಾಡಲಾದ ಮಾಟಗಾರಿಕೆಯಲ್ಲದೆ ಇನ್ನೇನೂ ಅಲ್ಲ.

إِنۡ هَٰذَآ إِلَّا قَوۡلُ ٱلۡبَشَرِ

ಇದು ಕೇವಲ ಒಬ್ಬ ಮನುಷ್ಯನ ಮಾತಾಗಿದೆ.”

ಇದು ಕೇವಲ ಒಬ್ಬ ಮನುಷ್ಯನ ಮಾತಾಗಿದೆ.”

سَأُصۡلِيهِ سَقَرَ

ನಾನು ಸದ್ಯವೇ ಅವನನ್ನು ಸಖರ್‌ಗೆ (ನರಕಕ್ಕೆ) ಹಾಕುವೆನು.

ನಾನು ಸದ್ಯವೇ ಅವನನ್ನು ಸಖರ್‌ಗೆ (ನರಕಕ್ಕೆ) ಹಾಕುವೆನು.

وَمَآ أَدۡرَىٰكَ مَا سَقَرُ

ಸಖರ್ ಏನೆಂದು ನಿಮಗೇನು ಗೊತ್ತು?

ಸಖರ್ ಏನೆಂದು ನಿಮಗೇನು ಗೊತ್ತು?

لَا تُبۡقِي وَلَا تَذَرُ

ಅದು ಏನನ್ನೂ ಉಳಿಸುವುದಿಲ್ಲ ಮತ್ತು ಬಿಟ್ಟುಬಿಡುವುದಿಲ್ಲ.

ಅದು ಏನನ್ನೂ ಉಳಿಸುವುದಿಲ್ಲ ಮತ್ತು ಬಿಟ್ಟುಬಿಡುವುದಿಲ್ಲ.

لَوَّاحَةٞ لِّلۡبَشَرِ

ಅದು ಚರ್ಮವನ್ನು ಸುಟ್ಟು ಕರಕಲಾಗಿಸುತ್ತದೆ.

ಅದು ಚರ್ಮವನ್ನು ಸುಟ್ಟು ಕರಕಲಾಗಿಸುತ್ತದೆ.

عَلَيۡهَا تِسۡعَةَ عَشَرَ

ಅದರ ಮೇಲೆ ಹತ್ತೊಂಬತ್ತು (ದೇವದೂತರುಗಳು) ಇದ್ದಾರೆ.

ಅದರ ಮೇಲೆ ಹತ್ತೊಂಬತ್ತು (ದೇವದೂತರುಗಳು) ಇದ್ದಾರೆ.

وَمَا جَعَلۡنَآ أَصۡحَٰبَ ٱلنَّارِ إِلَّا مَلَٰٓئِكَةٗۖ وَمَا جَعَلۡنَا عِدَّتَهُمۡ إِلَّا فِتۡنَةٗ لِّلَّذِينَ كَفَرُواْ لِيَسۡتَيۡقِنَ ٱلَّذِينَ أُوتُواْ ٱلۡكِتَٰبَ وَيَزۡدَادَ ٱلَّذِينَ ءَامَنُوٓاْ إِيمَٰنٗا وَلَا يَرۡتَابَ ٱلَّذِينَ أُوتُواْ ٱلۡكِتَٰبَ وَٱلۡمُؤۡمِنُونَ وَلِيَقُولَ ٱلَّذِينَ فِي قُلُوبِهِم مَّرَضٞ وَٱلۡكَٰفِرُونَ مَاذَآ أَرَادَ ٱللَّهُ بِهَٰذَا مَثَلٗاۚ كَذَٰلِكَ يُضِلُّ ٱللَّهُ مَن يَشَآءُ وَيَهۡدِي مَن يَشَآءُۚ وَمَا يَعۡلَمُ جُنُودَ رَبِّكَ إِلَّا هُوَۚ وَمَا هِيَ إِلَّا ذِكۡرَىٰ لِلۡبَشَرِ

ನಾವು ನರಕದ ಕಾವಲುಗಾರರಾಗಿ ಕೇವಲ ದೇವದೂತರುಗಳನ್ನು ಮಾತ್ರ ನಿಶ್ಚಯಿಸಿದ್ದೇವೆ. ನಾವು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳಿಗೆ ಒಂದು ಪರೀಕ್ಷೆಯಾಗಿ ಮಾಡಿದ್ದೇವೆ.[1] ಇದೇಕೆಂದರೆ, ಗ್ರಂಥ ನೀಡಲಾದವರಿಗೆ ದೃಢವಿಶ್ವಾಸ ಉಂಟಾಗಲೆಂದು[2] ಮತ್ತು ಸತ್ಯವಿಶ್ವಾಸಿಗಳ ವಿಶ್ವಾಸವು ಇನ್ನಷ್ಟು ಹೆಚ್ಚಾಗಲೆಂದು. ಅದೇ ರೀತಿ ಗ್ರಂಥ ನೀಡಲಾದವರು ಹಾಗೂ ಸತ್ಯವಿಶ್ವಾಸಿಗಳು ಸಂಶಯ ಪಡದಿರಲೆಂದು ಮತ್ತು ಹೃದಯದಲ್ಲಿ ರೋಗವಿರುವವರು ಹಾಗೂ ಸತ್ಯನಿಷೇಧಿಗಳು, “ಈ ವಿವರಣೆಯಿಂದ ಅಲ್ಲಾಹು ಉದ್ದೇಶಿಸುವುದೇನು?” ಎಂದು ಕೇಳಲೆಂದು. ಈ ರೀತಿ ಅಲ್ಲಾಹು ಅವನು ಇಚ್ಛಿಸಿದವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸಿದವರಿಗೆ ಸನ್ಮಾರ್ಗ ತೋರಿಸುತ್ತಾನೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಸೈನ್ಯವನ್ನು ಅವನ ಹೊರತು ಯಾರೂ ತಿಳಿದಿಲ್ಲ. ಅದು (ನರಕ) ಮನುಷ್ಯರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.

[1] ನರಕದ ಕಾವಲುಗಾರರ ಸಂಖ್ಯೆ 19 ಎಂಬ ವಚನ ಅವತೀರ್ಣವಾದಾಗ, ಸತ್ಯನಿಷೇಧಿಗಳ ಮುಖಂಡ ಅಬೂಜಹಲ್ ತನ್ನ ಜನರನ್ನು ಕರೆದು ವ್ಯಂಗ್ಯವಾಗಿ ಹೇಳಿದ: ನಿಮ್ಮಲ್ಲಿ ಪ್ರತಿ ಹತ್ತು ಜನರಿಗೆ ಒಬ್ಬೊಬ್ಬ ದೇವದೂತನನ್ನು ಸೋಲಿಸಲು ಸಾಧ್ಯವಿಲ್ಲವೇ? ಆಗ ಈ ವಚನವು ಅವತೀರ್ಣವಾಯಿತು. [2] ಈ ವಿಷಯವು ತೌರಾತ್ ಮತ್ತು ಇಂಜೀಲ್‌ನಲ್ಲಿ ಕೂಡ ಇರುವುದರಿಂದ ಪ್ರವಾದಿಯವರು (ಅವರ ಮೇಲೆ ಅಲ್ಲಾಹನ ಕೃಪೆ ಮತ್ತು ಶಾಂತಿಯಿರಲಿ) ಹೇಳಿದ್ದು ಸತ್ಯವೆಂದು ಗ್ರಂಥದವರಿಗೆ ದೃಢವಿಶ್ವಾಸ ಉಂಟಾಗಲಿದೆ.
ನಾವು ನರಕದ ಕಾವಲುಗಾರರಾಗಿ ಕೇವಲ ದೇವದೂತರುಗಳನ್ನು ಮಾತ್ರ ನಿಶ್ಚಯಿಸಿದ್ದೇವೆ. ನಾವು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳಿಗೆ ಒಂದು ಪರೀಕ್ಷೆಯಾಗಿ ಮಾಡಿದ್ದೇವೆ.[1] ಇದೇಕೆಂದರೆ, ಗ್ರಂಥ ನೀಡಲಾದವರಿಗೆ ದೃಢವಿಶ್ವಾಸ ಉಂಟಾಗಲೆಂದು[2] ಮತ್ತು ಸತ್ಯವಿಶ್ವಾಸಿಗಳ ವಿಶ್ವಾಸವು ಇನ್ನಷ್ಟು ಹೆಚ್ಚಾಗಲೆಂದು. ಅದೇ ರೀತಿ ಗ್ರಂಥ ನೀಡಲಾದವರು ಹಾಗೂ ಸತ್ಯವಿಶ್ವಾಸಿಗಳು ಸಂಶಯ ಪಡದಿರಲೆಂದು ಮತ್ತು ಹೃದಯದಲ್ಲಿ ರೋಗವಿರುವವರು ಹಾಗೂ ಸತ್ಯನಿಷೇಧಿಗಳು, “ಈ ವಿವರಣೆಯಿಂದ ಅಲ್ಲಾಹು ಉದ್ದೇಶಿಸುವುದೇನು?” ಎಂದು ಕೇಳಲೆಂದು. ಈ ರೀತಿ ಅಲ್ಲಾಹು ಅವನು ಇಚ್ಛಿಸಿದವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸಿದವರಿಗೆ ಸನ್ಮಾರ್ಗ ತೋರಿಸುತ್ತಾನೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಸೈನ್ಯವನ್ನು ಅವನ ಹೊರತು ಯಾರೂ ತಿಳಿದಿಲ್ಲ. ಅದು (ನರಕ) ಮನುಷ್ಯರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.

كَلَّا وَٱلۡقَمَرِ

ಇಲ್ಲ; ಚಂದ್ರನ ಮೇಲಾಣೆ!

ಇಲ್ಲ; ಚಂದ್ರನ ಮೇಲಾಣೆ!

وَٱلَّيۡلِ إِذۡ أَدۡبَرَ

ರಾತ್ರಿಯ ಮೇಲಾಣೆ! ಅದು ಹಿಂದಕ್ಕೆ ಸರಿಯುವಾಗ.

ರಾತ್ರಿಯ ಮೇಲಾಣೆ! ಅದು ಹಿಂದಕ್ಕೆ ಸರಿಯುವಾಗ.

وَٱلصُّبۡحِ إِذَآ أَسۡفَرَ

ಬೆಳಗ್ಗಿನ ಮೇಲಾಣೆ! ಅದು ಬೆಳಗುವಾಗ.

ಬೆಳಗ್ಗಿನ ಮೇಲಾಣೆ! ಅದು ಬೆಳಗುವಾಗ.

إِنَّهَا لَإِحۡدَى ٱلۡكُبَرِ

ನಿಶ್ಚಯವಾಗಿಯೂ ಅದು (ನರಕ) ಮಹಾ ವಿಷಯಗಳಲ್ಲಿ ಒಂದಾಗಿದೆ.

ನಿಶ್ಚಯವಾಗಿಯೂ ಅದು (ನರಕ) ಮಹಾ ವಿಷಯಗಳಲ್ಲಿ ಒಂದಾಗಿದೆ.

نَذِيرٗا لِّلۡبَشَرِ

ಮನುಷ್ಯರಿಗೆ ಒಂದು ಮುನ್ನೆಚ್ಚರಿಕೆಯಾಗಿದೆ.

ಮನುಷ್ಯರಿಗೆ ಒಂದು ಮುನ್ನೆಚ್ಚರಿಕೆಯಾಗಿದೆ.

لِمَن شَآءَ مِنكُمۡ أَن يَتَقَدَّمَ أَوۡ يَتَأَخَّرَ

ಅಂದರೆ ನಿಮ್ಮಲ್ಲಿ ಮುಂದಕ್ಕೆ ಬರಲು ಅಥವಾ ಹಿಂದೆಯೇ ಉಳಿಯಲು ಇಚ್ಛಿಸುವವರಿಗೆ.

ಅಂದರೆ ನಿಮ್ಮಲ್ಲಿ ಮುಂದಕ್ಕೆ ಬರಲು ಅಥವಾ ಹಿಂದೆಯೇ ಉಳಿಯಲು ಇಚ್ಛಿಸುವವರಿಗೆ.

كُلُّ نَفۡسِۭ بِمَا كَسَبَتۡ رَهِينَةٌ

ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳಿಗೆ ಅಡಮಾನವಾಗಿದ್ದಾನೆ.[1]

[1] ಅಂದರೆ ಒಂದೋ ಅವನ ಕರ್ಮಗಳು ಅವನನ್ನು ಸ್ವರ್ಗಕ್ಕೆ ಸೇರಿಸುತ್ತವೆ ಅಥವಾ ಅವನ ಕರ್ಮಗಳು ಅವನನ್ನು ನರಕಕ್ಕೆ ಸೇರಿಸುತ್ತವೆ.
ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳಿಗೆ ಅಡಮಾನವಾಗಿದ್ದಾನೆ.[1]

إِلَّآ أَصۡحَٰبَ ٱلۡيَمِينِ

ಬಲಭಾಗದ ಜನರ ಹೊರತು.

ಬಲಭಾಗದ ಜನರ ಹೊರತು.

فِي جَنَّٰتٖ يَتَسَآءَلُونَ

ಅವರು ಸ್ವರ್ಗೋದ್ಯಾನಗಳಲ್ಲಿ (ಕುಳಿತು) ಪರಸ್ಪರ ವಿಚಾರಿಸುವರು.

ಅವರು ಸ್ವರ್ಗೋದ್ಯಾನಗಳಲ್ಲಿ (ಕುಳಿತು) ಪರಸ್ಪರ ವಿಚಾರಿಸುವರು.

عَنِ ٱلۡمُجۡرِمِينَ

ಅಪರಾಧಿಗಳ ಕುರಿತು.

ಅಪರಾಧಿಗಳ ಕುರಿತು.

مَا سَلَكَكُمۡ فِي سَقَرَ

ನಿಮ್ಮನ್ನು ನರಕದಲ್ಲಿ ಬೀಳಿಸಿದ್ದೇನು?

ನಿಮ್ಮನ್ನು ನರಕದಲ್ಲಿ ಬೀಳಿಸಿದ್ದೇನು?

قَالُواْ لَمۡ نَكُ مِنَ ٱلۡمُصَلِّينَ

ಅವರು ಹೇಳುವರು: “ನಾವು ನಮಾಝ್ ಮಾಡುವವರಾಗಿರಲಿಲ್ಲ.

ಅವರು ಹೇಳುವರು: “ನಾವು ನಮಾಝ್ ಮಾಡುವವರಾಗಿರಲಿಲ್ಲ.

وَلَمۡ نَكُ نُطۡعِمُ ٱلۡمِسۡكِينَ

ನಾವು ಬಡವರಿಗೆ ಆಹಾರ ನೀಡುತ್ತಿರಲಿಲ್ಲ.

ನಾವು ಬಡವರಿಗೆ ಆಹಾರ ನೀಡುತ್ತಿರಲಿಲ್ಲ.

وَكُنَّا نَخُوضُ مَعَ ٱلۡخَآئِضِينَ

ನಾವು ಅನಗತ್ಯ ಮಾತುಕತೆ ನಡೆಸುವವರ (ಸತ್ಯನಿಷೇಧಿಗಳ) ಜೊತೆಗೆ ಅನಗತ್ಯ ಮಾತುಗಳಲ್ಲಿ ತಲ್ಲೀನರಾಗಿದ್ದೆವು.

ನಾವು ಅನಗತ್ಯ ಮಾತುಕತೆ ನಡೆಸುವವರ (ಸತ್ಯನಿಷೇಧಿಗಳ) ಜೊತೆಗೆ ಅನಗತ್ಯ ಮಾತುಗಳಲ್ಲಿ ತಲ್ಲೀನರಾಗಿದ್ದೆವು.

وَكُنَّا نُكَذِّبُ بِيَوۡمِ ٱلدِّينِ

ನಾವು ಪ್ರತಿಫಲದ ದಿನವನ್ನು ನಿಷೇಧಿಸುತ್ತಿದ್ದೆವು.

ನಾವು ಪ್ರತಿಫಲದ ದಿನವನ್ನು ನಿಷೇಧಿಸುತ್ತಿದ್ದೆವು.

حَتَّىٰٓ أَتَىٰنَا ٱلۡيَقِينُ

ಎಲ್ಲಿಯವರೆಗೆಂದರೆ ನಮಗೆ ಸಾವು ಬರುವ ತನಕ.”

ಎಲ್ಲಿಯವರೆಗೆಂದರೆ ನಮಗೆ ಸಾವು ಬರುವ ತನಕ.”

فَمَا تَنفَعُهُمۡ شَفَٰعَةُ ٱلشَّٰفِعِينَ

ಅವರಿಗೆ ಶಿಫಾರಸುಗಾರರ ಶಿಫಾರಸು ಪ್ರಯೋಜನಪಡುವುದಿಲ್ಲ.

ಅವರಿಗೆ ಶಿಫಾರಸುಗಾರರ ಶಿಫಾರಸು ಪ್ರಯೋಜನಪಡುವುದಿಲ್ಲ.

فَمَا لَهُمۡ عَنِ ٱلتَّذۡكِرَةِ مُعۡرِضِينَ

ಅವರಿಗೇನಾಗಿದೆ? ಅವರೇಕೆ ಉಪದೇಶದಿಂದ ವಿಮುಖರಾಗುತ್ತಿದ್ದಾರೆ?

ಅವರಿಗೇನಾಗಿದೆ? ಅವರೇಕೆ ಉಪದೇಶದಿಂದ ವಿಮುಖರಾಗುತ್ತಿದ್ದಾರೆ?

كَأَنَّهُمۡ حُمُرٞ مُّسۡتَنفِرَةٞ

ಅವರು ಗಾಬರಿಗೊಂಡ ಕತ್ತೆಗಳೋ ಎಂಬಂತೆ.

ಅವರು ಗಾಬರಿಗೊಂಡ ಕತ್ತೆಗಳೋ ಎಂಬಂತೆ.

فَرَّتۡ مِن قَسۡوَرَةِۭ

ಸಿಂಹವನ್ನು ಕಂಡು ಪಲಾಯನ ಮಾಡಿದ.

ಸಿಂಹವನ್ನು ಕಂಡು ಪಲಾಯನ ಮಾಡಿದ.

بَلۡ يُرِيدُ كُلُّ ٱمۡرِيٕٖ مِّنۡهُمۡ أَن يُؤۡتَىٰ صُحُفٗا مُّنَشَّرَةٗ

ಅಲ್ಲ, ವಾಸ್ತವವಾಗಿ ಅವರಲ್ಲಿ ಪ್ರತಿಯೊಬ್ಬನೂ ತನಗೆ ತೆರೆದಿಟ್ಟ ಧರ್ಮಗ್ರಂಥಗಳು ಸಿಗಬೇಕೆಂದು ಬಯಸುತ್ತಾನೆ.

ಅಲ್ಲ, ವಾಸ್ತವವಾಗಿ ಅವರಲ್ಲಿ ಪ್ರತಿಯೊಬ್ಬನೂ ತನಗೆ ತೆರೆದಿಟ್ಟ ಧರ್ಮಗ್ರಂಥಗಳು ಸಿಗಬೇಕೆಂದು ಬಯಸುತ್ತಾನೆ.

كَلَّاۖ بَل لَّا يَخَافُونَ ٱلۡأٓخِرَةَ

ಇಲ್ಲ; ವಾಸ್ತವವಾಗಿ ಅವರು ಪರಲೋಕವನ್ನು ಭಯಪಡುವುದಿಲ್ಲ.

ಇಲ್ಲ; ವಾಸ್ತವವಾಗಿ ಅವರು ಪರಲೋಕವನ್ನು ಭಯಪಡುವುದಿಲ್ಲ.

كَلَّآ إِنَّهُۥ تَذۡكِرَةٞ

ಖಂಡಿತ ಇಲ್ಲ. ನಿಶ್ಚಯವಾಗಿಯೂ ಇದು (ಕುರ್‌ಆನ್) ಉಪದೇಶವಾಗಿದೆ.

ಖಂಡಿತ ಇಲ್ಲ. ನಿಶ್ಚಯವಾಗಿಯೂ ಇದು (ಕುರ್‌ಆನ್) ಉಪದೇಶವಾಗಿದೆ.

فَمَن شَآءَ ذَكَرَهُۥ

ಇಷ್ಟವಿರುವವರು ಅದರಿಂದ ಉಪದೇಶವನ್ನು ಪಡೆದುಕೊಳ್ಳಲಿ.

ಇಷ್ಟವಿರುವವರು ಅದರಿಂದ ಉಪದೇಶವನ್ನು ಪಡೆದುಕೊಳ್ಳಲಿ.

وَمَا يَذۡكُرُونَ إِلَّآ أَن يَشَآءَ ٱللَّهُۚ هُوَ أَهۡلُ ٱلتَّقۡوَىٰ وَأَهۡلُ ٱلۡمَغۡفِرَةِ

ಆದರೆ ಅಲ್ಲಾಹು ಇಚ್ಛಿಸಿದ ಹೊರತು ಅವರು ಅದರಿಂದ ಉಪದೇಶ ಪಡೆಯುವುದಿಲ್ಲ. ಅವನು ಭಯಪಡಲು ಅರ್ಹನಾಗಿದ್ದಾನೆ ಮತ್ತು ಕ್ಷಮಿಸಲು ಅರ್ಹನಾಗಿದ್ದಾನೆ.

ಆದರೆ ಅಲ್ಲಾಹು ಇಚ್ಛಿಸಿದ ಹೊರತು ಅವರು ಅದರಿಂದ ಉಪದೇಶ ಪಡೆಯುವುದಿಲ್ಲ. ಅವನು ಭಯಪಡಲು ಅರ್ಹನಾಗಿದ್ದಾನೆ ಮತ್ತು ಕ್ಷಮಿಸಲು ಅರ್ಹನಾಗಿದ್ದಾನೆ.
Footer Include