Salin sa Wikang Kanarese ni Hamza Batur
Pagsasalin ng mga Kahulugan ng Marangal na Qur'an
Isinalin ito ni Muhammad Hamza Batur. Binuo ito sa ilalim ng pangangasiwa ng Sentro ng Rowad sa Pagsasalin.
ٱلۡحَآقَّةُ
ಸತ್ಯವಾಗಿ ಸಂಭವಿಸುವಂತದ್ದು.
مَا ٱلۡحَآقَّةُ
ಸತ್ಯವಾಗಿ ಸಂಭವಿಸುವಂತದ್ದು ಏನು?
وَمَآ أَدۡرَىٰكَ مَا ٱلۡحَآقَّةُ
ಸತ್ಯವಾಗಿ ಸಂಭವಿಸುವಂತದ್ದು ಏನೆಂದು ನಿಮಗೇನು ಗೊತ್ತು?
كَذَّبَتۡ ثَمُودُ وَعَادُۢ بِٱلۡقَارِعَةِ
ಸಮೂದ್ ಮತ್ತು ಆದ್ ಗೋತ್ರದವರು ಆ ಭಯಾನಕ ಘಟನೆಯನ್ನು (ಪುನರುತ್ಥಾನವನ್ನು) ನಿಷೇಧಿಸಿದರು.
فَأَمَّا ثَمُودُ فَأُهۡلِكُواْ بِٱلطَّاغِيَةِ
ಸಮೂದ್ ಗೋತ್ರದವರನ್ನು ಮಿತಿಮೀರಿದ (ಭಯಾನಕ ಸದ್ದಿನ) ಮೂಲಕ ನಾಶ ಮಾಡಲಾಯಿತು.
وَأَمَّا عَادٞ فَأُهۡلِكُواْ بِرِيحٖ صَرۡصَرٍ عَاتِيَةٖ
ಆದ್ ಗೋತ್ರದವರನ್ನು ಅತಿಶೀತ ಉಗ್ರ ಗಾಳಿಯ ಮೂಲಕ ನಾಶ ಮಾಡಲಾಯಿತು.
سَخَّرَهَا عَلَيۡهِمۡ سَبۡعَ لَيَالٖ وَثَمَٰنِيَةَ أَيَّامٍ حُسُومٗاۖ فَتَرَى ٱلۡقَوۡمَ فِيهَا صَرۡعَىٰ كَأَنَّهُمۡ أَعۡجَازُ نَخۡلٍ خَاوِيَةٖ
ಅಲ್ಲಾಹು ಅದನ್ನು ಅವರ ಮೇಲೆ ಏಳು ರಾತ್ರಿಗಳು ಮತ್ತು ಎಂಟು ದಿನಗಳ ಕಾಲ ನಿರಂತರವಾಗಿ ಹೇರಿದನು; ನಂತರ ಆ ಜನರು—ಕುಸಿದು ಬಿದ್ದ ಖರ್ಜೂರ ಮರಗಳ ಕಾಂಡಗಳೋ ಎಂಬಂತೆ—ಬೋರಲು ಬಿದ್ದು ಸತ್ತಿರುವುದು ನಿಮಗೆ ಕಾಣಬಹುದು.
فَهَلۡ تَرَىٰ لَهُم مِّنۢ بَاقِيَةٖ
ಅವರಲ್ಲಿ ಯಾರಾದರೂ ಬಾಕಿಯುಳಿದದ್ದನ್ನು ನೀವು ಕಂಡಿದ್ದೀರಾ?
وَجَآءَ فِرۡعَوۡنُ وَمَن قَبۡلَهُۥ وَٱلۡمُؤۡتَفِكَٰتُ بِٱلۡخَاطِئَةِ
ಫರೋಹ, ಅವನಿಗಿಂತ ಮೊದಲಿನವರು ಮತ್ತು ಬುಡಮೇಲುಗೊಳಿಸಲಾದ ಊರಿನವರು ಪಾಪಗಳೊಂದಿಗೆ ಬಂದರು.
فَعَصَوۡاْ رَسُولَ رَبِّهِمۡ فَأَخَذَهُمۡ أَخۡذَةٗ رَّابِيَةً
ಅವರು ಅವರ ಪರಿಪಾಲಕನ (ಅಲ್ಲಾಹನ) ಸಂದೇಶವಾಹಕರಿಗೆ ಅವಿಧೇಯತೆ ತೋರಿದರು. ಆಗ ಅಲ್ಲಾಹು ಅವರನ್ನು ಕಠೋರವಾದ ಹಿಡಿತದಿಂದ ಹಿಡಿದನು.
إِنَّا لَمَّا طَغَا ٱلۡمَآءُ حَمَلۡنَٰكُمۡ فِي ٱلۡجَارِيَةِ
ನಿಶ್ಚಯವಾಗಿಯೂ ನೀರು ಎಲ್ಲೆ ಮೀರಿ ಹರಿದಾಗ ನಾವು ನಿಮ್ಮನ್ನು ನಾವೆಯಲ್ಲಿ ಹೊತ್ತೊಯ್ದೆವು.
لِنَجۡعَلَهَا لَكُمۡ تَذۡكِرَةٗ وَتَعِيَهَآ أُذُنٞ وَٰعِيَةٞ
ನಾವು ಅದನ್ನು ನಿಮಗೆ ಒಂದು ನೆನಪಾಗಿ ಮಾಡಲು ಮತ್ತು ಜಾಗೃತ ಕಿವಿಯು ಅದರ ಬಗ್ಗೆ ಜಾಗೃತವಾಗಿರಲು.
فَإِذَا نُفِخَ فِي ٱلصُّورِ نَفۡخَةٞ وَٰحِدَةٞ
ಕಹಳೆಯಲ್ಲಿ ಒಂದು ಊದುವಿಕೆಯನ್ನು ಊದಲಾದಾಗ.
وَحُمِلَتِ ٱلۡأَرۡضُ وَٱلۡجِبَالُ فَدُكَّتَا دَكَّةٗ وَٰحِدَةٗ
ಭೂಮಿ ಮತ್ತು ಪರ್ವತಗಳನ್ನು ಎತ್ತಲಾಗುವುದು ಮತ್ತು ಅವೆರಡನ್ನು ಒಂದೇ ಹೊಡೆತಕ್ಕೆ ಪುಡಿಪುಡಿ ಮಾಡಲಾಗುವುದು.
فَيَوۡمَئِذٖ وَقَعَتِ ٱلۡوَاقِعَةُ
ಅಂದು ಆ ಸಂಭವಿಸುವಿಕೆಯು (ಪುನರುತ್ಥಾನವು) ಸಂಭವಿಸುವುದು.
وَٱنشَقَّتِ ٱلسَّمَآءُ فَهِيَ يَوۡمَئِذٖ وَاهِيَةٞ
ಆಕಾಶವು ಇಬ್ಭಾಗವಾಗುವುದು ಮತ್ತು ಅಂದು ಅದು ಬಲಹೀನವಾಗಿರುವುದು.
وَٱلۡمَلَكُ عَلَىٰٓ أَرۡجَآئِهَاۚ وَيَحۡمِلُ عَرۡشَ رَبِّكَ فَوۡقَهُمۡ يَوۡمَئِذٖ ثَمَٰنِيَةٞ
ದೇವದೂತರುಗಳು ಅದರ ತುದಿಗಳಲ್ಲಿರುವರು. ಅಂದು ಅವರ ಮೇಲ್ಭಾಗದಲ್ಲಿ ಎಂಟು (ದೇವದೂತರು) ನಿಮ್ಮ ಪರಿಪಾಲಕನ (ಅಲ್ಲಾಹನ) ಸಿಂಹಾಸನವನ್ನು ಎತ್ತಿಕೊಂಡಿರುವರು.
يَوۡمَئِذٖ تُعۡرَضُونَ لَا تَخۡفَىٰ مِنكُمۡ خَافِيَةٞ
ಅಂದು ನಿಮ್ಮೆಲ್ಲರನ್ನೂ ಪ್ರದರ್ಶಿಸಲಾಗುವುದು. ನಿಮ್ಮ ಯಾವುದೇ ರಹಸ್ಯಗಳು ರಹಸ್ಯವಾಗಿರುವುದಿಲ್ಲ.
فَأَمَّا مَنۡ أُوتِيَ كِتَٰبَهُۥ بِيَمِينِهِۦ فَيَقُولُ هَآؤُمُ ٱقۡرَءُواْ كِتَٰبِيَهۡ
ಆದ್ದರಿಂದ ಯಾರಿಗೆ ಅವನ ಕರ್ಮಪುಸ್ತಕವನ್ನು ಬಲಗೈಯಲ್ಲಿ ನೀಡಲಾಗುತ್ತದೋ ಅವನು ಹೇಳುವನು: “ಇಗೋ! ನನ್ನ ಕರ್ಮಪುಸ್ತಕವನ್ನು ಓದಿರಿ!
إِنِّي ظَنَنتُ أَنِّي مُلَٰقٍ حِسَابِيَهۡ
ನಿಶ್ಚಯವಾಗಿಯೂ, ನಾನು ನನ್ನ ವಿಚಾರಣೆಯನ್ನು ಎದುರಿಸಬೇಕಾಗಿದೆಯೆಂದು ನನಗೆ ಪೂರ್ಣ ನಂಬಿಕೆಯಿತ್ತು.”
فَهُوَ فِي عِيشَةٖ رَّاضِيَةٖ
ಆದ್ದರಿಂದ ಅವನು ಸಂತೃಪ್ತ ಜೀವನದಲ್ಲಿರುವನು.
فِي جَنَّةٍ عَالِيَةٖ
ಉನ್ನತ ಸ್ವರ್ಗದಲ್ಲಿ.
قُطُوفُهَا دَانِيَةٞ
ಅದರ ಹಣ್ಣುಗಳು ಬಾಗಿಕೊಂಡಿರುವುವು.
كُلُواْ وَٱشۡرَبُواْ هَنِيٓـَٔۢا بِمَآ أَسۡلَفۡتُمۡ فِي ٱلۡأَيَّامِ ٱلۡخَالِيَةِ
(ಅವರೊಡನೆ ಹೇಳಲಾಗುವುದು): “ಕಳೆದುಹೋದ ದಿನಗಳಲ್ಲಿ ನೀವು ಮುಂದಕ್ಕೆ ಕಳುಹಿಸಿದ ಸತ್ಕರ್ಮಗಳ ಕಾರಣದಿಂದ ಸಂತೋಷವಾಗಿ ತಿನ್ನಿರಿ ಮತ್ತು ಕುಡಿಯಿರಿ.”
وَأَمَّا مَنۡ أُوتِيَ كِتَٰبَهُۥ بِشِمَالِهِۦ فَيَقُولُ يَٰلَيۡتَنِي لَمۡ أُوتَ كِتَٰبِيَهۡ
ಆದರೆ ಯಾರಿಗೆ ಅವನ ಕರ್ಮಪುಸ್ತಕವನ್ನು ಎಡಗೈಯಲ್ಲಿ ನೀಡಲಾಗುತ್ತದೋ ಅವನು ಹೇಳುವನು: “ನನಗೆ ನನ್ನ ಕರ್ಮಪುಸ್ತಕವನ್ನು ನೀಡದಿರುತ್ತಿದ್ದರೆ ಎಷ್ಟು ಚೆನ್ನಾಗಿತ್ತು!
وَلَمۡ أَدۡرِ مَا حِسَابِيَهۡ
ನನ್ನ ವಿಚಾರಣೆ ಏನೆಂದು ನನಗೆ ತಿಳಿಯದಿರುತ್ತಿದ್ದರೆ (ಎಷ್ಟು ಚೆನ್ನಾಗಿತ್ತು)!
يَٰلَيۡتَهَا كَانَتِ ٱلۡقَاضِيَةَ
ಮರಣದೊಂದಿಗೆ ಎಲ್ಲವೂ ಕೊನೆಗೊಳ್ಳುತ್ತಿದ್ದರೆ ಎಷ್ಟು ಚೆನ್ನಾಗಿತ್ತು!
مَآ أَغۡنَىٰ عَنِّي مَالِيَهۡۜ
ನನಗೆ ನನ್ನ ಆಸ್ತಿ ಪ್ರಯೋಜನ ನೀಡಲಿಲ್ಲ.
هَلَكَ عَنِّي سُلۡطَٰنِيَهۡ
ನನ್ನ ಅಧಿಕಾರವು ನನ್ನಿಂದ ಹೊರಟುಹೋಗಿದೆ.”
خُذُوهُ فَغُلُّوهُ
(ಆಗ ಹೀಗೆ ಆಜ್ಞಾಪಿಸಲಾಗುವುದು): “ಅವನನ್ನು ಹಿಡಿಯಿರಿ; ಮತ್ತು ಅವನಿಗೆ ಸಂಕೋಲೆಯನ್ನು ತೊಡಿಸಿರಿ.
ثُمَّ ٱلۡجَحِيمَ صَلُّوهُ
ನಂತರ ಅವನನ್ನು ನರಕದಲ್ಲಿ ಹಾಕಿರಿ.
ثُمَّ فِي سِلۡسِلَةٖ ذَرۡعُهَا سَبۡعُونَ ذِرَاعٗا فَٱسۡلُكُوهُ
ನಂತರ ಎಪ್ಪತ್ತು ಮೊಳ ಅಳತೆಯಿರುವ ಸಂಕೋಲೆಯಲ್ಲಿ ಅವನನ್ನು ನುಸುಳಿಸಿರಿ.
إِنَّهُۥ كَانَ لَا يُؤۡمِنُ بِٱللَّهِ ٱلۡعَظِيمِ
ನಿಶ್ಚಯವಾಗಿಯೂ, ಅವನು ಪರಮೋಚ್ಛನಾದ ಅಲ್ಲಾಹನಲ್ಲಿ ವಿಶ್ವಾಸವಿಡುತ್ತಿರಲಿಲ್ಲ.
وَلَا يَحُضُّ عَلَىٰ طَعَامِ ٱلۡمِسۡكِينِ
ಅವನು ಬಡವರಿಗೆ ಅನ್ನ ನೀಡಲು ಪ್ರೇರೇಪಿಸುತ್ತಿರಲಿಲ್ಲ.
فَلَيۡسَ لَهُ ٱلۡيَوۡمَ هَٰهُنَا حَمِيمٞ
ಆದ್ದರಿಂದ ಇಂದು ಅವನಿಗೆ ಇಲ್ಲಿ ಯಾವುದೇ ಆತ್ಮೀಯ ಗೆಳೆಯನಿಲ್ಲ.
وَلَا طَعَامٌ إِلَّا مِنۡ غِسۡلِينٖ
ಕೀವಿನಿಂದಲೇ ಹೊರತು ಅವನಿಗೆ ಬೇರೆ ಆಹಾರವಿಲ್ಲ.
لَّا يَأۡكُلُهُۥٓ إِلَّا ٱلۡخَٰطِـُٔونَ
ಅದನ್ನು ಪಾಪಿಗಳ ಹೊರತಾಗಿ ಯಾರೂ ಸೇವಿಸುವುದಿಲ್ಲ.
فَلَآ أُقۡسِمُ بِمَا تُبۡصِرُونَ
ಆದ್ದರಿಂದ ನೀವು ನೋಡುತ್ತಿರುವುದರ ಮೇಲೆ ನಾನು ಆಣೆ ಮಾಡುತ್ತೇನೆ.
وَمَا لَا تُبۡصِرُونَ
ನೀವು ನೋಡದಿರುವವುಗಳ ಮೇಲೂ (ಆಣೆ ಮಾಡುತ್ತೇನೆ).
إِنَّهُۥ لَقَوۡلُ رَسُولٖ كَرِيمٖ
ನಿಶ್ಚಯವಾಗಿಯೂ ಇದು (ಕುರ್ಆನ್) ಒಬ್ಬ ಗಣ್ಯ ಸಂದೇಶವಾಹಕನ ವಚನವಾಗಿದೆ.
وَمَا هُوَ بِقَوۡلِ شَاعِرٖۚ قَلِيلٗا مَّا تُؤۡمِنُونَ
ಇದು ಯಾವುದೇ ಕವಿಯ ಮಾತುಗಳಲ್ಲ. ನೀವು ಸ್ವಲ್ಪವೇ ವಿಶ್ವಾಸವಿಡುತ್ತೀರಿ.
وَلَا بِقَوۡلِ كَاهِنٖۚ قَلِيلٗا مَّا تَذَكَّرُونَ
ಇದು ಜ್ಯೋತಿಷಿಯ ಮಾತುಗಳೂ ಅಲ್ಲ. ನೀವು ಸ್ವಲ್ಪವೇ ಉಪದೇಶ ಪಡೆಯುತ್ತೀರಿ.
تَنزِيلٞ مِّن رَّبِّ ٱلۡعَٰلَمِينَ
ಇದು ಸರ್ವಲೋಕಗಳ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಗ್ರಂಥವಾಗಿದೆ.
وَلَوۡ تَقَوَّلَ عَلَيۡنَا بَعۡضَ ٱلۡأَقَاوِيلِ
ಅವರು (ಪ್ರವಾದಿ) ನಮ್ಮ ಮೇಲೆ ಕೆಲವು (ಸುಳ್ಳು) ಮಾತುಗಳನ್ನು ಆರೋಪಿಸುತ್ತಿದ್ದರೆ,
لَأَخَذۡنَا مِنۡهُ بِٱلۡيَمِينِ
ನಾವು ಅವರನ್ನು ಬಲಗೈಯಿಂದ ಹಿಡಿಯುತ್ತಿದ್ದೆವು.
ثُمَّ لَقَطَعۡنَا مِنۡهُ ٱلۡوَتِينَ
ನಂತರ ನಾವು ಅವರ ಅಪಧಮನಿಯನ್ನು ಕತ್ತರಿಸುತ್ತಿದ್ದೆವು.
فَمَا مِنكُم مِّنۡ أَحَدٍ عَنۡهُ حَٰجِزِينَ
ಆಗ ಅವರನ್ನು (ನಮ್ಮಿಂದ) ತಡೆಯುವವರು ನಿಮ್ಮಲ್ಲಿ ಯಾರೂ ಇರಲಾರರು.
وَإِنَّهُۥ لَتَذۡكِرَةٞ لِّلۡمُتَّقِينَ
ನಿಶ್ಚಯವಾಗಿಯೂ ಇದು ದೇವಭಯವುಳ್ಳವರಿಗೆ ಒಂದು ಉಪದೇಶವಾಗಿದೆ.
وَإِنَّا لَنَعۡلَمُ أَنَّ مِنكُم مُّكَذِّبِينَ
ನಿಶ್ಚಯವಾಗಿಯೂ ನಿಮ್ಮಲ್ಲಿ ಇದನ್ನು ನಿಷೇಧಿಸುವವರಿದ್ದಾರೆಂದು ನಮಗೆ ಬಹಳ ಚೆನ್ನಾಗಿ ತಿಳಿದಿದೆ.
وَإِنَّهُۥ لَحَسۡرَةٌ عَلَى ٱلۡكَٰفِرِينَ
ನಿಶ್ಚಯವಾಗಿಯೂ ಅದು (ನಿಷೇಧಿಸುವುದು) ಸತ್ಯನಿಷೇಧಿಗಳ ವಿಷಾದಕ್ಕೆ ಕಾರಣವಾಗಲಿದೆ.
وَإِنَّهُۥ لَحَقُّ ٱلۡيَقِينِ
ನಿಶ್ಚಯವಾಗಿಯೂ ಅದು ಖಚಿತ ಸತ್ಯವಾಗಿದೆ.
فَسَبِّحۡ بِٱسۡمِ رَبِّكَ ٱلۡعَظِيمِ
ಆದ್ದರಿಂದ ನೀವು ಪರಮೋಚ್ಛನಾದ ನಿಮ್ಮ ಪರಿಪಾಲಕನ (ಅಲ್ಲಾಹನ) ಹೆಸರಿನಿಂದ ಅವನ ಪರಿಶುದ್ಧಿಯನ್ನು ಕೊಂಡಾಡಿರಿ.
share_via