کنادي ژباړه - حمزه بتور

د قرآن کریم د ماناګانو ژباړه

محمد حمزه بتور ژباړلی دی. د رواد الترجمة مرکز تر څارنې لاندې انکشاف ورکړل شوی.

QR Code https://quran.islamcontent.com/ps/kannada_hamza

لَمۡ يَكُنِ ٱلَّذِينَ كَفَرُواْ مِنۡ أَهۡلِ ٱلۡكِتَٰبِ وَٱلۡمُشۡرِكِينَ مُنفَكِّينَ حَتَّىٰ تَأۡتِيَهُمُ ٱلۡبَيِّنَةُ

ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳು ಮತ್ತು ಬಹುದೇವವಿಶ್ವಾಸಿಗಳು ಸ್ಪಷ್ಟ ಸಾಕ್ಷ್ಯವು ಅವರ ಬಳಿಗೆ ಬರುವ ತನಕ (ಸತ್ಯನಿಷೇಧದಿಂದ) ದೂರವಾಗುವವರಾಗಿರಲಿಲ್ಲ.

ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳು ಮತ್ತು ಬಹುದೇವವಿಶ್ವಾಸಿಗಳು ಸ್ಪಷ್ಟ ಸಾಕ್ಷ್ಯವು ಅವರ ಬಳಿಗೆ ಬರುವ ತನಕ (ಸತ್ಯನಿಷೇಧದಿಂದ) ದೂರವಾಗುವವರಾಗಿರಲಿಲ್ಲ.

رَسُولٞ مِّنَ ٱللَّهِ يَتۡلُواْ صُحُفٗا مُّطَهَّرَةٗ

(ಆ ಸಾಕ್ಷ್ಯವು) ಪರಿಶುದ್ಧ ಗ್ರಂಥಗಳನ್ನು ಓದಿಕೊಡುವ ಅಲ್ಲಾಹನ ಕಡೆಯ ಸಂದೇಶವಾಹಕರಾಗಿದ್ದಾರೆ.

(ಆ ಸಾಕ್ಷ್ಯವು) ಪರಿಶುದ್ಧ ಗ್ರಂಥಗಳನ್ನು ಓದಿಕೊಡುವ ಅಲ್ಲಾಹನ ಕಡೆಯ ಸಂದೇಶವಾಹಕರಾಗಿದ್ದಾರೆ.

فِيهَا كُتُبٞ قَيِّمَةٞ

ಅದರಲ್ಲಿ (ಆ ಗ್ರಂಥದಲ್ಲಿ) ಸರಿಯಾದ ನಿಯಮಗಳಿವೆ.

ಅದರಲ್ಲಿ (ಆ ಗ್ರಂಥದಲ್ಲಿ) ಸರಿಯಾದ ನಿಯಮಗಳಿವೆ.

وَمَا تَفَرَّقَ ٱلَّذِينَ أُوتُواْ ٱلۡكِتَٰبَ إِلَّا مِنۢ بَعۡدِ مَا جَآءَتۡهُمُ ٱلۡبَيِّنَةُ

ಗ್ರಂಥ ನೀಡಲಾದವರು ಅವರ ಬಳಿಗೆ ಸ್ಪಷ್ಟ ಸಾಕ್ಷ್ಯವು ಬಂದ ಬಳಿಕವೇ (ಭಿನ್ನಮತ ತಳೆದು) ವಿಭಿನ್ನ ಪಂಗಡಗಳಾದರು.

ಗ್ರಂಥ ನೀಡಲಾದವರು ಅವರ ಬಳಿಗೆ ಸ್ಪಷ್ಟ ಸಾಕ್ಷ್ಯವು ಬಂದ ಬಳಿಕವೇ (ಭಿನ್ನಮತ ತಳೆದು) ವಿಭಿನ್ನ ಪಂಗಡಗಳಾದರು.

وَمَآ أُمِرُوٓاْ إِلَّا لِيَعۡبُدُواْ ٱللَّهَ مُخۡلِصِينَ لَهُ ٱلدِّينَ حُنَفَآءَ وَيُقِيمُواْ ٱلصَّلَوٰةَ وَيُؤۡتُواْ ٱلزَّكَوٰةَۚ وَذَٰلِكَ دِينُ ٱلۡقَيِّمَةِ

ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕವಾಗಿಸಿ ಏಕನಿಷ್ಠರಾಗಿ ಅವನನ್ನು ಮಾತ್ರ ಆರಾಧಿಸಿರಿ, ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ ಎಂದಲ್ಲದೆ ಬೇರೇನನ್ನೂ ಅವರಿಗೆ ಆದೇಶಿಸಲಾಗಿರಲಿಲ್ಲ. ಅದೇ ನೇರವಾದ ಧರ್ಮ.

ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕವಾಗಿಸಿ ಏಕನಿಷ್ಠರಾಗಿ ಅವನನ್ನು ಮಾತ್ರ ಆರಾಧಿಸಿರಿ, ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ ಎಂದಲ್ಲದೆ ಬೇರೇನನ್ನೂ ಅವರಿಗೆ ಆದೇಶಿಸಲಾಗಿರಲಿಲ್ಲ. ಅದೇ ನೇರವಾದ ಧರ್ಮ.

إِنَّ ٱلَّذِينَ كَفَرُواْ مِنۡ أَهۡلِ ٱلۡكِتَٰبِ وَٱلۡمُشۡرِكِينَ فِي نَارِ جَهَنَّمَ خَٰلِدِينَ فِيهَآۚ أُوْلَٰٓئِكَ هُمۡ شَرُّ ٱلۡبَرِيَّةِ

ನಿಶ್ಚಯವಾಗಿಯೂ ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳು ಮತ್ತು ಬಹುದೇವವಿಶ್ವಾಸಿಗಳು ನರಕವಾಸಿಗಳಾಗಿದ್ದಾರೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅವರು ಸೃಷ್ಟಿಗಳಲ್ಲೇ ಅತಿನಿಕೃಷ್ಟರು.

ನಿಶ್ಚಯವಾಗಿಯೂ ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳು ಮತ್ತು ಬಹುದೇವವಿಶ್ವಾಸಿಗಳು ನರಕವಾಸಿಗಳಾಗಿದ್ದಾರೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅವರು ಸೃಷ್ಟಿಗಳಲ್ಲೇ ಅತಿನಿಕೃಷ್ಟರು.

إِنَّ ٱلَّذِينَ ءَامَنُواْ وَعَمِلُواْ ٱلصَّٰلِحَٰتِ أُوْلَٰٓئِكَ هُمۡ خَيۡرُ ٱلۡبَرِيَّةِ

ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರು ಸೃಷ್ಟಿಗಳಲ್ಲೇ ಅತಿಶ್ರೇಷ್ಠರು.

ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರು ಸೃಷ್ಟಿಗಳಲ್ಲೇ ಅತಿಶ್ರೇಷ್ಠರು.

جَزَآؤُهُمۡ عِندَ رَبِّهِمۡ جَنَّٰتُ عَدۡنٖ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَآ أَبَدٗاۖ رَّضِيَ ٱللَّهُ عَنۡهُمۡ وَرَضُواْ عَنۡهُۚ ذَٰلِكَ لِمَنۡ خَشِيَ رَبَّهُۥ

ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿಯಿರುವ ಪ್ರತಿಫಲವು ಶಾಶ್ವತವಾಸದ ಸ್ವರ್ಗೋದ್ಯಾನಗಳಾಗಿವೆ. ಅವುಗಳ ತಳಭಾಗದಿಂದ ನದಿಗಳು ಹರಿಯುತ್ತವೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಇದು ತನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವನಿಗೆ ಇರುವುದಾಗಿದೆ.

ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿಯಿರುವ ಪ್ರತಿಫಲವು ಶಾಶ್ವತವಾಸದ ಸ್ವರ್ಗೋದ್ಯಾನಗಳಾಗಿವೆ. ಅವುಗಳ ತಳಭಾಗದಿಂದ ನದಿಗಳು ಹರಿಯುತ್ತವೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಇದು ತನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವನಿಗೆ ಇರುವುದಾಗಿದೆ.