Dịch thuật Kannada - Hamzah Batur
Dịch thuật ý nghĩa Kinh Qur'an
Người dịch Muhammad Hamzah Batur, được phát triển dưới sự giám sát của Trung tâm Dịch thuật Rowad.
يَٰٓأَيُّهَا ٱلۡمُدَّثِّرُ
ಓ ಹೊದಿಕೆಯನ್ನು ಹೊದ್ದುಕೊಂಡವರೇ![1]
قُمۡ فَأَنذِرۡ
ಎದ್ದೇಳಿರಿ ಮತ್ತು ಎಚ್ಚರಿಕೆ ನೀಡಿರಿ.
وَرَبَّكَ فَكَبِّرۡ
ನಿಮ್ಮ ಪರಿಪಾಲಕನ (ಅಲ್ಲಾಹನ) ಮಹಾತ್ಮೆಯನ್ನು ಕೊಂಡಾಡಿರಿ.
وَثِيَابَكَ فَطَهِّرۡ
ನಿಮ್ಮ ಬಟ್ಟೆಗಳನ್ನು ಶುದ್ಧವಾಗಿಡಿರಿ.
وَٱلرُّجۡزَ فَٱهۡجُرۡ
ಅಶುದ್ಧವನ್ನು ವರ್ಜಿಸಿರಿ.
وَلَا تَمۡنُن تَسۡتَكۡثِرُ
ಉಪಕಾರ ಮಾಡಿ ಹೆಚ್ಚು ಗಳಿಸುವ ವ್ಯಾಮೋಹ ಬಿಟ್ಟುಬಿಡಿ.
وَلِرَبِّكَ فَٱصۡبِرۡ
ನಿಮ್ಮ ಪರಿಪಾಲಕನ (ಅಲ್ಲಾಹನ) ಮಾರ್ಗದಲ್ಲಿ ತಾಳ್ಮೆಯಿಂದಿರಿ.
فَإِذَا نُقِرَ فِي ٱلنَّاقُورِ
ಕಹಳೆಯಲ್ಲಿ ಊದಲಾಗುವಾಗ.
فَذَٰلِكَ يَوۡمَئِذٖ يَوۡمٌ عَسِيرٌ
ಆ ದಿನವು ಅತ್ಯಂತ ಕಠಿಣ ದಿನವಾಗಿರುವುದು.
عَلَى ٱلۡكَٰفِرِينَ غَيۡرُ يَسِيرٖ
ಅದು ಸತ್ಯನಿಷೇಧಿಗಳಿಗೆ ಸುಗಮವಾಗಿರುವುದಿಲ್ಲ.
ذَرۡنِي وَمَنۡ خَلَقۡتُ وَحِيدٗا
ನನ್ನನ್ನು ಹಾಗೂ ನಾನು ಏಕಾಂಗಿಯಾಗಿ ಸೃಷ್ಟಿದವನನ್ನು ಬಿಟ್ಟುಬಿಡಿ.[1]
وَجَعَلۡتُ لَهُۥ مَالٗا مَّمۡدُودٗا
ನಾನು ಅವನಿಗೆ ಹೇರಳ ಐಶ್ವರ್ಯವನ್ನು ನೀಡಿದೆನು.
وَبَنِينَ شُهُودٗا
ಸನ್ನದ್ಧರಾಗಿರುವ ಗಂಡು ಮಕ್ಕಳನ್ನು ನೀಡಿದೆನು.
وَمَهَّدتُّ لَهُۥ تَمۡهِيدٗا
ನಾನು ಅವನಿಗೆ ಅನೇಕ ಅನುಕೂಲತೆಗಳನ್ನು ಮಾಡಿಕೊಟ್ಟೆನು.
ثُمَّ يَطۡمَعُ أَنۡ أَزِيدَ
ಆದರೂ ನಾನು ಅವನಿಗೆ ಇನ್ನೂ ಹೆಚ್ಚು ನೀಡಬೇಕೆಂದು ಅವನು ಹಾತೊರೆಯುತ್ತಾನೆ.
كَلَّآۖ إِنَّهُۥ كَانَ لِأٓيَٰتِنَا عَنِيدٗا
ಖಂಡಿತ ಇಲ್ಲ. ಅವನು ನಮ್ಮ ವಚನಗಳ ವಿರೋಧಿಯಾಗಿದ್ದಾನೆ.
سَأُرۡهِقُهُۥ صَعُودًا
ಸದ್ಯವೇ ನಾನು ಅವನನ್ನು ಒಂದು ಪ್ರಯಾಸಕರ ಏರುವಿಕೆಯನ್ನು ಏರುವಂತೆ ಮಾಡುವೆನು.[1]
إِنَّهُۥ فَكَّرَ وَقَدَّرَ
ಅವನು ಯೋಚಿಸಿದನು ಮತ್ತು ನಿರ್ಣಯಿಸಿದನು.
فَقُتِلَ كَيۡفَ قَدَّرَ
ಅವನು ನಾಶವಾಗಲಿ! ಅವನು ಹೇಗೆ ನಿರ್ಣಯಿಸಿದನು?
ثُمَّ قُتِلَ كَيۡفَ قَدَّرَ
ಪುನಃ ಅವನು ನಾಶವಾಗಲಿ! ಅವನು ಹೇಗೆ ನಿರ್ಣಯಿಸಿದನು?
ثُمَّ نَظَرَ
ನಂತರ ಅವನು ನೋಡಿದನು.
ثُمَّ عَبَسَ وَبَسَرَ
ನಂತರ ಅವನು ಹುಬ್ಬುಗಂಟಿಕ್ಕಿದನು ಮತ್ತು ಮುಖವನ್ನು ಸಿಂಡರಿಸಿದನು.
ثُمَّ أَدۡبَرَ وَٱسۡتَكۡبَرَ
ನಂತರ ಅವನು ಹಿಂದಡಿಯಿಟ್ಟನು ಮತ್ತು ಅಹಂಕಾರ ತೋರಿದನು.
فَقَالَ إِنۡ هَٰذَآ إِلَّا سِحۡرٞ يُؤۡثَرُ
ನಂತರ ಅವನು ಹೇಳಿದನು: “ಇದು (ಕುರ್ಆನ್) ನಕಲು ಮಾಡಲಾದ ಮಾಟಗಾರಿಕೆಯಲ್ಲದೆ ಇನ್ನೇನೂ ಅಲ್ಲ.
إِنۡ هَٰذَآ إِلَّا قَوۡلُ ٱلۡبَشَرِ
ಇದು ಕೇವಲ ಒಬ್ಬ ಮನುಷ್ಯನ ಮಾತಾಗಿದೆ.”
سَأُصۡلِيهِ سَقَرَ
ನಾನು ಸದ್ಯವೇ ಅವನನ್ನು ಸಖರ್ಗೆ (ನರಕಕ್ಕೆ) ಹಾಕುವೆನು.
وَمَآ أَدۡرَىٰكَ مَا سَقَرُ
ಸಖರ್ ಏನೆಂದು ನಿಮಗೇನು ಗೊತ್ತು?
لَا تُبۡقِي وَلَا تَذَرُ
ಅದು ಏನನ್ನೂ ಉಳಿಸುವುದಿಲ್ಲ ಮತ್ತು ಬಿಟ್ಟುಬಿಡುವುದಿಲ್ಲ.
لَوَّاحَةٞ لِّلۡبَشَرِ
ಅದು ಚರ್ಮವನ್ನು ಸುಟ್ಟು ಕರಕಲಾಗಿಸುತ್ತದೆ.
عَلَيۡهَا تِسۡعَةَ عَشَرَ
ಅದರ ಮೇಲೆ ಹತ್ತೊಂಬತ್ತು (ದೇವದೂತರುಗಳು) ಇದ್ದಾರೆ.
وَمَا جَعَلۡنَآ أَصۡحَٰبَ ٱلنَّارِ إِلَّا مَلَٰٓئِكَةٗۖ وَمَا جَعَلۡنَا عِدَّتَهُمۡ إِلَّا فِتۡنَةٗ لِّلَّذِينَ كَفَرُواْ لِيَسۡتَيۡقِنَ ٱلَّذِينَ أُوتُواْ ٱلۡكِتَٰبَ وَيَزۡدَادَ ٱلَّذِينَ ءَامَنُوٓاْ إِيمَٰنٗا وَلَا يَرۡتَابَ ٱلَّذِينَ أُوتُواْ ٱلۡكِتَٰبَ وَٱلۡمُؤۡمِنُونَ وَلِيَقُولَ ٱلَّذِينَ فِي قُلُوبِهِم مَّرَضٞ وَٱلۡكَٰفِرُونَ مَاذَآ أَرَادَ ٱللَّهُ بِهَٰذَا مَثَلٗاۚ كَذَٰلِكَ يُضِلُّ ٱللَّهُ مَن يَشَآءُ وَيَهۡدِي مَن يَشَآءُۚ وَمَا يَعۡلَمُ جُنُودَ رَبِّكَ إِلَّا هُوَۚ وَمَا هِيَ إِلَّا ذِكۡرَىٰ لِلۡبَشَرِ
ನಾವು ನರಕದ ಕಾವಲುಗಾರರಾಗಿ ಕೇವಲ ದೇವದೂತರುಗಳನ್ನು ಮಾತ್ರ ನಿಶ್ಚಯಿಸಿದ್ದೇವೆ. ನಾವು ಅವರ ಸಂಖ್ಯೆಯನ್ನು ಸತ್ಯನಿಷೇಧಿಗಳಿಗೆ ಒಂದು ಪರೀಕ್ಷೆಯಾಗಿ ಮಾಡಿದ್ದೇವೆ.[1] ಇದೇಕೆಂದರೆ, ಗ್ರಂಥ ನೀಡಲಾದವರಿಗೆ ದೃಢವಿಶ್ವಾಸ ಉಂಟಾಗಲೆಂದು[2] ಮತ್ತು ಸತ್ಯವಿಶ್ವಾಸಿಗಳ ವಿಶ್ವಾಸವು ಇನ್ನಷ್ಟು ಹೆಚ್ಚಾಗಲೆಂದು. ಅದೇ ರೀತಿ ಗ್ರಂಥ ನೀಡಲಾದವರು ಹಾಗೂ ಸತ್ಯವಿಶ್ವಾಸಿಗಳು ಸಂಶಯ ಪಡದಿರಲೆಂದು ಮತ್ತು ಹೃದಯದಲ್ಲಿ ರೋಗವಿರುವವರು ಹಾಗೂ ಸತ್ಯನಿಷೇಧಿಗಳು, “ಈ ವಿವರಣೆಯಿಂದ ಅಲ್ಲಾಹು ಉದ್ದೇಶಿಸುವುದೇನು?” ಎಂದು ಕೇಳಲೆಂದು. ಈ ರೀತಿ ಅಲ್ಲಾಹು ಅವನು ಇಚ್ಛಿಸಿದವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸಿದವರಿಗೆ ಸನ್ಮಾರ್ಗ ತೋರಿಸುತ್ತಾನೆ. ನಿಮ್ಮ ಪರಿಪಾಲಕನ (ಅಲ್ಲಾಹನ) ಸೈನ್ಯವನ್ನು ಅವನ ಹೊರತು ಯಾರೂ ತಿಳಿದಿಲ್ಲ. ಅದು (ನರಕ) ಮನುಷ್ಯರಿಗೆ ಒಂದು ಉಪದೇಶವಲ್ಲದೆ ಇನ್ನೇನೂ ಅಲ್ಲ.
كَلَّا وَٱلۡقَمَرِ
ಇಲ್ಲ; ಚಂದ್ರನ ಮೇಲಾಣೆ!
وَٱلَّيۡلِ إِذۡ أَدۡبَرَ
ರಾತ್ರಿಯ ಮೇಲಾಣೆ! ಅದು ಹಿಂದಕ್ಕೆ ಸರಿಯುವಾಗ.
وَٱلصُّبۡحِ إِذَآ أَسۡفَرَ
ಬೆಳಗ್ಗಿನ ಮೇಲಾಣೆ! ಅದು ಬೆಳಗುವಾಗ.
إِنَّهَا لَإِحۡدَى ٱلۡكُبَرِ
ನಿಶ್ಚಯವಾಗಿಯೂ ಅದು (ನರಕ) ಮಹಾ ವಿಷಯಗಳಲ್ಲಿ ಒಂದಾಗಿದೆ.
نَذِيرٗا لِّلۡبَشَرِ
ಮನುಷ್ಯರಿಗೆ ಒಂದು ಮುನ್ನೆಚ್ಚರಿಕೆಯಾಗಿದೆ.
لِمَن شَآءَ مِنكُمۡ أَن يَتَقَدَّمَ أَوۡ يَتَأَخَّرَ
ಅಂದರೆ ನಿಮ್ಮಲ್ಲಿ ಮುಂದಕ್ಕೆ ಬರಲು ಅಥವಾ ಹಿಂದೆಯೇ ಉಳಿಯಲು ಇಚ್ಛಿಸುವವರಿಗೆ.
كُلُّ نَفۡسِۭ بِمَا كَسَبَتۡ رَهِينَةٌ
ಪ್ರತಿಯೊಬ್ಬ ವ್ಯಕ್ತಿಯೂ ತನ್ನ ಕರ್ಮಗಳಿಗೆ ಅಡಮಾನವಾಗಿದ್ದಾನೆ.[1]
إِلَّآ أَصۡحَٰبَ ٱلۡيَمِينِ
ಬಲಭಾಗದ ಜನರ ಹೊರತು.
فِي جَنَّٰتٖ يَتَسَآءَلُونَ
ಅವರು ಸ್ವರ್ಗೋದ್ಯಾನಗಳಲ್ಲಿ (ಕುಳಿತು) ಪರಸ್ಪರ ವಿಚಾರಿಸುವರು.
عَنِ ٱلۡمُجۡرِمِينَ
ಅಪರಾಧಿಗಳ ಕುರಿತು.
مَا سَلَكَكُمۡ فِي سَقَرَ
ನಿಮ್ಮನ್ನು ನರಕದಲ್ಲಿ ಬೀಳಿಸಿದ್ದೇನು?
قَالُواْ لَمۡ نَكُ مِنَ ٱلۡمُصَلِّينَ
ಅವರು ಹೇಳುವರು: “ನಾವು ನಮಾಝ್ ಮಾಡುವವರಾಗಿರಲಿಲ್ಲ.
وَلَمۡ نَكُ نُطۡعِمُ ٱلۡمِسۡكِينَ
ನಾವು ಬಡವರಿಗೆ ಆಹಾರ ನೀಡುತ್ತಿರಲಿಲ್ಲ.
وَكُنَّا نَخُوضُ مَعَ ٱلۡخَآئِضِينَ
ನಾವು ಅನಗತ್ಯ ಮಾತುಕತೆ ನಡೆಸುವವರ (ಸತ್ಯನಿಷೇಧಿಗಳ) ಜೊತೆಗೆ ಅನಗತ್ಯ ಮಾತುಗಳಲ್ಲಿ ತಲ್ಲೀನರಾಗಿದ್ದೆವು.
وَكُنَّا نُكَذِّبُ بِيَوۡمِ ٱلدِّينِ
ನಾವು ಪ್ರತಿಫಲದ ದಿನವನ್ನು ನಿಷೇಧಿಸುತ್ತಿದ್ದೆವು.
حَتَّىٰٓ أَتَىٰنَا ٱلۡيَقِينُ
ಎಲ್ಲಿಯವರೆಗೆಂದರೆ ನಮಗೆ ಸಾವು ಬರುವ ತನಕ.”
فَمَا تَنفَعُهُمۡ شَفَٰعَةُ ٱلشَّٰفِعِينَ
ಅವರಿಗೆ ಶಿಫಾರಸುಗಾರರ ಶಿಫಾರಸು ಪ್ರಯೋಜನಪಡುವುದಿಲ್ಲ.
فَمَا لَهُمۡ عَنِ ٱلتَّذۡكِرَةِ مُعۡرِضِينَ
ಅವರಿಗೇನಾಗಿದೆ? ಅವರೇಕೆ ಉಪದೇಶದಿಂದ ವಿಮುಖರಾಗುತ್ತಿದ್ದಾರೆ?
كَأَنَّهُمۡ حُمُرٞ مُّسۡتَنفِرَةٞ
ಅವರು ಗಾಬರಿಗೊಂಡ ಕತ್ತೆಗಳೋ ಎಂಬಂತೆ.
فَرَّتۡ مِن قَسۡوَرَةِۭ
ಸಿಂಹವನ್ನು ಕಂಡು ಪಲಾಯನ ಮಾಡಿದ.
بَلۡ يُرِيدُ كُلُّ ٱمۡرِيٕٖ مِّنۡهُمۡ أَن يُؤۡتَىٰ صُحُفٗا مُّنَشَّرَةٗ
ಅಲ್ಲ, ವಾಸ್ತವವಾಗಿ ಅವರಲ್ಲಿ ಪ್ರತಿಯೊಬ್ಬನೂ ತನಗೆ ತೆರೆದಿಟ್ಟ ಧರ್ಮಗ್ರಂಥಗಳು ಸಿಗಬೇಕೆಂದು ಬಯಸುತ್ತಾನೆ.
كَلَّاۖ بَل لَّا يَخَافُونَ ٱلۡأٓخِرَةَ
ಇಲ್ಲ; ವಾಸ್ತವವಾಗಿ ಅವರು ಪರಲೋಕವನ್ನು ಭಯಪಡುವುದಿಲ್ಲ.
كَلَّآ إِنَّهُۥ تَذۡكِرَةٞ
ಖಂಡಿತ ಇಲ್ಲ. ನಿಶ್ಚಯವಾಗಿಯೂ ಇದು (ಕುರ್ಆನ್) ಉಪದೇಶವಾಗಿದೆ.
فَمَن شَآءَ ذَكَرَهُۥ
ಇಷ್ಟವಿರುವವರು ಅದರಿಂದ ಉಪದೇಶವನ್ನು ಪಡೆದುಕೊಳ್ಳಲಿ.
وَمَا يَذۡكُرُونَ إِلَّآ أَن يَشَآءَ ٱللَّهُۚ هُوَ أَهۡلُ ٱلتَّقۡوَىٰ وَأَهۡلُ ٱلۡمَغۡفِرَةِ
ಆದರೆ ಅಲ್ಲಾಹು ಇಚ್ಛಿಸಿದ ಹೊರತು ಅವರು ಅದರಿಂದ ಉಪದೇಶ ಪಡೆಯುವುದಿಲ್ಲ. ಅವನು ಭಯಪಡಲು ಅರ್ಹನಾಗಿದ್ದಾನೆ ಮತ್ತು ಕ್ಷಮಿಸಲು ಅರ್ಹನಾಗಿದ್ದಾನೆ.
share_via